ಡೆವಿಲ್ ದಿ ಹೀರೋ ಫೋಸ್ಟರ್ 
ಸಿನಿಮಾ ಸುದ್ದಿ

'ಡೆವಿಲ್-ದಿ ಹೀರೋ' ಚಿತ್ರೀಕರಣಕ್ಕೂ ಮುನ್ನವೇ ಭರ್ಜರಿ ಬೆಲೆಗೆ ಚಿತ್ರದ ಆಡಿಯೋ ಹಕ್ಕು ಮಾರಾಟ!

ಕಾಟೇರ ಚಿತ್ರದ ಮೂಲಕ ಬ್ಲಾಕ್ ಬಸ್ಟರ್ ಹಿಟ್ ನೀಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮುಂದಿನ ಚಿತ್ರ ಡೆವಿಲ್-ದಿ ಹೀರೋ ಈಗಾಗಲೇ ಭಾರಿ ಸದ್ದು ಮಾಡುತ್ತಿದೆ. ಪ್ರಕಾಶ್ ವೀರ್ ನಿರ್ದೇಶನದ ಈ ಚಿತ್ರದ ಘೋಷಣೆಯಾದಾಗಿನಿಂದ ಸಖತ್ ಸೌಂಡ್ ಮಾಡುತ್ತಿದೆ.

ಕಾಟೇರ ಚಿತ್ರದ ಮೂಲಕ ಬ್ಲಾಕ್ ಬಸ್ಟರ್ ಹಿಟ್ ನೀಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮುಂದಿನ ಚಿತ್ರ ಡೆವಿಲ್-ದಿ ಹೀರೋ ಈಗಾಗಲೇ ಭಾರಿ ಸದ್ದು ಮಾಡುತ್ತಿದೆ. ಪ್ರಕಾಶ್ ವೀರ್ ನಿರ್ದೇಶನದ ಈ ಚಿತ್ರದ ಘೋಷಣೆಯಾದಾಗಿನಿಂದ ಸಖತ್ ಸೌಂಡ್ ಮಾಡುತ್ತಿದೆ.

ಇತ್ತೀಚಿನ ವರದಿ ಪ್ರಕಾರ, ಇನ್ನೂ ಚಿತ್ರೀಕರಣ ಶುರುವಾಗದಿದ್ದರೂ ಈಗಾಗಲೇ ಚಿತ್ರದ ಆಡಿಯೊ ಹಕ್ಕುಗಳನ್ನು ಜನಪ್ರಿಯ ಸರಿಗಮ - ಸೌತ್‌ಗೆ ಭಾರಿ ಬೆಲೆಗೆ ಮಾರಾಟ ಮಾಡಲಾಗಿದೆ. "ಸರಿಗಮದಂತಹ ಹೆಸರಾಂತ ಮ್ಯೂಸಿಕ್ ಕಂಪನಿ ಚಿತ್ರದ ಹಕ್ಕುಗಳನ್ನು ಖರೀದಿಸಲು ಆಸಕ್ತಿ ತೋರಿಸಿದೆ ಎಂಬುದು ನಮಗೆ ಸಂತೋಷವಾಗಿದೆ. ಸಾಕಷ್ಟು ಬೇಡಿಕೆ ಇತ್ತು. ವಿವಿಧ ಸಂಗೀತ ಕಂಪನಿಗಳಿಂದ ಬೇಡಿಕೆ ಬಂದಿತ್ತು. ಆದರೆ ಅಂತಿಮವಾಗಿ, ಈ ಸಂಗೀತ ಕಂಪನಿಗೆ ಆಡಿಯೋ ಹಕ್ಕು ಮಾರಾಟ ಮಾಡಿರುವುದಾಗಿ ಪ್ರಕಾಶ್ ತಿಳಿಸಿದ್ದಾರೆ.

ಈ ಮಧ್ಯೆ ದರ್ಶನ್ ಅವರ ಹುಟ್ಟುಹಬ್ಬದ ಮುನ್ನಾದಿನದಂದು ಬಿಡುಗಡೆಯಾಗಲಿರುವ ಫಸ್ಟ್ ಲುಕ್ ಟೀಸರ್ ಅನ್ನು ತಯಾರಕರು ಪ್ರತ್ಯೇಕವಾಗಿ ಚಿತ್ರೀಕರಿಸಿದ್ದಾರೆ. ಇದು ವಿಶಿಷ್ಟವಾಗಿದೆ ಮತ್ತು ಸಂಗೀತ ಸಂಯೋಜಕ ಅಜನೀಶ್ ಲೋಕನಾಥ್ ಇದಕ್ಕಾಗಿ ಥೀಮ್ ಮ್ಯೂಸಿಕ್ ಸಂಯೋಜಿಸಿದ್ದಾರೆ" ಎಂದು ಪ್ರಕಾಶ್ ಮಾಹಿತಿ ಹಂಚಿಕೊಂಡಿದ್ದಾರೆ.

ಪ್ರೀ-ಪ್ರೊಡಕ್ಷನ್ ಕೆಲಸಗಳಲ್ಲಿ ನಿರತರಾಗಿರುವ ನಿರ್ದೇಶಕರು ನಾಯಕ ದರ್ಶನ್ ಹೊರತುಪಡಿಸಿ, ಇನ್ನೂ ನಾಯಕಿ ಮತ್ತು ಉಳಿದ ತಾರಾಗಣವನ್ನು ಅಂತಿಮಗೊಳಿಸಿಲ್ಲ ಎಂದು  ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಶೀಘ್ರದಲ್ಲೇ ಅಧಿಕೃತ ಘೋಷಣೆ ಮಾಡಲಿದ್ದಾರೆ. ಜೈ ಮಠ ಕಂಬೈನ್ಸ್ ಪ್ರಸ್ತುತಪಡಿಸುವ ಮತ್ತು ಜೆ ಜಯಮ್ಮ ಮತ್ತು ಪ್ರಕಾಶ್ ವೀರ್ ಅವರು ತಮ್ಮ ಹೋಮ್ ಬ್ಯಾನರ್‌ನಡಿಯಲ್ಲಿ ವೈಷ್ಣೋ ಸ್ಟುಡಿಯೋಸ್‌ನಲ್ಲಿ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಛಾಯಾಗ್ರಾಹಕ ಸುಧಾಕರ್ ಎಸ್ ರಾಜ್ ಮತ್ತೊಮ್ಮೆ ದರ್ಶನ್ ಅವರ ಚಿತ್ರಕ್ಕೆ ಕೈಜೋಡಿಸಿದ್ದಾರೆ. ಈ ಹಿಂದೆ ತಾರಕ್ (2017) ಗಾಗಿ ಕೈಜೋಡಿಸಿದ  ನಟ-ನಿರ್ದೇಶಕ ಜೋಡಿಗೆ ಡೆವಿಲ್-ದಿ ಹೀರೋ ಎರಡನೇ ಚಿತ್ರವಾಗಿದೆ.

ದರ್ಶನ್‌ ಚಿತ್ರರಂಗದಲ್ಲಿ 25 ವರ್ಷ ಪೂರೈಸಿದ್ದಕ್ಕಾಗಿ ಗೌರವ: ಹುಟ್ಟುಹಬ್ಬದ ಆಚರಣೆಯನ್ನು ಈಗಾಗಲೇ ಆರಂಭಿಸಿರುವ ಅಭಿಮಾನಿಗಳು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಚಿತ್ರರಂಗದಲ್ಲಿ 25 ವರ್ಷಗಳ ಪಯಣವನ್ನು ಆಚರಿಸಲು ಸಿದ್ಧತೆ ನಡೆಸಿದ್ದಾರೆ. ಲೈಟ್ ಬಾಯ್‌ನಿಂದ ಮೇಲೆಳುತ್ತಾ ಬಂದ ದರ್ಶನ್ ಮೆಜೆಸ್ಟಿಕ್‌ನೊಂದಿಗೆ ಮಾಸ್ ಹೀರೋ ಆಗಿ ಬೆಳೆದು ನಿಂತಿದ್ದಾರೆ. ಈ ಅವಧಿಯಲ್ಲಿ ಲಕ್ಷಾಂತರ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ.

ರಜತ ಮಹೋತ್ಸವ ಆಚರಣೆ  ಡಿ-25, ಫೆಬ್ರವರಿ 17 ರಂದು ಶ್ರೀರಂಗಪಟ್ಟಣದಲ್ಲಿ ನಡೆಯಲಿದೆ. ಕನ್ನಡ ಚಿತ್ರರಂಗಕ್ಕೆ ದರ್ಶನ್ ಅವರ ಮಹತ್ವದ ಕೊಡುಗೆಯನ್ನು ಗೌರವಿಸಲು ಇದು ಅವರ ಸಾವಿರಾರು ಅಭಿಮಾನಿಗಳನ್ನು, ಸ್ವತಃ ನಟರೇ ಸೆಲೆಬ್ರಿಟಿಗಳು, ಸ್ನೇಹಿತರು ಮತ್ತು ಇಂಡಸ್ಟ್ರಿಯ ಗೆಳೆಯರ ಜೊತೆಯಲ್ಲಿ ಆಚರಿಸಲಾಗುತ್ತಿದೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT