ಸುಚನ್ ಶೆಟ್ಟಿ 
ಸಿನಿಮಾ ಸುದ್ದಿ

'ಗಾಡ್ ಪ್ರಾಮಿಸ್' ಮೂಲಕ ನಿರ್ದೇಶನಕ್ಕೆ ಸುಚನ್ ಶೆಟ್ಟಿ ಎಂಟ್ರಿ!

ಸಂಗೀತ ನಿರ್ದೇಶಕ ರವಿ ಬಸ್ರೂರ್ ಗರಡಿಯಲ್ಲಿ ಪಳಗಿದ ಅನೇಕರು ಸ್ಯಾಂಡಲ್ ವುಡ್ ನಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ನಿರ್ದೇಶಕರಾಗಿ ಸುಚನ್ ಶೆಟ್ಟಿ, ಹೊಸ ಪಯಣ ಪ್ರಾರಂಭಿಸಿದ್ದಾರೆ.

ಸಂಗೀತ ನಿರ್ದೇಶಕ ರವಿ ಬಸ್ರೂರ್ ಗರಡಿಯಲ್ಲಿ ಪಳಗಿದ ಅನೇಕರು ಸ್ಯಾಂಡಲ್ ವುಡ್ ನಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ನಿರ್ದೇಶಕರಾಗಿ ಸುಚನ್ ಶೆಟ್ಟಿ, ಹೊಸ ಪಯಣ ಪ್ರಾರಂಭಿಸಿದ್ದಾರೆ.

ಕಾಂತಾರದಲ್ಲಿ ಅರಣ್ಯ ಸಿಬ್ಬಂದಿಯಾಗಿ ಮತ್ತು ಕಡಲ್‌ನಲ್ಲಿ ವಿಲನ್ ಪಾತ್ರಗಳಿಗೆ ಹೆಸರುವಾಸಿಯಾಗಿದ್ದ ಸುಚನ್ ಶೆಟ್ಟಿ ಈಗ ನಿರ್ದೇಶನಕ್ಕಿಳಿದಿದ್ದಾರೆ. ಗಾಡ್ ಪ್ರಾಮಿಸ್, ಕೌಟುಂಬಿಕ ಹಾಸ್ಯ-ನಾಟಕ ಎಂದು ವಿವರಿಸಲಾಗಿದೆ. ಮೈತ್ರಿ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಮಂಜುನಾಥ್ ನಿರ್ಮಿಸಲಿದ್ದಾರೆ.

ಸುಚನ್ ಶೆಟ್ಟಿ ಈಗ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ಸುಚನ್ ಅವರ ಚೊಚ್ಚಲ ಪ್ರಯತ್ನದ ಸಿನಿಮಾಗೆ ಗಾಡ್ ಪ್ರಾಮಿಸ್ ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ. ರವಿ ಬಸ್ರೂರ್ ಸಾರಥ್ಯದ ಕಟಕ, ಗಿರ್ಮಿಟ್, ಕಡಲ್ ಸಿನಿಮಾಗಳಿಗೆ ಬಹರಗಾರನಾಗಿ, ಸಹ ನಿರ್ದೇಶಕನಾಗಿ, ನಟನಾಗಿ ಕೆಲಸ ಮಾಡಿರುವ ಸುಚನ್ ಈ ಅನುಭವದೊಂದಿಗೆ ನಿರ್ದೇಶನದ ಸಾಹಸಕ್ಕೆ ಕೈ ಹಾಕಿದ್ದಾರೆ.

ನಾನು ಆರಂಭದಲ್ಲಿ ನಟನಾಗುವ ಗುರಿಯೊಂದಿಗೆ ಚಿತ್ರರಂಗಕ್ಕೆ ಪ್ರವೇಶಿಸಿದೆ, ಆದರೆ ನಾನು ರವಿ ಬಸ್ರೂರ್ ಅವರ ಮಾರ್ಗದರ್ಶನದಲ್ಲಿ ಕೆಲಸ ಮಾಡುವ ಮೂಲಕ ನನ್ನ ಪ್ರಯಾಣವನ್ನು ಪ್ರಾರಂಭಿಸಿದೆ. ನಾನು ಅವರ ನಿರ್ದೇಶನದ ಯೋಜನೆಗಳಾದ ಕಟಕ, ಗಿರ್ಮಿಟ್ ಮತ್ತು ಅವರ ಇತ್ತೀಚಿನ ಕಡಲ್‌ನಲ್ಲಿ ನಾನು ಅವರಿಗೆ ಸಹಾಯ ಮಾಡಿದ್ದೆ, ಅಲ್ಲಿ ನಾನು ಬರವಣಿಗೆ ಮತ್ತು ನಿರ್ದೇಶನದಲ್ಲಿ ತೊಡಗಿಸಿಕೊಂಡಿದ್ದೇನೆ ಎಂದು ಸಿನಿಮಾ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

ಗಾಡ್ ಪ್ರಾಮಿಸ್  ಮೊದಲಿಗೆ ಕಿರುಚಿತ್ರವಾಗಿ ಪ್ಲಾನ್ ಮಾಡಲಾಗಿತ್ತು. ಆದರೆ ರವಿ ಬಸ್ರೂರ್ ಅವರೇ ಅದನ್ನು ಪೂರ್ಣ ಪ್ರಮಾಣದ ಸಿನಿಮಾವಾಗಿ ಪರಿವರ್ತಿಸಲು ಒತ್ತಾಯಿಸಿದರು ಎಂದು ತಮ್ಮ ಸಿನಿಮಾ ಜರ್ನಿ ಬಗ್ಗೆ ವಿವರಿಸಿದ್ದಾರೆ.

ಕಲಾವಿದರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು, ಈಗಾಗಲೇ ತಂತ್ರಜ್ಞರನ್ನು ಆಯ್ಕೆ ಮಾಡಿದ್ದಾರೆ. 400 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ವಿವಿಧ ಸಂಗೀತಗಾರರಿಗೆ ಸಹಾಯ ಮಾಡಿರುವ ಭರತ್ ಮಧುಸೂದನನ್ ಈ ಚಿತ್ರದ ಮೂಲಕ ಸಂಗೀತ ಸಂಯೋಜಕರಾಗಿ ಪಾದಾರ್ಪಣೆ ಮಾಡಲಿದ್ದಾರೆ. ಗುರುಪ್ರಸಾದ್ ನಾರ್ನಾಡ್ ಮತ್ತು ನವೀನ್ ಶೆಟ್ಟಿ ಕ್ರಮವಾಗಿ ಛಾಯಾಗ್ರಹಣ ಮತ್ತು ಸಂಕಲನವನ್ನು ನಿರ್ವಹಿಸಲಿದ್ದಾರೆ. ಚಿತ್ರತಂಡ ಏಪ್ರಿಲ್‌ನಲ್ಲಿ ಶೂಟಿಂಗ್ ಆರಂಭಿಸಲು ಯೋಜಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT