ನಟ ರಂಗಾಯಣ ರಘು ಜೊತೆ ಸ್ಯಾಂಡಲ್ ವುಡ್ ನಾಯಕ ನಟಿಯರು. 
ಸಿನಿಮಾ ಸುದ್ದಿ

'ಒಂದು ಸರಳ ಪ್ರೇಮಕಥೆ'ಗೆ ಸಿನಿಪ್ರಿಯರ ಮೆಚ್ಚುಗೆ: 2ನೇ ವಾರವೂ ಉತ್ತಮ ಪ್ರದರ್ಶನ

ಡಾ. ರಾಜ್‌ಕುಮಾರ್ ಅವರ ಮೊಮ್ಮಗ ವಿನಯ್ ರಾಜ್‌ಕುಮಾರ್ ಅಭಿನಯದ 'ಒಂದು ಸರಳ ಪ್ರೇಮಕಥೆ' ಚಿತ್ರ ಬಿಡುಗಡೆಯಾಗಿದ್ದು, ಚಿತ್ರಕ್ಕೆ ಸಿನಿಪ್ರಿಯರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಕೇವಲ ಸಿನಿಪ್ರಿಯರಷ್ಟೇ ಅಲ್ಲದೆ, ಸೆಲೆಬ್ರಿಟಿಗಳೂ ಕೂಡ ಉತ್ತಮ ಪ್ರತಿಕ್ರಿಯೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

ಡಾ. ರಾಜ್‌ಕುಮಾರ್ ಅವರ ಮೊಮ್ಮಗ ವಿನಯ್ ರಾಜ್‌ಕುಮಾರ್ ಅಭಿನಯದ 'ಒಂದು ಸರಳ ಪ್ರೇಮಕಥೆ' ಚಿತ್ರ ಬಿಡುಗಡೆಯಾಗಿದ್ದು, ಚಿತ್ರಕ್ಕೆ ಸಿನಿಪ್ರಿಯರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಕೇವಲ ಸಿನಿಪ್ರಿಯರಷ್ಟೇ ಅಲ್ಲದೆ, ಸೆಲೆಬ್ರಿಟಿಗಳೂ ಕೂಡ ಉತ್ತಮ ಪ್ರತಿಕ್ರಿಯೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

ಸುನಿ ಅವರ ನಿರ್ದೇಶನ ಹಾಗೂ ವಿನಯ್ ರಾಜ್ ಕುಮಾರ್ ಅವರ ಪಾತ್ರಕ್ಕೆ ಮೆಚ್ಚುಗೆಗಳು ವ್ಯಕ್ತವಾಗುತ್ತಿವೆ. ಸಿಂಪಲ್ ಸುನಿ ತಾನೊಬ್ಬ ಉತ್ತಮ ನಿರ್ದೇಶಕ ಎನ್ನುವುದನ್ನು ಈಗಾಗಲೇ ಸಾಬೀತು ಮಾಡಿದ್ದು, ಅವರ ಬತ್ತಳಿಕೆಯಿಂದ ಬಂದ 'ಒಂದು ಸರಳ ಪ್ರೇಮಕಥೆ' ಚಿತ್ರ ಕೂಡ ಜನಕ್ಕೆ ಇಷ್ಟವಾಗಿದೆ.

ತಮ್ಮ ನವಿರಾದ ಕಚಗುಳಿ ಇಡುವ ಸಂಭಾಷಣೆ, ಉತ್ತಮ ಸಂಗೀತ, ಹಾಸ್ಯ, ಒನ್‌ಲೈನ್ ಪಂಚಿಂಗ್‌ ಡೈಲಾಗ್‌ಗಳಿಂದಲೇ ಸುನಿ ಯಶಸ್ಸು ಪಡೆದವರು. ಇಲ್ಲಿ ಕೂಡ ಸಂಗೀತ, ಪ್ರೇಮದ ಕತೆಯನ್ನು ನವಿರಾದ ಹಾಸ್ಯದ ಮೂಲಕ ಹೇಳಿ ಗೆಲುವು ಪಡೆದಿದ್ದಾರೆ.

ಮೊದಲನೇ ವಾರ ಚಿತ್ರ ಯಶಸ್ವಿ ಪ್ರದರ್ಶನ ಕಂಡಿದ್ದು, ಎರಡನೇ ವಾರಕ್ಕೆ ಕಾಲಿಟ್ಟಿದೆ. ಚಿತ್ರಮಂದಿರಗಳಲ್ಲಿ ಪ್ರೇಕ್ಷಕರ ಸಂಖ್ಯೆ ಹೆಚ್ಚಳ ಕಂಡಿದ್ದು, ಇದು ಚಿತ್ರತಂಡಕ್ಕೆ ಹುರುಪು ನೀಡಿದೆ.

ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಸಂತಸದಲ್ಲಿರುವ ಚಿತ್ರತಂಡ, ಮತ್ತೊಂದು ಹೊಸ ಚಿತ್ರಕ್ಕೆ ಕೈಜೋಡಿಸುವ ಇಂಗಿತ ವ್ಯಕ್ತಪಡಿಸಿದೆ. ಶೀಘ್ರದಲ್ಲೇ ಚಿತ್ರದ ಕುರಿತು ಮಾಹಿತಿ ನೀಡುವುದಾಗಿ ತಿಳಿಸಿದೆ.

ಸಿಂಪಲ್ ಸುನಿ ನಿರ್ದೇಶನದ ಒಂದು ಸರಳ ಪ್ರೇಮಕಥೆ ಸಿನಿಮಾದಲ್ಲಿ ವಿನಯ್ ರಾಜ್​​ಕು​ಮಾರ್ ನಾಯಕನಾಗಿ, 'ರಾಧಾ ಕೃಷ್ಣ' ಧಾರಾವಾಹಿ ಖ್ಯಾತಿಯ ಮಲ್ಲಿಕಾ ಸಿಂಗ್, ಸ್ವಾತಿಷ್ಠ ಕೃಷ್ಣನ್ ನಾಯಕಿಯರಾಗಿ ನಟಿಸಿದ್ದಾರೆ. ರಾಘವೇಂದ್ರ ರಾಜ್​​ಮಾರ್ ಅವರು ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ.

ರಾಜೇಶ್ ನಟರಂಗ, ಅರುಣಾ ಬಾಲರಾಜ್, ಸಾಧುಕೋಕಿಲ ಸೇರಿದಂತೆ ಹಲವರಿದ್ದಾರೆ. ಆದಿ ಅವರ ಸಂಕಲನವಿದ್ದು, ಹಾಡುಗಳಿಗೆ ವೀರ್ ಸಮರ್ಥ್ ಸಂಗೀತ ಹಾಗೂ ಕಾರ್ತಿಕ್ ಅವರ ಕ್ಯಾಮರಾ ಶ್ರಮವಿದೆ. ರಾಮ್ ಮೂವೀಸ್ ಬ್ಯಾನರ್ ಅಡಿ ಮೈಸೂರು ರಮೇಶ್ ಬಂಡವಾಳ ಹೂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT