ನಿದ್ರಾದೇವಿ ನೆಕ್ಸ್ಟ್ ಡೋರ್ ಚಿತ್ರತಂಡ 
ಸಿನಿಮಾ ಸುದ್ದಿ

'ನಿದ್ರಾದೇವಿ ನೆಕ್ಸ್ಟ್ ಡೋರ್' ನಿರ್ದೇಶನದ ಮೂಲಕ ಸ್ಯಾಂಡಲ್‌ವುಡ್‌ಗೆ ಸುರಾಗ್ ಸಾಗರ್ ಪದಾರ್ಪಣೆ

ಯುರೋಪ್‌ನ ಪ್ರೇಗ್ ಫಿಲ್ಮ್ ಸ್ಕೂಲ್‌ನಲ್ಲಿ ನಿರ್ದೇಶನ ಮತ್ತು ಚಿತ್ರಕಥೆಯಲ್ಲಿ ಪರಿಣತಿ ಪಡೆದ ಸುರಾಗ್ ಸಾಗರ್, ತಮ್ಮ ಪ್ರಶಸ್ತಿ ವಿಜೇತ ಕಿರುಚಿತ್ರ ಎಂಟ್ರೋಪಿಯೊಂದಿಗೆ ಗಮನ ಸೆಳೆದರು. ಸುರಾಗ್ ಇದೀಗ 'ನಿದ್ರಾದೇವಿ ನೆಕ್ಸ್ಟ್ ಡೋರ್' ಚಿತ್ರದ ಮೂಲಕ ತಮ್ಮ ನಿರ್ದೇಶಕರಾಗಿ ಪದಾರ್ಪಣೆ ಮಾಡಲು ಸಿದ್ಧರಾಗಿದ್ದಾರೆ.

ಯುರೋಪ್‌ನ ಪ್ರೇಗ್ ಫಿಲ್ಮ್ ಸ್ಕೂಲ್‌ನಲ್ಲಿ ನಿರ್ದೇಶನ ಮತ್ತು ಚಿತ್ರಕಥೆಯಲ್ಲಿ ಪರಿಣತಿ ಪಡೆದ ಸುರಾಗ್ ಸಾಗರ್, ತಮ್ಮ ಪ್ರಶಸ್ತಿ ವಿಜೇತ ಕಿರುಚಿತ್ರ ಎಂಟ್ರೋಪಿಯೊಂದಿಗೆ ಗಮನ ಸೆಳೆದರು. ಈ ಹಿಂದೆ ಸಾಧು ಕೋಕಿಲಾ ಅವರ ಲೂಪ್ ಎಂಟರ್‌ಟೈನ್‌ಮೆಂಟ್‌ನಲ್ಲಿ ಸೃಜನಶೀಲ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಸುರಾಗ್ ಇದೀಗ 'ನಿದ್ರಾದೇವಿ ನೆಕ್ಸ್ಟ್ ಡೋರ್' ಚಿತ್ರದ ಮೂಲಕ ತಮ್ಮ ನಿರ್ದೇಶಕರಾಗಿ ಪದಾರ್ಪಣೆ ಮಾಡಲು ಸಿದ್ಧರಾಗಿದ್ದಾರೆ. ಚಿತ್ರವು ನಿದ್ರಾಹೀನತೆ, ಆಘಾತದ ಬಂಧ ಮತ್ತು ಕ್ಷಮೆಯ ಶಕ್ತಿಯಂತಹ ವಿಷಯಗಳ ಕುರಿತು ಹೇಳುತ್ತದೆ.

ಸುರಾಗ್ ಅವರು 'ನಿದ್ರಾದೇವಿ ನೆಕ್ಸ್ಟ್ ಡೋರ್‌'ಗೆ ಆಕರ್ಷಕ ಪಾತ್ರವರ್ಗವನ್ನು ಒಟ್ಟುಗೂಡಿಸಿದ್ದು, ಪ್ರವೀರ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರವೀರ್ ಸದ್ಯ ನಿರ್ಮಾಣದಲ್ಲಿರುವ ಎಂಗೇಜ್‌ಮೆಂಟ್ ಎಂಬ ದ್ವಿಭಾಷಾ ಸಿನಿಮಾದಲ್ಲಿಯೂ ಕೆಲಸ ಮಾಡುತ್ತಿದ್ದಾರೆ. ಬಿಗ್ ಬಾಸ್ ಕನ್ನಡ ವಿನ್ನರ್ ಶೈನ್ ಶೆಟ್ಟಿ ಮತ್ತು ಜುನಿ ಚಿತ್ರದಲ್ಲಿನ ಪಾತ್ರಕ್ಕಾಗಿ ಮೆಚ್ಚುಗೆ ಪಡೆದ ರಿಷಿಕಾ ನಾಯಕ್ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇನ್ನುಳಿದಂತೆ ಸುಧಾರಾಣಿ, ಶ್ರೀವತ್ಸ, ಕಾರ್ತಿಕ್ ಪತ್ತಾರ್ ಮತ್ತು ಅನುರಾಗ್ ಪಾಟೀಲ್ ಸೇರಿದಂತೆ ಇತರರು ಇದ್ದಾರೆ.

ರಾಜು ಬೋನಗಾನಿ ಅವರ ರೋಡಿಯಂ ಎಂಟರ್‌ಟೈನ್‌ಮೆಂಟ್ ಸಹಯೋಗದೊಂದಿಗೆ ಸೂರಂ ಮೂವೀಸ್ ಬ್ಯಾನರ್‌ನಡಿಯಲ್ಲಿ ಜಯರಾಮ್ ದೇವಸಮುದ್ರ ನಿರ್ಮಿಸಿರುವ ಈ ಚಿತ್ರಕ್ಕೆ ಅಜಯ್ ಕುಲಕರ್ಣಿ ಅವರ ಛಾಯಾಗ್ರಹಣ ಮತ್ತು ನಕುಲ್ ಅಭ್ಯಂಕರ್ ಅವರ ಸಂಗೀತವಿದೆ.

ತಾರಾಗಣ ಮತ್ತು ತಂತ್ರಜ್ಞರೊಂದಿಗೆ, ಸೋಮವಾರ ನಡೆದ ಮುಹೂರ್ತ ಸಮಾರಂಭದಲ್ಲಿ ಸಿನಿಮಾ ಅಧಿಕೃತವಾಗಿ ಸೆಟ್ಟೇರಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೇವನಹಳ್ಳಿಯ 1,777 ಎಕರೆ ಜಮೀನು 'ಶಾಶ್ವತ ವಿಶೇಷ ಕೃಷಿ ವಲಯ'; ಭೂಮಿ ಮಾರಾಟಕ್ಕೆ ಕಡಿವಾಣ ಇಲ್ಲ: ಸರ್ಕಾರ

Indigo ವಿರುದ್ಧ ದಿಟ್ಟ ಕ್ರಮ: ವಿಮಾನ ಕಾರ್ಯಾಚರಣೆಯಲ್ಲಿ ಶೇ.10ರಷ್ಟು ಕಡಿತಕ್ಕೆ ಕೇಂದ್ರ ಸರ್ಕಾರ ಆದೇಶ!

Microsoft ಮೆಗಾ ಹೂಡಿಕೆ: 'AI 1st ಫ್ಯೂಚರ್'ಗಾಗಿ 1.5 ಲಕ್ಷ ಕೋಟಿ ರೂ ಬಂಡವಾಳ; ಬೆಂಗಳೂರಿನಲ್ಲಿ AI ಘಟಕ!

1st T20I: ಹಾರ್ದಿಕ್ ಪಾಂಡ್ಯಾ ಏಕಾಂಗಿ ಹೋರಾಟ; ದಕ್ಷಿಣ ಆಫ್ರಿಕಾ ಗೆ 176 ರನ್ ಗುರಿ!

'ಸಮಾನ ಭಾರತದ ಕಲ್ಪನೆ RSS ಕಂಗೆಡಿಸಿದೆ': ಲೋಕಸಭೆಯಲ್ಲಿ ರಾಹುಲ್ ಗಾಂಧಿ ಟೀಕೆ

SCROLL FOR NEXT