ನಿದ್ರಾದೇವಿ ನೆಕ್ಸ್ಟ್ ಡೋರ್ ಚಿತ್ರತಂಡ 
ಸಿನಿಮಾ ಸುದ್ದಿ

'ನಿದ್ರಾದೇವಿ ನೆಕ್ಸ್ಟ್ ಡೋರ್' ನಿರ್ದೇಶನದ ಮೂಲಕ ಸ್ಯಾಂಡಲ್‌ವುಡ್‌ಗೆ ಸುರಾಗ್ ಸಾಗರ್ ಪದಾರ್ಪಣೆ

ಯುರೋಪ್‌ನ ಪ್ರೇಗ್ ಫಿಲ್ಮ್ ಸ್ಕೂಲ್‌ನಲ್ಲಿ ನಿರ್ದೇಶನ ಮತ್ತು ಚಿತ್ರಕಥೆಯಲ್ಲಿ ಪರಿಣತಿ ಪಡೆದ ಸುರಾಗ್ ಸಾಗರ್, ತಮ್ಮ ಪ್ರಶಸ್ತಿ ವಿಜೇತ ಕಿರುಚಿತ್ರ ಎಂಟ್ರೋಪಿಯೊಂದಿಗೆ ಗಮನ ಸೆಳೆದರು. ಸುರಾಗ್ ಇದೀಗ 'ನಿದ್ರಾದೇವಿ ನೆಕ್ಸ್ಟ್ ಡೋರ್' ಚಿತ್ರದ ಮೂಲಕ ತಮ್ಮ ನಿರ್ದೇಶಕರಾಗಿ ಪದಾರ್ಪಣೆ ಮಾಡಲು ಸಿದ್ಧರಾಗಿದ್ದಾರೆ.

ಯುರೋಪ್‌ನ ಪ್ರೇಗ್ ಫಿಲ್ಮ್ ಸ್ಕೂಲ್‌ನಲ್ಲಿ ನಿರ್ದೇಶನ ಮತ್ತು ಚಿತ್ರಕಥೆಯಲ್ಲಿ ಪರಿಣತಿ ಪಡೆದ ಸುರಾಗ್ ಸಾಗರ್, ತಮ್ಮ ಪ್ರಶಸ್ತಿ ವಿಜೇತ ಕಿರುಚಿತ್ರ ಎಂಟ್ರೋಪಿಯೊಂದಿಗೆ ಗಮನ ಸೆಳೆದರು. ಈ ಹಿಂದೆ ಸಾಧು ಕೋಕಿಲಾ ಅವರ ಲೂಪ್ ಎಂಟರ್‌ಟೈನ್‌ಮೆಂಟ್‌ನಲ್ಲಿ ಸೃಜನಶೀಲ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಸುರಾಗ್ ಇದೀಗ 'ನಿದ್ರಾದೇವಿ ನೆಕ್ಸ್ಟ್ ಡೋರ್' ಚಿತ್ರದ ಮೂಲಕ ತಮ್ಮ ನಿರ್ದೇಶಕರಾಗಿ ಪದಾರ್ಪಣೆ ಮಾಡಲು ಸಿದ್ಧರಾಗಿದ್ದಾರೆ. ಚಿತ್ರವು ನಿದ್ರಾಹೀನತೆ, ಆಘಾತದ ಬಂಧ ಮತ್ತು ಕ್ಷಮೆಯ ಶಕ್ತಿಯಂತಹ ವಿಷಯಗಳ ಕುರಿತು ಹೇಳುತ್ತದೆ.

ಸುರಾಗ್ ಅವರು 'ನಿದ್ರಾದೇವಿ ನೆಕ್ಸ್ಟ್ ಡೋರ್‌'ಗೆ ಆಕರ್ಷಕ ಪಾತ್ರವರ್ಗವನ್ನು ಒಟ್ಟುಗೂಡಿಸಿದ್ದು, ಪ್ರವೀರ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರವೀರ್ ಸದ್ಯ ನಿರ್ಮಾಣದಲ್ಲಿರುವ ಎಂಗೇಜ್‌ಮೆಂಟ್ ಎಂಬ ದ್ವಿಭಾಷಾ ಸಿನಿಮಾದಲ್ಲಿಯೂ ಕೆಲಸ ಮಾಡುತ್ತಿದ್ದಾರೆ. ಬಿಗ್ ಬಾಸ್ ಕನ್ನಡ ವಿನ್ನರ್ ಶೈನ್ ಶೆಟ್ಟಿ ಮತ್ತು ಜುನಿ ಚಿತ್ರದಲ್ಲಿನ ಪಾತ್ರಕ್ಕಾಗಿ ಮೆಚ್ಚುಗೆ ಪಡೆದ ರಿಷಿಕಾ ನಾಯಕ್ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇನ್ನುಳಿದಂತೆ ಸುಧಾರಾಣಿ, ಶ್ರೀವತ್ಸ, ಕಾರ್ತಿಕ್ ಪತ್ತಾರ್ ಮತ್ತು ಅನುರಾಗ್ ಪಾಟೀಲ್ ಸೇರಿದಂತೆ ಇತರರು ಇದ್ದಾರೆ.

ರಾಜು ಬೋನಗಾನಿ ಅವರ ರೋಡಿಯಂ ಎಂಟರ್‌ಟೈನ್‌ಮೆಂಟ್ ಸಹಯೋಗದೊಂದಿಗೆ ಸೂರಂ ಮೂವೀಸ್ ಬ್ಯಾನರ್‌ನಡಿಯಲ್ಲಿ ಜಯರಾಮ್ ದೇವಸಮುದ್ರ ನಿರ್ಮಿಸಿರುವ ಈ ಚಿತ್ರಕ್ಕೆ ಅಜಯ್ ಕುಲಕರ್ಣಿ ಅವರ ಛಾಯಾಗ್ರಹಣ ಮತ್ತು ನಕುಲ್ ಅಭ್ಯಂಕರ್ ಅವರ ಸಂಗೀತವಿದೆ.

ತಾರಾಗಣ ಮತ್ತು ತಂತ್ರಜ್ಞರೊಂದಿಗೆ, ಸೋಮವಾರ ನಡೆದ ಮುಹೂರ್ತ ಸಮಾರಂಭದಲ್ಲಿ ಸಿನಿಮಾ ಅಧಿಕೃತವಾಗಿ ಸೆಟ್ಟೇರಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT