ಹೈಡ್ & ಸೀಕ್ ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

ಅನೂಪ್ ರೇವಣ್ಣ, ಧನ್ಯಾ ರಾಮ್‌ಕುಮಾರ್ ಅಭಿನಯದ 'ಹೈಡ್ & ಸೀಕ್' ಬಿಡುಗಡೆ ದಿನಾಂಕ ಘೋಷಣೆ

ಸಿವಿಲ್ ಇಂಜಿನಿಯರ್ ಆಗಿರುವ ಪುನೀತ್ ನಾಗರಾಜ್ ಅವರು ದಶಕವನ್ನು ಸಹಾಯಕ ನಿರ್ದೇಶಕರಾಗಿ ಕಳೆದರು. ಇದೀಗ ಅವರು ಹೈಡ್ & ಸೀಕ್ ಚಿತ್ರದ ಮೂಲಕ ಸಿನಿಮಾ ನಿರ್ದೇಶಕರಾಗಿ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡುತ್ತಿದ್ದಾರೆ. ಚಿತ್ರದಲ್ಲಿ ಅನೂಪ್ ರೇವಣ್ಣ ಮತ್ತು ಧನ್ಯಾ ರಾಮ್‌ಕುಮಾರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಸಿವಿಲ್ ಇಂಜಿನಿಯರ್ ಆಗಿರುವ ಪುನೀತ್ ನಾಗರಾಜ್ ಅವರು ದಶಕವನ್ನು ಸಹಾಯಕ ನಿರ್ದೇಶಕರಾಗಿ ಕಳೆದರು. ಇದೀಗ ಅವರು ಹೈಡ್ & ಸೀಕ್ ಚಿತ್ರದ ಮೂಲಕ ಸಿನಿಮಾ ನಿರ್ದೇಶಕರಾಗಿ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡುತ್ತಿದ್ದಾರೆ. ಚಿತ್ರವು ಸಸ್ಪೆನ್ಸ್ ಥ್ರಿಲ್ಲರ್ ಎಂದು ಬಿಂಬಿಸಲಾಗಿದ್ದು, ಅನೂಪ್ ರೇವಣ್ಣ ಮತ್ತು ಧನ್ಯಾ ರಾಮ್‌ಕುಮಾರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಅನೂಪ್ ಅವರ ತಂದೆ ಎಚ್‌ಎಂ ರೇವಣ್ಣ, ರಾಮಲಿಂಗಾ ರೆಡ್ಡಿ ಮತ್ತು ವಿಶ್ವನಾಥ್ ಸೇರಿದಂತೆ ರಾಜಕಾರಣಿಗಳು ಮತ್ತು ಹಿರಿಯ ಪ್ರಾಧ್ಯಾಪಕ ಡಾ. ಕೆ ರವಿ ಸೇರಿದಂತೆ ಇತರರು ಭಾಗವಹಿಸಿದ್ದ ಭವ್ಯ ಸಮಾರಂಭದಲ್ಲಿ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿದೆ. ಚಿತ್ರವು ಮಾರ್ಚ್ 15 ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿದೆ ಎಂದು ಅಧಿಕೃತ ಘೋಷಣೆ ಮಾಡಲಾಗಿದೆ.

ಸಂದರ್ಶನವೊಂದರಲ್ಲಿ ಮಾತನಾಡಿದ್ದ ಪುನೀತ್ ನಾಗರಾಜ್, ಹೈಡ್ & ಸೀಕ್ ಅಪಹರಣದ ಸುತ್ತ ಕೇಂದ್ರೀಕೃತವಾಗಿರುವ ಕಾಲ್ಪನಿಕ ಕಥೆಯಾಗಿದೆ. ಎಲ್ಲವೂ ಒಂದು ವಾರದೊಳಗೆ ನಡೆಯುತ್ತದೆ. 'ಅಪಹರಣಕಾರರ ಗ್ಯಾಂಗ್ ಅವರ ನಡುವೆ ನಿಗೂಢವಾಗಿ ಇರುವ ವ್ಯಕ್ತಿಯೊಂದಿಗೆ ಕಾರ್ಯನಿರ್ವಹಿಸುವ ಜಗತ್ತನ್ನು ಚಿತ್ರ ತೆರೆದಿಡುತ್ತದೆ'. ಅನೂಪ್ ಅವರ ಪಾತ್ರವು ಈ ಗ್ಯಾಂಗ್‌ನ ಸದಸ್ಯರಲ್ಲಿ ಒಬ್ಬರಾಗಿದ್ದು, ಚಿತ್ರದ ನಿರೂಪಣೆಯು ಅವರ ಸಂಘಟನೆಯ ಸಂಕೀರ್ಣತೆಗಳು ಮತ್ತು ಅವರು ಎದುರಿಸುತ್ತಿರುವ ಸವಾಲುಗಳನ್ನು ಪರಿಶೋಧಿಸುತ್ತದೆ ಎನ್ನುತ್ತಾರೆ.

ವಸಂತರಾವ್ ಎಂ ಕುಲಕರ್ಣಿ ನಿರ್ಮಿಸಿರುವ ಹೈಡ್ & ಅಂಡ್ ಸೀಕ್ ಚಿತ್ರದಲ್ಲಿ ಬಾಲರಾಜವಾದಿ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೂರಜ್, ಜಗ್ಗಿ, ಅರವಿಂದ್ ರಾವ್, ಕೃಷ್ಣ ಹೆಬ್ಬಾಳೆ ಮತ್ತು ರಾಜೇಶ್ ನಟರಂಗ ಪ್ರಮುಖ ಪಾತ್ರಗಳಲ್ಲಿದ್ದಾರೆ. ಚಿತ್ರಕ್ಕೆ ರಿಜೋ ಪಿ ಜಾನ್ ಛಾಯಾಗ್ರಹಣ, ಸ್ಯಾಂಡಿ ಆಡಂಕಿ (ಕಿಲ್ಲಿಂಗ್ ವೀರಪ್ಪನ್) ಸಂಗೀತ ಸಂಯೋಜಿಸಿದ್ದು, ಮಧು ತುಂಬಕೆರೆ ಸಂಕಲನ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೆಂಪೇಗೌಡ ಏರ್ ಪೋರ್ಟ್ ಲ್ಲಿ 62 ಸೇರಿ 200ಕ್ಕೂ ಹೆಚ್ಚು ಇಂಡಿಗೋ ವಿಮಾನ ಹಾರಾಟ ರದ್ದಾಗಲು ಕಾರಣವೇನು?: ತನಿಖೆ ಆರಂಭಿಸಿದ DGCA

ಇಂದು ಸಂಜೆ ರಷ್ಯಾ ಅಧ್ಯಕ್ಷ Vladimir Putin ಭಾರತಕ್ಕೆ ಆಗಮನ: ರಾತ್ರಿ ಪ್ರಧಾನಿ ಮೋದಿಯಿಂದ ಖಾಸಗಿ ಔತಣಕೂಟ

ಬೆಳಗಾವಿ ಚಳಿಗಾಲ ಅಧಿವೇಶನ: ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳು ತಂತ್ರ, ತಿರುಗೇಟು ನೀಡಲು ಸಿಎಂ ಪ್ರತಿತಂತ್ರ

IPL ಸೇರಿ ಎಲ್ಲಾ ಮಾದರಿಯ ಕ್ರಿಕೆಟ್​ಗೆ ಮೋಹಿತ್ ಶರ್ಮಾ ನಿವೃತ್ತಿ ಘೋಷಣೆ

ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಾಗ; ಸಿಎಂ ಸಿದ್ದರಾಮಯ್ಯ

SCROLL FOR NEXT