ಕಾಟೇರ ಸಿನಿಮಾದ ಸ್ಟಿಲ್ 
ಸಿನಿಮಾ ಸುದ್ದಿ

ಬಾಕ್ಸ್ ಆಫೀಸ್‌ನಲ್ಲಿ ದರ್ಶನ್ ಅಭಿನಯದ ಕಾಟೇರ ಅಬ್ಬರ; ಮೂರೇ ದಿನದಲ್ಲಿ ದಾಖಲೆಯ ಗಳಿಕೆ!

ನಟ ದರ್ಶನ್ ಅಭಿನಯದ, ತರುಣ್ ಸುಧೀರ್ ನಿರ್ದೇಶಿಸಿರುವ ‘ಕಾಟೇರ’ ಇದೀಗ ರಾಜ್ಯದಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಕಾಟೇರ ಸಿನಿಮಾಗೆ ಸಿನಿಪ್ರಿಯರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದ್ದು, ಬಿಡುಗಡೆಯಾದ ಮೂರೇ ದಿನಕ್ಕೆ ಗಲ್ಲಾಪೆಟ್ಟಿಯಲ್ಲಿ ಉತ್ತಮ ಗಳಿಕೆ ಕಂಡಿದೆ.

ಬೆಂಗಳೂರು: ನಟ ದರ್ಶನ್ ಅಭಿನಯದ, ತರುಣ್ ಸುಧೀರ್ ನಿರ್ದೇಶಿಸಿರುವ ‘ಕಾಟೇರ’ ಇದೀಗ ರಾಜ್ಯದಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಕಾಟೇರ ಸಿನಿಮಾಗೆ ಸಿನಿಪ್ರಿಯರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದ್ದು, ಬಿಡುಗಡೆಯಾದ ಮೂರೇ ದಿನಕ್ಕೆ ಗಲ್ಲಾಪೆಟ್ಟಿಯಲ್ಲಿ ಉತ್ತಮ ಗಳಿಕೆ ಕಂಡಿದೆ.

ಡಿಸೆಂಬರ್ 29ರಂದು ಚಿತ್ರ ರಾಜ್ಯದಾದ್ಯಂತ ತೆರೆಕಂಡಿದ್ದು, ಚಿತ್ರ ಬಿಡುಗಡೆಯಾದ ಮೂರನೇ ದಿನಕ್ಕೆ ಕಾಟೇರ ಸಿನಿಮಾ ಬರೋಬ್ಬರಿ 20.94 ಕೋಟಿ ರೂ. ಸಂಗ್ರಹಿಸಿದೆ. ಮೊದಲನೇ ದಿನ ಕಾಟೇರ 19.79 ಕೋಟಿ ರೂ. ಗಳಿಸಿತ್ತು. ಎರಡನೇ ದಿನ 17.35 ಕೋಟಿ ರೂ. ಗಳಿಸಿತ್ತು. ಈ ಮೂಲಕ ಚಿತ್ರ ಮೂರು ದಿನಗಳಲ್ಲಿ ರಾಜ್ಯದಾದ್ಯಂತ ಒಟ್ಟು 58.8 ಕೋಟಿ ರೂ. ಸಂಗ್ರಹಿಸಿದೆ.

ದಿನದಿಂದ ದಿನಕ್ಕೆ ಕಾಟೇರ ಸಿನಿಮಾದ ಕ್ರೇಜ್ ಹೆಚ್ಚುತ್ತಿದ್ದು, ಹಲವು ಶೋಗಳನ್ನು ಹೆಚ್ಚಿಸಲಾಗಿದೆ. ದರ್ಶನ್ ಅಭಿಮಾನಿಗಳಷ್ಟೇ ಅಲ್ಲದೆ ಸಿನಿಪ್ರಿಯರು ಚಿತ್ರ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಭರ್ಜರಿ ಓಪನಿಂಗ್​ ಪಡೆದುಕೊಂಡಿರುವ ಕಾಟೇರ ಮೂರನೇ ದಿನ ಕೂಡ ಅಬ್ಬರಿಸಿದೆ. ಬಾಕ್ಸ್​ ಆಫೀಸ್​ನಲ್ಲಿ ತನ್ನ ನಾಗಾಲೋಟ ಮುಂದುವರೆಸಿದೆ. 

ದರ್ಶನ್ ಕೃತಜ್ಞತೆ

ಕಾಟೇರ ಸಿನಿಮಾದ ಯಶಸ್ಸಿಗೆ ಪ್ರತಿಕ್ರಿಯಿಸಿರುವ ನಟ ದರ್ಶನ್, ಏನೆಂದು ನಾ ಹೇಳಲಿ, ನಿಮ್ಮಯ ಪ್ರೀತಿ-ಆಶೀರ್ವಾದಕೆ ಕೊನೆಯಲ್ಲಿ! ಧನ್ಯೋಸ್ಮಿ ಸೆಲೆಬ್ರಿಟಿಸ್! ಹೃದಯಪೂರ್ವಕ ಧನ್ಯವಾದಗಳು ಕರ್ನಾಟಕ. ಈ ಪ್ರೀತಿಯ ಚಪ್ಪಾಳೆ ನಮ್ಮ ಕಾಟೇರ ಚಿತ್ರತಂಡದ ಮನತುಂಬಿದೆ. ಮಾತೇ ಬರುತ್ತಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ಚಿತ್ರದಲ್ಲಿ ಮಾಲಾಶ್ರೀ ಅವರ ಪುತ್ರಿ ಆರಾಧನಾ ರಾಮ್ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದು, ಹಿರಿಯ ನಟರಾದ ಬಿರಾದಾರ್, ಜಗಪತಿ ಬಾಬು, ಕುಮಾರ್​ ಗೋವಿಂದ್, ಮಾಸ್ಟರ್ ರೋಹಿತ್ ಮತ್ತು ಡ್ಯಾನಿಶ್ ಅಖ್ತರ್ ಸೈಫಿ ನಟಿಸಿದ್ದಾರೆ. 

ಚಿತ್ರಕ್ಕೆ ಮಾಸ್ತಿ ಸಂಭಾಷಣೆ ಬರೆದಿದ್ದು, ವಿ ಹರಿಕೃಷ್ಣ ಸಂಗೀತ ಸಂಯೋಜಿಸಿದ್ದಾರೆ, ಸುಧಾಕರ್ ಎಸ್ ರಾಜ್ ಅವರ ಛಾಯಾಗ್ರಹಣ ಚಿತ್ರಕ್ಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT