ಡ್ರೋನ್ ಪ್ರತಾಪ್ 
ಸಿನಿಮಾ ಸುದ್ದಿ

ಬಿಗ್ ಬಾಸ್ ಕನ್ನಡ ಸೀಸನ್ 10: ಡ್ರೋನ್ ಪ್ರತಾಪ್ ಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು

ಬಿಗ್ ಬಾಸ್ ಕನ್ನಡ ಸೀಸನ್ 10 ಆರಂಭಗದಿಂದಲೇ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗುತ್ತಿದೆ. ಬಿಗ್ ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್(Drone Pratap) ಮತ್ತೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 10 ಆರಂಭಗದಿಂದಲೇ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗುತ್ತಿದೆ. ಬಿಗ್ ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್(Drone Pratap) ಮತ್ತೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಳೆದ ಬಾರಿ ಕಣ್ಣಿಗೆ ಸೋಪಿನ ನೀರು ಹಾಕಿಸಿಕೊಂಡು ಆಸ್ಪತ್ರೆ ಸೇರಿದ್ದರು. ಆದರೆ, ಈ ಬಾರಿ ಅವರಿಗೆ ಫುಡ್ ಪಾಯ್ಸನ್ ಆಗಿ ಆಸ್ಪತ್ರೆಗೆ ಸೇರಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಡ್ರೋನ್ ಪ್ರತಾಪ್ ತಂದೆ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. 

ಫುಡ್ ಪಾಯಿಸನ್ ಆಗಿದೆ ಎಂದು ಕೆಲವು ಮೂಲಗಳು ಮಾಹಿತಿ ನೀಡಿದರೆ, ಇನ್ನೂ ಕೆಲವರು ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ ಎಂದು ಹೇಳುತ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಕೋವಿಡ್ ಸೋಂಕು ಏನಾದರೂ ತಗುಲಿರಬಹುದಾ ಎಂದು ಕೆಲವರು ಸಂದೇಹ ವ್ಯಕ್ತಪಡಿಸಿದ್ದರೆ ಇನ್ನು ಕೆಲವರು ಪ್ರತಾಪ್ ಆತ್ಮಹತ್ಯೆಗೆ ಯತ್ನಿಸಿದ್ದರಾ ಎಂದು ಕೇಳುತ್ತಿದ್ದಾರೆ.

ಡ್ರೋನ್ ಪ್ರತಾಪ್ ಅವರ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿದೆ. ಪ್ರತಾಪ್ ಅವರಿಗೆ ಏನಾಗಿದೆ ಎಂದು ತಿಳಿಸಿ ಎಂದು ವಾಹಿನಿಯವರನ್ನು ಒತ್ತಾಯಿಸುತ್ತಿದ್ದಾರೆ. ಡ್ರೋನ್ ಪ್ರತಾಪ್ ಅವರ ಟೀಮ್ ಹ್ಯಾಂಡಲ್ ಮಾಡುವಂತಹ ಸೋಷಿಯಲ್ ಮೀಡಿಯಾದಲ್ಲಿ ಊಟದಲ್ಲಿ ಸ್ವಲ್ಪ ವ್ಯತ್ಯಾಸ ಉಂಟಾಗಿ ಹುಷಾರು ತಪ್ಪಿದ್ದಾರೆ. ಇನ್ನು ಸ್ವಲ್ಪ ಸಮಯದ ಒಳಗೆ ಬಿಗ್ ಬಾಸ್ ಮನೆಗೆ ನಿಮ್ಮ ಡ್ರೋನ್ ಪ್ರತಾಪ್ ಅವರು ತೆರಳುತ್ತಾರೆ. ಅವರಿಗೆ ವೋಟ್ ಮಾಡಿ ಎಂದು ಪೋಸ್ಟ್ ಮಾಡಿದ್ದಾರೆ.

ಔಟ್ ಆಫ್ ಡೇಂಜರ್: ಡ್ರೋನ್ ಪ್ರತಾಪ್ ಅವರದ್ದು ಸೂಸೈಡ್ ಅಟ್ಮೆಂಟ್ ಅಲ್ಲ, ಎರಡು ದಿನಗಳಿಂದ ಊಟ ಮಾಡದೆ ಅಸ್ವಸ್ಥರಾಗಿದ್ದರು, ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಬಿಗ್ ಬಾಸ್ ಮೂಲಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಹಾರ್ಮುಜ್ ಜಲಸಂಧಿ' ದಿಗ್ಬಂಧನ ನಡುವೆ ಟ್ರಂಪ್-ಪ್ರಧಾನಿ ಮೋದಿ ದೂರವಾಣಿ ಸಂಭಾಷಣೆ! ಏನೆಲ್ಲಾ ಮಾತುಕತೆ ಆಯ್ತು?

ಅಮೆರಿಕದ ಹಾರ್ಮುಜ್ ದಿಗ್ಬಂಧನದಿಂದ ಇರಾನ್‌ಗೆ ದಿನಕ್ಕೆ ಅಂದಾಜು $435 ಮಿಲಿಯನ್ ನಷ್ಟ; ಆದರೂ ದೀರ್ಘಾವಧಿಯ ಬ್ಲಾಕೇಡ್ ಕಷ್ಟ!

ತಿರುಪ್ಪೂರ್: ಟಿವಿಕೆ ವಿಜಯ್ ಪ್ರಚಾರ ಕಾರ್ಯಕ್ರಮದಲ್ಲಿ ಮಾತ್ತೊಂದು ಅವಘಡ: ಕುಸಿದುಬಿದ್ದು 15 ಮಂದಿ ಆಸ್ಪತ್ರೆಗೆ ದಾಖಲು!

IPL 2026: ತವರು ನೆಲದಲ್ಲಿ ಕೆಕೆಆರ್ ವಿರುದ್ಧ ಗೆದ್ದು ಬೀಗಿದ CSK!

ನವದೆಹಲಿ: ಸಂಪುಟ ಪುನರ್ ರಚನೆಗೆ ಪಟ್ಟು, ಹಿರಿಯ ನಾಯಕರೊಂದಿಗೆ ಚರ್ಚಿಸದೆ ಬೆಂಗಳೂರಿಗೆ ವಾಪಸ್ ಆಗಲ್ಲ: ಅಶೋಕ್ ಪಟ್ಟಣ್

SCROLL FOR NEXT