ಬ್ಯಾಚುಲರ್ ಪಾರ್ಟಿ ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

‘ಬ್ಯಾಚುಲರ್ ಪಾರ್ಟಿ'ಯಲ್ಲಿ ಅತಿಥಿ ನಟರ ಸಮಾಗಮ; ಜ.26ಕ್ಕೆ ಚಿತ್ರ ಬಿಡುಗಡೆ

ಅಭಿಜಿತ್ ಮಹೇಶ್ ಅವರ ಚೊಚ್ಚಲ ನಿರ್ದೇಶನದ ಬ್ಯಾಚುಲರ್ ಪಾರ್ಟಿ ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು, ಚಿತ್ರದಲ್ಲಿ ಅತಿಥಿಗಳ ಸಮಾಗಮವಾಗಲಿದೆ.

ಅಭಿಜಿತ್ ಮಹೇಶ್ ಅವರ ಚೊಚ್ಚಲ ನಿರ್ದೇಶನದ ಬ್ಯಾಚುಲರ್ ಪಾರ್ಟಿ ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು, ಚಿತ್ರದಲ್ಲಿ ಅತಿಥಿಗಳ ಸಮಾಗಮವಾಗಲಿದೆ.

ಇತ್ತೀಚೆಗಷ್ಟೇ ಚಿತ್ರತಂಡ ಪೋಸ್ಟರ್‌ಗಳು, ಹಾಡುಗಳು ಮತ್ತು ಟೀಸರ್‌ಗಳನ್ನು ಬಿಡುಗಡೆ ಮಾಡಿದ್ದು, ಇದು ಪ್ರೇಕ್ಷಕರ ಗಮನ ಸೆಳೆದಿದೆ. ಇದೀಗ ಟ್ರೇಲರ್ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ನಡೆಸುತ್ತಿದೆ.

ಈ ನಡುವೆ ಅಭಿಜಿತ್ ಮಹೇಶ್ ಅವರು 'ಬ್ಯಾಚುಲರ್‌ ಪಾರ್ಟಿ’ ಸಿನಿಮಾದಲ್ಲಿ ಅತಿಥಿ ಪಾತ್ರಕ್ಕೆ ಬಣ್ಣ ಹಚ್ಚಿರುವ ಕಲಾವಿದರ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ವಿಕಾಸ್‌, ಗುರುಪ್ರಸಾದ್‌, ಶೈನ್‌ ಶೆಟ್ಟಿ

ಲೂಸಿಯಾ ಪವನ್‌ ಕುಮಾರ್‌, ಮಠ ಗುರುಪ್ರಸಾದ್‌, ನಾ. ಸೋಮೇಶ್ವರ (ಥಟ್‌ ಅಂತ ಹೇಳಿ), ಶೈನ್‌ ಶೆಟ್ಟಿ ಹಾಗೂ ವಿಕ್ಕಿಪೀಡಿಯಾ ಖ್ಯಾತಿಯ ವಿಕಾಸ್‌ ಸೇರಿದಂತೆ ಇನ್ನೂ ಹಲವರು ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆಂಬ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಸದ್ಯ ಈ ಪಟ್ಟಿ ನೀಡಿರುವ ಚಿತ್ರತಂಡ ಇವರೆಲ್ಲ “ಬ್ಯಾಚುಲರ್‌’ಗಳ ಜತೆ ಏನೇನು ಚಮತ್ಕಾರ ಮಾಡಲಿದ್ದಾರೆ ಎಂಬ ಗುಟ್ಟನ್ನು ಮಾತ್ರ ಅವರು ಬಿಟ್ಟುಕೊಟ್ಟಿಲ್ಲ.

ಏಳು ವರ್ಷಗಳ ಹಿಂದೆ ಕಿರಿಕ್ ಪಾರ್ಟಿ ಚಿತ್ರವನ್ನು ನಿರ್ಮಿಸಿದ್ದ ರಕ್ಷಿತ್ ಶೆಟ್ಟಿ ಈಗ ಪರಂವಾ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಬ್ಯಾಚುಲರ್ ಪಾರ್ಟಿ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಕಿರಿಕ್ ಪಾರ್ಟಿ ಸಿನಿಮಾದಲ್ಲಿ ಬರಹಗಾರರಾಗಿ ಕಾರ್ಯನಿರ್ವಹಿಸಿದ್ದ ಅಭಿಜಿತ್ ಮಹೇಶ್, ಬ್ಯಾಚುಲರ್ ಪಾರ್ಟಿ ಸಿನಿಮಾ ಮೂಲಕ ನಿರ್ದೇಶಕರಾಗಿ ಹೊರಹೊಮ್ಮಿದ್ದಾರೆ.

ನಾ. ಸೋಮೇಶ್ವರ ಜೊತೆ ಅಭಿಜಿತ್ ಮಹೇಶ್, ಪವನ್‌ ಕುಮಾರ್‌

ಸಿನಿಮಾಕ್ಕೆ ಅರವಿಂದ್‌ ಛಾಯಾಗ್ರಹಣ, ಅರ್ಜುನ್‌ ರಾಮು ಸಂಗೀತ ನಿರ್ದೇಶನವಿದೆ. ಸದ್ಯ ಭರದಿಂದ ಪ್ರಚಾರ ಕಾರ್ಯಗಳಲ್ಲಿ ನಿರತವಾಗಿರುವ “ಬ್ಯಾಚುಲರ್‌ ಪಾರ್ಟಿ’ ಸಿನಿಮಾ ಇದೇ ಜನವರಿ 26ರಂದು ರಾಜ್ಯಾದ್ಯಂತ ತೆರೆಕಾಣಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲಬುರಗಿ: ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಶಿಸ್ತಿನಲ್ಲಿರಿಸಲು 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

SCROLL FOR NEXT