ಬ್ಯಾಚುಲರ್ ಪಾರ್ಟಿ ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

‘ಬ್ಯಾಚುಲರ್ ಪಾರ್ಟಿ'ಯಲ್ಲಿ ಅತಿಥಿ ನಟರ ಸಮಾಗಮ; ಜ.26ಕ್ಕೆ ಚಿತ್ರ ಬಿಡುಗಡೆ

ಅಭಿಜಿತ್ ಮಹೇಶ್ ಅವರ ಚೊಚ್ಚಲ ನಿರ್ದೇಶನದ ಬ್ಯಾಚುಲರ್ ಪಾರ್ಟಿ ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು, ಚಿತ್ರದಲ್ಲಿ ಅತಿಥಿಗಳ ಸಮಾಗಮವಾಗಲಿದೆ.

ಅಭಿಜಿತ್ ಮಹೇಶ್ ಅವರ ಚೊಚ್ಚಲ ನಿರ್ದೇಶನದ ಬ್ಯಾಚುಲರ್ ಪಾರ್ಟಿ ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು, ಚಿತ್ರದಲ್ಲಿ ಅತಿಥಿಗಳ ಸಮಾಗಮವಾಗಲಿದೆ.

ಇತ್ತೀಚೆಗಷ್ಟೇ ಚಿತ್ರತಂಡ ಪೋಸ್ಟರ್‌ಗಳು, ಹಾಡುಗಳು ಮತ್ತು ಟೀಸರ್‌ಗಳನ್ನು ಬಿಡುಗಡೆ ಮಾಡಿದ್ದು, ಇದು ಪ್ರೇಕ್ಷಕರ ಗಮನ ಸೆಳೆದಿದೆ. ಇದೀಗ ಟ್ರೇಲರ್ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ನಡೆಸುತ್ತಿದೆ.

ಈ ನಡುವೆ ಅಭಿಜಿತ್ ಮಹೇಶ್ ಅವರು 'ಬ್ಯಾಚುಲರ್‌ ಪಾರ್ಟಿ’ ಸಿನಿಮಾದಲ್ಲಿ ಅತಿಥಿ ಪಾತ್ರಕ್ಕೆ ಬಣ್ಣ ಹಚ್ಚಿರುವ ಕಲಾವಿದರ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ವಿಕಾಸ್‌, ಗುರುಪ್ರಸಾದ್‌, ಶೈನ್‌ ಶೆಟ್ಟಿ

ಲೂಸಿಯಾ ಪವನ್‌ ಕುಮಾರ್‌, ಮಠ ಗುರುಪ್ರಸಾದ್‌, ನಾ. ಸೋಮೇಶ್ವರ (ಥಟ್‌ ಅಂತ ಹೇಳಿ), ಶೈನ್‌ ಶೆಟ್ಟಿ ಹಾಗೂ ವಿಕ್ಕಿಪೀಡಿಯಾ ಖ್ಯಾತಿಯ ವಿಕಾಸ್‌ ಸೇರಿದಂತೆ ಇನ್ನೂ ಹಲವರು ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆಂಬ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಸದ್ಯ ಈ ಪಟ್ಟಿ ನೀಡಿರುವ ಚಿತ್ರತಂಡ ಇವರೆಲ್ಲ “ಬ್ಯಾಚುಲರ್‌’ಗಳ ಜತೆ ಏನೇನು ಚಮತ್ಕಾರ ಮಾಡಲಿದ್ದಾರೆ ಎಂಬ ಗುಟ್ಟನ್ನು ಮಾತ್ರ ಅವರು ಬಿಟ್ಟುಕೊಟ್ಟಿಲ್ಲ.

ಏಳು ವರ್ಷಗಳ ಹಿಂದೆ ಕಿರಿಕ್ ಪಾರ್ಟಿ ಚಿತ್ರವನ್ನು ನಿರ್ಮಿಸಿದ್ದ ರಕ್ಷಿತ್ ಶೆಟ್ಟಿ ಈಗ ಪರಂವಾ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಬ್ಯಾಚುಲರ್ ಪಾರ್ಟಿ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಕಿರಿಕ್ ಪಾರ್ಟಿ ಸಿನಿಮಾದಲ್ಲಿ ಬರಹಗಾರರಾಗಿ ಕಾರ್ಯನಿರ್ವಹಿಸಿದ್ದ ಅಭಿಜಿತ್ ಮಹೇಶ್, ಬ್ಯಾಚುಲರ್ ಪಾರ್ಟಿ ಸಿನಿಮಾ ಮೂಲಕ ನಿರ್ದೇಶಕರಾಗಿ ಹೊರಹೊಮ್ಮಿದ್ದಾರೆ.

ನಾ. ಸೋಮೇಶ್ವರ ಜೊತೆ ಅಭಿಜಿತ್ ಮಹೇಶ್, ಪವನ್‌ ಕುಮಾರ್‌

ಸಿನಿಮಾಕ್ಕೆ ಅರವಿಂದ್‌ ಛಾಯಾಗ್ರಹಣ, ಅರ್ಜುನ್‌ ರಾಮು ಸಂಗೀತ ನಿರ್ದೇಶನವಿದೆ. ಸದ್ಯ ಭರದಿಂದ ಪ್ರಚಾರ ಕಾರ್ಯಗಳಲ್ಲಿ ನಿರತವಾಗಿರುವ “ಬ್ಯಾಚುಲರ್‌ ಪಾರ್ಟಿ’ ಸಿನಿಮಾ ಇದೇ ಜನವರಿ 26ರಂದು ರಾಜ್ಯಾದ್ಯಂತ ತೆರೆಕಾಣಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT