ಗುರುಕಿರಣ್ 
ಸಿನಿಮಾ ಸುದ್ದಿ

ಸಂಗೀತ ನಿರ್ದೇಶಕ ಗುರುಕಿರಣ್‌ ಮನೆಯಲ್ಲಿ ಕಳ್ಳತನ: ಕಪಾಟಿನಲ್ಲಿದ್ದ ಹಣ ನಾಪತ್ತೆ!

ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಅವರ ಬೆಂಗಳೂರು ನಿವಾಸದಲ್ಲಿ ಕಳ್ಳತನವಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬೆಂಗಳೂರು: ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಅವರ ಬೆಂಗಳೂರು ನಿವಾಸದಲ್ಲಿ ಕಳ್ಳತನವಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಕಳೆದ ಡಿಸೆಂಬರ್ 31ರಂದು ಮಧ್ಯಾಹ್ನ ತಮ್ಮ ರೂಂನ ಬೀರುವಿನಲ್ಲಿಟ್ಟಿದ್ದ 2.50 ಲಕ್ಷ ರೂ.ಗಳನ್ನು ಗುರುಕಿರಣ್ ಅತ್ತೆ ಕಸ್ತೂರಿ ಶೆಟ್ಟಿ ಇಟ್ಟಿದ್ದರು. ಆದ್ರೆ ಜನವರಿ 5ರಂದು ಹಣ ಕಳ್ಳತನವಾಗಿದೆ. ಎರಡು ದಿನಗಳ ಕಾಲ ಕುಟುಂಬಸ್ಥರು ಮನೆಯೆಲ್ಲ ಹುಡುಕಾಡಿದ್ದಾರೆ.

ಎಷ್ಟು ಹುಡುಕಾಡಿದರೂ ಹಣ ಸಿಗದೇ ಇದ್ದಾಗ ಜನವರಿ 7 ರಂದು ಚಂದ್ರ ಲೇಔಟ್ ಪೊಲೀಸ್ ಠಾಣೆಗೆ ಗುರುಕಿರಣ್ ಅತ್ತೆ ದೂರು ನೀಡಿದ್ದಾರೆ. ಈ ಸಂಬಂಧ ಎಫ್‌ಐಆರ್ ಸಹ ದಾಖಲಾಗಿದೆ. ಮನೆ ಕೆಲಸದವರ ಮೇಲೆ ಕಸ್ತೂರಿ ಶೆಟ್ಟಿ ಅವರು ಅನುಮಾನ ವ್ಯಕ್ತಪಡಿಸಿದ್ದಾರೆ, ಸದ್ಯ ಮನೆ ಕೆಲಸದಾಕೆ ರತ್ನಮ್ಮ ಅವರನ್ನು ವಿಚಾರಣೆ ನಡೆಸಿರುವ ಚಂದ್ರ ಲೇಔಟ್ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT