ನಟ ದರ್ಶನ್ ಮತ್ತಿತರರು 
ಸಿನಿಮಾ ಸುದ್ದಿ

ನಿಯಮ ಮೀರಿ ಪಬ್ ನಲ್ಲಿ ಪಾರ್ಟಿ ಪ್ರಕರಣ: ನಟ ದರ್ಶನ್ ಸೇರಿ ಇತರ 8 ಮಂದಿ ವಿಚಾರಣೆಗೆ ಹಾಜರು

ಇತ್ತೀಚಿಗೆ ಬಿಡುಗಡೆಯಾಗಿ ಭರ್ಜರಿ ಪ್ರದರ್ಶನ ಕಾಣುತ್ತಿರುವ 'ಕಾಟೇರ' ಸಿನಿಮಾ ಯಶಸ್ಸು ಸಂಭ್ರಮಿಸಲು ಒರಾಯನ್ ಮಾಲ್ ಬಳಿಯ ಜೆಟ್ ಲ್ಯಾಗ್ ಪಬ್ ನಲ್ಲಿ ನಿಯಮ ಉಲ್ಲಂಘಿಸಿ ಮುಂಜಾನೆಯವರೆಗೂ ಪಾರ್ಟಿ ಆಯೋಜಿಸಿದ್ದ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಶುಕ್ರವಾರ ಎಂಟು ಮಂದಿಯೊಂದಿಗೆ ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದರು. 

ಬೆಂಗಳೂರು: ಇತ್ತೀಚಿಗೆ ಬಿಡುಗಡೆಯಾಗಿ ಭರ್ಜರಿ ಪ್ರದರ್ಶನ ಕಾಣುತ್ತಿರುವ 'ಕಾಟೇರ' ಸಿನಿಮಾ ಯಶಸ್ಸು ಸಂಭ್ರಮಿಸಲು ಒರಾಯನ್ ಮಾಲ್ ಬಳಿಯ ಜೆಟ್ ಲ್ಯಾಗ್ ಪಬ್ ನಲ್ಲಿ ನಿಯಮ ಉಲ್ಲಂಘಿಸಿ ಮುಂಜಾನೆಯವರೆಗೂ ಪಾರ್ಟಿ ಆಯೋಜಿಸಿದ್ದ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಶುಕ್ರವಾರ ಎಂಟು ಮಂದಿಯೊಂದಿಗೆ ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದರು. 

ಕಾಟೇರ ಸಿನಿಮಾ ನಿರ್ದೇಶಕ ತರುಣ್ ಸುಧೀರ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ನಟರಾದ ಡಾಲಿ ಧನಂಜಯ್, ನೀನಾಸಂ ಸತೀಶ್, ಅಭಿಷೇಕ್ ಅಂಬರೀಷ್, ಚಿಕ್ಕಣ್ಣ ಅವರೊಂದಿಗೆ  ನಟ ದರ್ಶನ್ ಅವರ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡರು.

ನಿಯಮ ಉಲ್ಲಂಘಿಸಿ ಜನವರಿ 3 ರಂದು ಪಾರ್ಟಿ ನಡೆಸಿದ್ದ ಆರೋಪದ ಮೇರೆಗೆ ಜನವರಿ 7 ರಂದು ಪೊಲೀಸರು ನೋಟಿಸ್ ಜಾರಿ ಮಾಡಿದ್ದರು. ಜನವರಿ 8 ರಂದು ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನಲ್ಲಿ ಸೂಚಿಸಲಾಗಿತ್ತು. ಆದರೆ, ದರ್ಶನ್ ಹಾಗೂ ತರುಣ್ ಸುಧೀರ್ ಸಿನಿಮಾ ಪ್ರಚಾರಕ್ಕೆ ದುಬೈಗೆ ತೆರಳಿದ್ದರಿಂದ ವಿಚಾರಣೆಗೆ ಹಾಜರಾಗಿರಲಿಲ್ಲ. ಹೀಗಾಗಿ ಶುಕ್ರವಾರ ವಿಚಾರಣೆಗೆ ಹಾಜರಾದರು. 

ವಿಚಾರಣೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ದರ್ಶನ್ ಅವರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ನಾವು ತಡರಾತ್ರಿ ವರೆಗೂ ಪಾರ್ಟಿ ಮಾಡಲಿಲ್ಲ. ಊಟಕ್ಕೆ ಕುಳಿತಿದ್ದೇವು, ಅಡುಗೆ ಮಾಡೋದು ತಡವಾಗಿದ್ದರಿಂದ ತಡರಾತ್ರಿ ಆಗಿದೆ ಎಂದರು. 

ತಡರಾತ್ರಿ ಎಷ್ಟೋ ಬಾರ್ ಗಳು ಓಪನ್ ಇರುತ್ತವೆ. ಆದರೆ, ಈವರೆಗೂ ಯಾವುದೇ ಗ್ರಾಹಕನಿಗೆ ಈ ರೀತಿ ನೋಟಿಸ್ ಕೊಟ್ಟಿಲ್ಲ. ಸಾಮಾನ್ಯ ಜನರಿಗೂ, ಸೆಲೆಬ್ರಿಟಿಗಳಿಗೂ ಒಂದೇ ಕಾನೂನು. ನಮಗೆ ಅವತ್ತು ಯಾವ ಪೊಲೀಸರೂ ಕೇಳಿಲ್ಲ. ಯಾರಿಗೂ ತೊಂದರೆ ಆಗುವಂತೆ ನಡೆದುಕೊಂಡಿಲ್ಲವೆಂದು ಇದೇ ಸಂದರ್ಭದಲ್ಲಿ ರಾಕ್ ಲೈನ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT