ಗುರುಪ್ರಸಾದ್ ಮತ್ತು ಜಗ್ಗೇಶ್ 
ಸಿನಿಮಾ ಸುದ್ದಿ

15 ವರ್ಷಗಳ ನಂತರ ಮತ್ತೆ ನಕ್ಕು ನಗಿಸಲು ಬರ್ತಿದ್ದಾರೆ ಗುರುಪ್ರಸಾದ್‌-ಜಗ್ಗೇಶ್‌: ಮಾರ್ಚ್ ನಲ್ಲಿ 'ರಂಗನಾಯಕ' ರಿಲೀಸ್

ನವರಸ ನಾಯಕ ಜಗ್ಗೆಶ್ ಮತ್ತು ಗುರು ಪ್ರಸಾದ್ ಜೋಡಿಯ 'ಮಠ' ಹಾಗೂ 'ಎದ್ದೇಳು ಮಂಜುನಾಥ' ಸಿನಿಮಾ ನೋಡಿ ಎಂಜಾಯ್ ಮಾಡಿದ್ದ ಪ್ರೇಕ್ಷಕರು ಕಾದೂ ಕಾದು ಸೈಲೆಂಟ್ ಆಗಿದ್ದರು. ಇದೇ ಐದಾರು ವರ್ಷಗಳ ಹಿಂದೆ ಮತ್ತೆ ಒಂದಾಗಿ ಸಿನಿಮಾ ಮಾಡೋಕೆ ಈ ಜೋಡಿ ನಿರ್ಧಾರ ಮಾಡಿತ್ತು.

ನವರಸ ನಾಯಕ ಜಗ್ಗೆಶ್ ಮತ್ತು ಗುರು ಪ್ರಸಾದ್ ಜೋಡಿಯ 'ಮಠ' ಹಾಗೂ 'ಎದ್ದೇಳು ಮಂಜುನಾಥ' ಸಿನಿಮಾ ನೋಡಿ ಎಂಜಾಯ್ ಮಾಡಿದ್ದ ಪ್ರೇಕ್ಷಕರು ಕಾದೂ ಕಾದು ಸೈಲೆಂಟ್ ಆಗಿದ್ದರು. ಇದೇ ಐದಾರು ವರ್ಷಗಳ ಹಿಂದೆ ಮತ್ತೆ ಒಂದಾಗಿ ಸಿನಿಮಾ ಮಾಡೋಕೆ ಈ ಜೋಡಿ ನಿರ್ಧಾರ ಮಾಡಿತ್ತು. 2019ರಲ್ಲಿ 'ರಂಗನಾಯಕ' ಸಿನಿಮಾ ಅನೌನ್ಸ್ ಆಯ್ತು. ಆದರೆ, ಕೋವಿಡ್ ಹಿನ್ನೆಲೆಯಲ್ಲಿ ಸಿನಿಮಾ ಸೆಟ್ಟೇರುವುದು ತಡವಾಯ್ತು.

ರಂಗನಾಯಕ ಸಿನಿಮಾವನ್ನು ಮಾರ್ಚ್ 8ಕ್ಕೆ ರಿಲೀಸ್ ಮಾಡಲು ಚಿತ್ರ ತಂಡ ಸಿದ್ಧತೆ ನಡೆಸಿದೆ.  ನಾಯಕ ನಟ ಜಗ್ಗೇಶ್‌ ಅವರಿಗೆ ಮಾರ್ಚ್‌ 17 ಹುಟ್ಟುಹಬ್ಬ ಸಂಭ್ರಮ. ಈಗ 'ರಂಗನಾಯಕ’ ತಂಡ ಜಗ್ಗೇಶ್‌ ಹಾಗೂ ಅವರ ಅಭಿಮಾನಿಗಳಿಗೆ ಬರ್ತ್‌ಡೇಗೆ ಒಂದು ವಾರ ಮುಂಚೆಯೇ ಗಿಫ್ಟ್ ನೀಡಲು ಮುಂದಾಗಿದೆ.

'ರಂಗನಾಯಕ'ನ ಮೇಲೆ ಯಾಕಿಷ್ಟು ನಿರೀಕ್ಷೆಯಿದೆ ಎಂದು ವಿಶೇಷವಾಗಿ ಹೇಳಬೇಕಿಲ್ಲ. 'ಎದ್ದೇಳು ಮಂಜುನಾಥ' ಸಿನಿಮಾ ತೆರೆಕಂಡು 15 ವರ್ಷಗಳ ಬಳಿಕ ಈ ಜೋಡಿಯ ಸಿನಿಮಾ ರಿಲೀಸ್ ಆಗುತ್ತಿದೆ.  ಈ ಸಿನಿಮಾ ರಾಜಕೀಯ ವಿಡಂಬನಾತ್ಮಕ ಸಿನಿಮಾ ಎಂದು ಗುರುಪ್ರಸಾದ್ ಅವರೇ ಹೇಳಿಕೊಂಡಿದ್ದಾರೆ. ಅಲ್ಲದೆ ಜಗ್ಗೇಶ್‌ ಅವರೇ ಬೇಕು ಅಂತ 10 ವರ್ಷಗಳಿಂದ ಈ ಸ್ಕ್ರಿಪ್ಟ್ ಇಟ್ಕೊಂಡು ಕಾದಿದ್ದ ನಿರ್ದೇಶಕರ ಆಸೆ ಈಡೇರಿದೆ.

ಈ ಚಿತ್ರವನ್ನು ವಿಖ್ಯಾತ್‌ ಚಿತ್ರ ಪ್ರೊಡಕ್ಷನ್ಸ್‌ನಡಿ ಎ.ಆರ್‌. ವಿಖ್ಯಾತ್‌ ನಿರ್ಮಾಣ ಮಾಡುತ್ತಿದ್ದಾರೆ. ಮಠ, ಎದ್ದೇಳು ಮಂಜುನಾಥ ನಂತರ ಮತ್ತೂಮ್ಮೆ ಹಿಟ್‌ ಕಾಂಬೋ ತೆರೆಯತ್ತ ಬರುತ್ತಿರುವುದರಿಂದ ಸಹಜವಾಗಿಯೇ ಸಿನಿಮಾ ಬಗ್ಗೆ ಕುತೂಹಲ ಹಾಗೂ ನಿರೀಕ್ಷೆ ಇದೆ. ಈಗಾಗಲೇ ಬಿಡುಗಡೆ ಯಾಗಿರುವ ಚಿತ್ರದ ಟೀಸರ್‌, ಗೆಟಪ್‌ ಸಿನಿಮಾ ಮೇಲಿನ ಕುತೂಹಲ ಹೆಚ್ಚಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT