ಜೈ ಹನುಮಾನ್ ಚಿತ್ರಕ್ಕೆ ಸಿದ್ಧತೆ 
ಸಿನಿಮಾ ಸುದ್ದಿ

'ಹನುಮಾನ್' ಯಶಸ್ಸು: ರಾಮಮಂದಿರ ಉದ್ಘಾಟನೆ ದಿನವೇ ಸೀಕ್ವೆಲ್ 'ಜೈ ಹನುಮಾನ್' ಗೆ ಸಿದ್ಧತೆ

'ಹನುಮಾನ್' ಚಿತ್ರದ ಅಭೂತಪೂರ್ವ ಯಶಸ್ಸಿನ ಬಳಿಕ ಅದೇ ಹುಮ್ಮಸ್ಸಿನಲ್ಲೇ ಚಿತ್ರತಂಡ ಚಿತ್ರದ ಸೀಕ್ವೆಲ್ ಗೆ ಕೈ ಹಾಕಿದ್ದು, ರಾಮಮಂದಿರ ಉದ್ಘಾಟನೆ ದಿನವೇ ಚಿತ್ರದ ಪ್ರೀ ಪ್ರೊಡಕ್ಷನ್ ಕಾರ್ಯವನ್ನು ಕೈಗೆತ್ತಿಕೊಂಡಿದೆ.

ಹೈದರಾಬಾದ್: 'ಹನುಮಾನ್' ಚಿತ್ರದ ಅಭೂತಪೂರ್ವ ಯಶಸ್ಸಿನ ಬಳಿಕ ಅದೇ ಹುಮ್ಮಸ್ಸಿನಲ್ಲೇ ಚಿತ್ರತಂಡ ಚಿತ್ರದ ಸೀಕ್ವೆಲ್ ಗೆ ಕೈ ಹಾಕಿದ್ದು, ರಾಮಮಂದಿರ ಉದ್ಘಾಟನೆ ದಿನವೇ ಚಿತ್ರದ ಪ್ರೀ ಪ್ರೊಡಕ್ಷನ್ ಕಾರ್ಯವನ್ನು ಕೈಗೆತ್ತಿಕೊಂಡಿದೆ.

ಹೌದು.. ಅಯೋಧ್ಯೆಯಲ್ಲಿ ರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದ್ದು, ಐತಿಹಾಸಿಕ ಕ್ಷಣಕ್ಕೆ ಇಡೀ ದೇಶವೇ ಸಾಕ್ಷಿ ಆಯಿತು. ಈ ಶುಭ ದಿನದಂದು ರಾಮಾಯಣಕ್ಕೆ ಸಂಬಂಧಿಸಿದ ಕೆಲ ಸಿನಿಮಾಗಳು ಸೆಟ್ಟೇರಿದ್ದು, ‘ಶ್ರೀ ರಾಮ್ ಜೈ ಹನುಮಾನ್’ ಹೆಸರಿನ ಸಿನಿಮಾ ಸೆಟ್ಟೇರಿತ್ತು. ಅದೇ ರೀತಿ ಇದೀಗ ‘ಹನುಮಾನ್’ (Hanuman Movie) ಚಿತ್ರದ ಸೀಕ್ವೆಲ್ ‘ಜೈ ಹನುಮಾನ್’ ಸ್ಕ್ರಿಪ್ಟ್ ಪೂಜೆ ನಡೆದಿದೆ. ನಿರ್ದೇಶಕ ಪ್ರಶಾಂತ್ ವರ್ಮಾ ಅವರು ಸೀಕ್ವೆಲ್ ಬಗ್ಗೆ ಆಸಕ್ತಿ ತೋರಿಸಿದ್ದು, ಚಿತ್ರದ ಸೀಕ್ವೆಲ್ ಸ್ಕ್ರಿಪ್ಟ್ ಗೆ ಪೂಜೆ ಸಲ್ಲಿಸಿದ್ದಾರೆ.

ಪ್ರಶಾಂತ್ ವರ್ಮಾ ನಿರ್ದೇಶನದ, ತೇಜ ಸಜ್ಜಾ ನಟನೆಯ ‘ಹನುಮಾನ್’ ಸಿನಿಮಾ ಜನವರಿ 12ರಂದು ರಿಲೀಸ್ ಆಗಿತ್ತು. ವರಲಕ್ಷ್ಮಿ ಶರತ್‌ಕುಮಾರ್, ಕನ್ನಡದ ನಟಿ ಅಮೃತ ಅಯ್ಯರ್ ಮತ್ತು ವಿನಯ್ ರೈ ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಈ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಗೆಲುವು ಕಂಡಿದೆ. ಇದೀ ಚಿತ್ರದೊಂದಿಗೆ ಮಹೇಶ್ ಬಾಬೂ ನಿರ್ದೇಶನದ ಗುಂಟೂರು ಖಾರಂ ಚಿತ್ರ ಕೂಡ ಬಿಡುಗಡೆಯಾಗಿತ್ತು. ಮಿಶ್ರಪ್ರತಿಕ್ರಿಯೆಯ ಹೊರತಾಗಿಯೂ ಈ ಚಿತ್ರ ಉತ್ತಮ ಗಳಿಕೆ ಕಂಡಿತ್ತು. 

ಇನ್ನು ಹನುಮಾನ್ ಚಿತ್ರ ಕೂಡ ಉತ್ತಮ ಗ್ರಾಫಿಕ್ಸ್, ಕಥೆ, ಚಿತ್ರಕಥೆ ವಿಚಾರವಾಗಿ ಪ್ರೇಕ್ಷಕರ ಮನಗೆದ್ದಿತ್ತು. ಅಲ್ಲದೆ ಈ ಚಿತ್ರ ತಂಡ ಮಾರಾಟವಾಗುವ ಪ್ರತಿ ಟಿಕೆಟ್​ ಮೇಲೆ ಐದು ರೂಪಾಯಿ ಹಣವನ್ನು ರಾಮ ಮಂದಿರಕ್ಕೆ ನೀಡಲಾಗುವುದು ಎಂದು ಘೋಷಣೆ ಮಾಡಿತ್ತು. ಈ ಸಿನಿಮಾದ 53.28 ಲಕ್ಷ ಟಿಕೆಟ್​ಗಳು ಮಾರಾಟ ಆಗಿವೆ. ಈ ಮೂಲಕ 2.66 ಕೋಟಿ ರೂಪಾಯಿ ಮೊತ್ತವನ್ನು ಚಿತ್ರತಂಡ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದೆ. 

ಈ ಯಶಸ್ಸಿನ ಬೆನ್ನಲ್ಲೇ ನಿರ್ದೇಕರು ‘ಜೈ ಹನುಮಾನ್’ ಚಿತ್ರದ ಕೆಲಸ ಆರಂಭಿಸಿದ್ದಾರೆ. ‘ಹನುಮಾನ್’ ಸಿನಿಮಾ ಮೂಲಕ ನಿರ್ದೇಶಕ ಪ್ರಶಾಂತ್ ವರ್ಮಾ ರಾಷ್ಟ್ರವ್ಯಾಪಿ ಖ್ಯಾತಿ ಪಡೆದಿದ್ದು, ಈಗ ಸಿದ್ಧವಾಗುತ್ತಿರುವ ಸಿನಿಮಾ ಪ್ರಶಾಂತ್ ವರ್ಮಾ ಸಿನಿಮಾಟಿಕ್ ಯೂನಿವರ್ಸ್ (PVCU) ಅಡಿಯಲ್ಲಿ ಸಿದ್ಧವಾಗಲಿದೆ. ಈಗಾಗಲೇ ಚಿತ್ರಕ್ಕೆ ಸ್ಕ್ರಿಪ್ಟ್ ರೆಡಿ ಮಾಡಲಾಗಿದೆ. ಹೈದರಾಬಾದ್‌ನ ಹನುಮಾನ್ ದೇವಾಲಯದಲ್ಲಿ ಸ್ಕ್ರಿಪ್ಟ್ ಪೂಜೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಸಿನಿಮಾದ ಪಾತ್ರವರ್ಗ ಹಾಗೂ ತಾಂತ್ರಿಕ ವರ್ಗದ ಬಗ್ಗೆ ತಂಡ ಮಾಹಿತಿ ನೀಡಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT