ರಾಮ ಮಂದಿರ ಬಗ್ಗೆ ಸುದೀಪ್ ಮಾತು 
ಸಿನಿಮಾ ಸುದ್ದಿ

'ವಾಲ್ಮೀಕಿಗಳು ರೂಪಿಸಿದ ಶ್ರೀರಾಮ ನೀನು ನಮ್ಮ ಎದೆಯಲ್ಲಿ ಶಾಶ್ವತವಾಗಿ ನಿಂತೆ; ನಿನ್ನ ಕಣ್ತುಂಬಿಕೊಳ್ಳಲು ಎರಡೇ ಕಣ್ಣನೇಕೆ ಕೊಟ್ಟೆ'

ವಾಲ್ಮೀಕಿಗಳು ರೂಪಿಸಿದ ಶ್ರೀರಾಮ ನೀನು ನಮ್ಮ ಎದೆಯಲ್ಲಿ ಶಾಶ್ವತವಾಗಿ ನಿಂತೆ. ವರ್ಷಗಳ ಕಾಯುವಿಕೆ ನಂತರ ಇಂದು ವಿರಾಜಮಾನನಾದೆ ಗುಡಿಯೊಳಗೆ. ನಿನ್ನ ಕಣ್ತುಂಬಿಕೊಳ್ಳಲು ಎರಡೇ ಕಣ್ಣನೇಕೆ ಕೊಟ್ಟೆ, ನಿನ್ನ ಕೀರ್ತನೆಗೆ ಎರಡೇ ಕಿವಿಗಳು...

ಬೆಂಗಳೂರು: ವಾಲ್ಮೀಕಿಗಳು ರೂಪಿಸಿದ ಶ್ರೀರಾಮ ನೀನು ನಮ್ಮ ಎದೆಯಲ್ಲಿ ಶಾಶ್ವತವಾಗಿ ನಿಂತೆ. ವರ್ಷಗಳ ಕಾಯುವಿಕೆ ನಂತರ ಇಂದು ವಿರಾಜಮಾನನಾದೆ ಗುಡಿಯೊಳಗೆ. ನಿನ್ನ ಕಣ್ತುಂಬಿಕೊಳ್ಳಲು ಎರಡೇ ಕಣ್ಣನೇಕೆ ಕೊಟ್ಟೆ, ನಿನ್ನ ಕೀರ್ತನೆಗೆ ಎರಡೇ ಕಿವಿಗಳು...‘ ಎಂದು ಸುದೀಪ್ ಬರೆದುಕೊಂಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಸುದೀಪ್, ‘ರಾಮ ಜಯ ರಾಮ, ಆದಿ ಗುರು ಮಹರ್ಷಿ ಶ್ರೀ ವಾಲ್ಮೀಕಿ ಮೊದಲು ನಿಮ್ಮ ಕಥೆ ಹೇಳಿದರು. ವಾಲ್ಮೀಕಿಗಳು ರೂಪಿಸಿದ ಶ್ರೀರಾಮ ನೀನು ನಮ್ಮ ಎದೆಯಲ್ಲಿ ಶಾಶ್ವತವಾಗಿ ನಿಂತೆ. ವರ್ಷಗಳ ಕಾಯುವಿಕೆ ನಂತರ ಇಂದು ವಿರಾಜಮಾನನಾದೆ ಗುಡಿಯೊಳಗೆ. ನಿನ್ನ ಕಣ್ತುಂಬಿಕೊಳ್ಳಲು ಎರಡೇ ಕಣ್ಣನೇಕೆ ಕೊಟ್ಟೆ, ನಿನ್ನ ಕೀರ್ತನೆಗೆ ಎರಡೇ ಕಿವಿಗಳು...‘ ಎಂದು ಸುದೀಪ್ ಬರೆದುಕೊಂಡಿದ್ದಾರೆ.

‘ನಮ್ಮದು ಎಂತಹ ಪುಣ್ಯ. ಕರುನಾಡಿನಿಂದ ವಿಗ್ರಹವಾಗಿ ರೂಪುಗೊಂಡೆ. ಕರ್ನಾಟಕದ ಮಣ್ಣಿನ ಗರ್ಭದಿಂದ ಎದ್ದು ಬಂದೆ. ನಿನ್ನ ಆಲಯ ಕಟ್ಟಲು ಶ್ರೀ ವಿಶ್ವ ಪ್ರಸನ್ನ ತೀರ್ಥ ಗುರುಗಳಿಗೆ ಅದೃಷ್ಟ ಕೊಟ್ಟೆ. ಅರುಣ್‌ ಯೋಗರಾಜ್‌ ಅವರಿಗೆ ನಿನ್ನ ಕೆತ್ತಲು ಕಲಾಶೀರ್ವಾದವಾದೆ. ನಿನ್ನ ಪರಮ ಭಕ್ತ ಕನ್ನಡದ ಮಣ್ಣಿನ ವೀರ ಹನುಮಾನ. ಇದು ಕರ್ನಾಟಕಕ್ಕೆ ನಿಜವಾದ ಸಮ್ಮಾನ. ಜೈಶ್ರೀರಾಮ್‌’ ಎಂದು ಕಿಚ್ಚ ಬರೆದುಕೊಂಡಿದ್ದಾರೆ.

ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಲಾದ ರಾಮಮಂದಿರದಲ್ಲಿ ಇಂದು (ಸೋಮವಾರ) ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಅತ್ಯಂತ ಸಂಭ್ರಮದಿಂದ ನಡೆಯಿತು. ಇದೇ ವೇಳೆ ನಟ ಕಿಚ್ಚ ಸುದೀಪ್  ಅಯೋಧ್ಯೆಯ ರಾಮಮಂದಿರ ಮತ್ತು ಕರ್ನಾಟಕಕ್ಕೆ ದೊರಕಿರುವ ಅವಕಾಶ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಹಂಚಿಕೊಂಡಿದ್ದು ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT