ನಟಿ ಫವಿತ್ರಾ ಗೌಡ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ಪೋಸ್ಟ್ 
ಸಿನಿಮಾ ಸುದ್ದಿ

ದರ್ಶನ್ ಜೊತೆಗಿನ ಫೋಟೋ ಹಂಚಿಕೊಂಡ ಪವಿತ್ರ ಗೌಡ: ಕಾನೂನು ಹೋರಾಟದ ಎಚ್ಚರಿಕೆ ನೀಡಿದ ವಿಜಯಲಕ್ಷ್ಮಿ...!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ವೈಯಕ್ತಿಕ ಜೀವನ ಮತ್ತೆ ಸುದ್ದಿಯಾಗಿದೆ. ನಟಿ ಪವಿತ್ರ ಗೌಡ ಅವರು ತಾವು ಮತ್ತು ತಮ್ಮ ಪುತ್ರಿ ದರ್ಶನ್‌ ಅವರ ಜೊತೆ ಆತ್ಮೀಯವಾಗಿರುವ ಫೋಟೋ ಹಂಚಿಕೊಂಡು ಈ ಸಂಬಂಧಕ್ಕೆ 10 ವರ್ಷ ಎಂದು ಬರೆದುಕೊಂಡಿದ್ದು ಅದನ್ನು ನೋಡಿ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಕೆಂಡಮಂಡಲವಾಗಿದ್ದಾರೆ.

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ವೈಯಕ್ತಿಕ ಜೀವನ ಮತ್ತೆ ಸುದ್ದಿಯಾಗಿದೆ. ನಟಿ ಪವಿತ್ರ ಗೌಡ ಅವರು ತಾವು ಮತ್ತು ತಮ್ಮ ಪುತ್ರಿ ದರ್ಶನ್‌ ಅವರ ಜೊತೆ ಆತ್ಮೀಯವಾಗಿರುವ ಫೋಟೋ ಹಂಚಿಕೊಂಡು ಈ ಸಂಬಂಧಕ್ಕೆ 10 ವರ್ಷ ಎಂದು ಬರೆದುಕೊಂಡಿದ್ದು ಅದನ್ನು ನೋಡಿ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಕೆಂಡಮಂಡಲವಾಗಿದ್ದಾರೆ.

ಪವಿತ್ರಾ ಗೌಡ ಅವರು ನಿನ್ನೆ ಇನ್ಸ್ಟಾಗ್ರಾಂನಲ್ಲಿ ಈ ಫೋಟೋಗಳನ್ನು ಹಾಕಿ ಕ್ಯಾಪ್ಷನ್ ಬರೆದು ಪೋಸ್ಟ್‌ ಹಾಕುತ್ತಿದ್ದಂತೆ ಅದಕ್ಕೆ ವಿಜಯಲಕ್ಷ್ಮಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ವಿಜಯಲಕ್ಷ್ಮಿ ದರ್ಶನ್, ‘ಈ ಮಹಿಳೆಗೆ ಪ್ರಜ್ಞೆ ಇದ್ದಿದ್ದರೆ ಬೇರೊಬ್ಬರ ಗಂಡನ ಚಿತ್ರವನ್ನು ಪೋಸ್ಟ್ ಮಾಡುತ್ತಿರಲಿಲ್ಲ. ಈ ಕಾರ್ಯ ಆಕೆಯ ನೈತಿಕತೆ ಮತ್ತು ಆದರ್ಶ ಎಂಥಹದ್ದು ಎಂದು ತೋರಿಸುತ್ತದೆ. ವ್ಯಕ್ತಿಯೊಬ್ಬ ವಿವಾಹಿತನೆಂದು ತಿಳಿದಿದ್ದರೂ ಸಹ ಈಕೆ ತನ್ನ ವೈಯಕ್ತಿಕ ಅಗತ್ಯಗಳಿಗಾಗಿ ಮತ್ತು ಲಾಭಕ್ಕಾಗಿ ಹತ್ತಿರವಾಗುತ್ತಾಳೆ. ಖುಷಿ ಗೌಡ, ಪವಿತ್ರಾ ಮತ್ತು ಸಂಜಯ್ ಸಿಂಗ್ ಅವರ ಮಗಳು ಎಂಬುದನ್ನು ಸ್ಪಷ್ಟವಾಗಿ ಸಾಬೀತು ಮಾಡುತ್ತವೆ ಈ ಚಿತ್ರಗಳು. ನಾನು ಸಾಮಾನ್ಯವಾಗಿ ವೈಯಕ್ತಿಕ ವಿಷಯಗಳ ಬಗ್ಗೆ ಮಾತನಾಡಲು ಸಾಮಾಜಿಕ ಮಾಧ್ಯಮವನ್ನು ಬಳಸುವುದಿಲ್ಲ. ಆದರೆ ಈಗ ನನ್ನ ಕುಟುಂಬದ ಹಿತದೃಷ್ಟಿಯಿಂದ ಧ್ವನಿ ಎತ್ತುವ ಸಮಯ ಬಂದಿದೆ ಎಂದು ನಾನು ಭಾವಿಸುತ್ತೇನೆ. ಇಡೀ ಸಮಾಜಕ್ಕೆ ತಪ್ಪು ಚಿತ್ರಣ ನೀಡಲು ಯತ್ನಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ. ಪವಿತ್ರಾ ಗೌಡ ಹಾಗೂ ಅವರ ಪತಿ ಸಂಜಯ್ ಸಿಂಗ್​ರ ಹಳೆಯ ಚಿತ್ರಗಳನ್ನು ವಿಜಯಲಕ್ಷ್ಮಿ ದರ್ಶನ್ ತಮ್ಮ ಸಂದೇಶದೊಂದಿಗೆ ಹಂಚಿಕೊಂಡಿದ್ದಾರೆ.

ಈಗ ನನ್ನ ಕುಟುಂಬದ ಹಿತದೃಷ್ಟಿಯಿಂದ ಧ್ವನಿ ಎತ್ತುವ ಸಮಯ ಬಂದಿದೆ ಎಂದು ನಾನು ಭಾವಿಸುತ್ತೇನೆ. ಈ ರೀತಿ ಬೇರೆಯವರ ತೇಜೋವಧೆ ಮಾಡಲು ಯತ್ನಿಸಿದರೆ ಇಡೀ ಸಮಾಜಕ್ಕೆ ವಿಭಿನ್ನ ಚಿತ್ರಣ ನೀಡಲು ಯತ್ನಿಸುವವರ ವಿರುದ್ಧ ಕಠಿಣ ಕಾನೂನು ಕ್ರಮದ ಹೋರಾಟ ನಡೆಸಬೇಕಾಗುತ್ತದೆ ಎಂದು ಬರೆಯುವ ಮೂಲಕ ಸಂಜಯ್ ಸಿಂಗ್, ಖುಷಿ ಗೌಡ, ಶಾನ್ವಿ ಸಂಸೂರಿ ಹಾಗೂ ಪವಿತ್ರಾ ಗೌಡ ಇನ್ಸ್ಟಾಗ್ರಾಂ ಅಕೌಂಟ್ ಗೆ ವಿಜಯಲಕ್ಷ್ಮಿ ಟ್ಯಾಗ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT