ನಟಿ ಫವಿತ್ರಾ ಗೌಡ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ಪೋಸ್ಟ್ 
ಸಿನಿಮಾ ಸುದ್ದಿ

ದರ್ಶನ್ ಜೊತೆಗಿನ ಫೋಟೋ ಹಂಚಿಕೊಂಡ ಪವಿತ್ರ ಗೌಡ: ಕಾನೂನು ಹೋರಾಟದ ಎಚ್ಚರಿಕೆ ನೀಡಿದ ವಿಜಯಲಕ್ಷ್ಮಿ...!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ವೈಯಕ್ತಿಕ ಜೀವನ ಮತ್ತೆ ಸುದ್ದಿಯಾಗಿದೆ. ನಟಿ ಪವಿತ್ರ ಗೌಡ ಅವರು ತಾವು ಮತ್ತು ತಮ್ಮ ಪುತ್ರಿ ದರ್ಶನ್‌ ಅವರ ಜೊತೆ ಆತ್ಮೀಯವಾಗಿರುವ ಫೋಟೋ ಹಂಚಿಕೊಂಡು ಈ ಸಂಬಂಧಕ್ಕೆ 10 ವರ್ಷ ಎಂದು ಬರೆದುಕೊಂಡಿದ್ದು ಅದನ್ನು ನೋಡಿ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಕೆಂಡಮಂಡಲವಾಗಿದ್ದಾರೆ.

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ವೈಯಕ್ತಿಕ ಜೀವನ ಮತ್ತೆ ಸುದ್ದಿಯಾಗಿದೆ. ನಟಿ ಪವಿತ್ರ ಗೌಡ ಅವರು ತಾವು ಮತ್ತು ತಮ್ಮ ಪುತ್ರಿ ದರ್ಶನ್‌ ಅವರ ಜೊತೆ ಆತ್ಮೀಯವಾಗಿರುವ ಫೋಟೋ ಹಂಚಿಕೊಂಡು ಈ ಸಂಬಂಧಕ್ಕೆ 10 ವರ್ಷ ಎಂದು ಬರೆದುಕೊಂಡಿದ್ದು ಅದನ್ನು ನೋಡಿ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಕೆಂಡಮಂಡಲವಾಗಿದ್ದಾರೆ.

ಪವಿತ್ರಾ ಗೌಡ ಅವರು ನಿನ್ನೆ ಇನ್ಸ್ಟಾಗ್ರಾಂನಲ್ಲಿ ಈ ಫೋಟೋಗಳನ್ನು ಹಾಕಿ ಕ್ಯಾಪ್ಷನ್ ಬರೆದು ಪೋಸ್ಟ್‌ ಹಾಕುತ್ತಿದ್ದಂತೆ ಅದಕ್ಕೆ ವಿಜಯಲಕ್ಷ್ಮಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ವಿಜಯಲಕ್ಷ್ಮಿ ದರ್ಶನ್, ‘ಈ ಮಹಿಳೆಗೆ ಪ್ರಜ್ಞೆ ಇದ್ದಿದ್ದರೆ ಬೇರೊಬ್ಬರ ಗಂಡನ ಚಿತ್ರವನ್ನು ಪೋಸ್ಟ್ ಮಾಡುತ್ತಿರಲಿಲ್ಲ. ಈ ಕಾರ್ಯ ಆಕೆಯ ನೈತಿಕತೆ ಮತ್ತು ಆದರ್ಶ ಎಂಥಹದ್ದು ಎಂದು ತೋರಿಸುತ್ತದೆ. ವ್ಯಕ್ತಿಯೊಬ್ಬ ವಿವಾಹಿತನೆಂದು ತಿಳಿದಿದ್ದರೂ ಸಹ ಈಕೆ ತನ್ನ ವೈಯಕ್ತಿಕ ಅಗತ್ಯಗಳಿಗಾಗಿ ಮತ್ತು ಲಾಭಕ್ಕಾಗಿ ಹತ್ತಿರವಾಗುತ್ತಾಳೆ. ಖುಷಿ ಗೌಡ, ಪವಿತ್ರಾ ಮತ್ತು ಸಂಜಯ್ ಸಿಂಗ್ ಅವರ ಮಗಳು ಎಂಬುದನ್ನು ಸ್ಪಷ್ಟವಾಗಿ ಸಾಬೀತು ಮಾಡುತ್ತವೆ ಈ ಚಿತ್ರಗಳು. ನಾನು ಸಾಮಾನ್ಯವಾಗಿ ವೈಯಕ್ತಿಕ ವಿಷಯಗಳ ಬಗ್ಗೆ ಮಾತನಾಡಲು ಸಾಮಾಜಿಕ ಮಾಧ್ಯಮವನ್ನು ಬಳಸುವುದಿಲ್ಲ. ಆದರೆ ಈಗ ನನ್ನ ಕುಟುಂಬದ ಹಿತದೃಷ್ಟಿಯಿಂದ ಧ್ವನಿ ಎತ್ತುವ ಸಮಯ ಬಂದಿದೆ ಎಂದು ನಾನು ಭಾವಿಸುತ್ತೇನೆ. ಇಡೀ ಸಮಾಜಕ್ಕೆ ತಪ್ಪು ಚಿತ್ರಣ ನೀಡಲು ಯತ್ನಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ. ಪವಿತ್ರಾ ಗೌಡ ಹಾಗೂ ಅವರ ಪತಿ ಸಂಜಯ್ ಸಿಂಗ್​ರ ಹಳೆಯ ಚಿತ್ರಗಳನ್ನು ವಿಜಯಲಕ್ಷ್ಮಿ ದರ್ಶನ್ ತಮ್ಮ ಸಂದೇಶದೊಂದಿಗೆ ಹಂಚಿಕೊಂಡಿದ್ದಾರೆ.

ಈಗ ನನ್ನ ಕುಟುಂಬದ ಹಿತದೃಷ್ಟಿಯಿಂದ ಧ್ವನಿ ಎತ್ತುವ ಸಮಯ ಬಂದಿದೆ ಎಂದು ನಾನು ಭಾವಿಸುತ್ತೇನೆ. ಈ ರೀತಿ ಬೇರೆಯವರ ತೇಜೋವಧೆ ಮಾಡಲು ಯತ್ನಿಸಿದರೆ ಇಡೀ ಸಮಾಜಕ್ಕೆ ವಿಭಿನ್ನ ಚಿತ್ರಣ ನೀಡಲು ಯತ್ನಿಸುವವರ ವಿರುದ್ಧ ಕಠಿಣ ಕಾನೂನು ಕ್ರಮದ ಹೋರಾಟ ನಡೆಸಬೇಕಾಗುತ್ತದೆ ಎಂದು ಬರೆಯುವ ಮೂಲಕ ಸಂಜಯ್ ಸಿಂಗ್, ಖುಷಿ ಗೌಡ, ಶಾನ್ವಿ ಸಂಸೂರಿ ಹಾಗೂ ಪವಿತ್ರಾ ಗೌಡ ಇನ್ಸ್ಟಾಗ್ರಾಂ ಅಕೌಂಟ್ ಗೆ ವಿಜಯಲಕ್ಷ್ಮಿ ಟ್ಯಾಗ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT