ಕಾರ್ತಿಕ್ ಬಿಗ್ ಬಾಸ್ ಕನ್ನಡ ಸೀಸನ್ 10 ವಿನ್ನರ್ 
ಸಿನಿಮಾ ಸುದ್ದಿ

Big Boss Kannada SEASON 10: ಕಾರ್ತಿಕ್ ವಿನ್ನರ್, ಡ್ರೋನ್ ಪ್ರತಾಪ್‌ ರನ್ನರ್‌ ಅಪ್‌

ಬಿಗ್ ಬಾಸ್ ಕನ್ನಡ ಸೀಸನ್ 10ರ ಚಾಂಪಿಯನ್ ಆಗಿ ಕಾರ್ತಿಕ್ ಮಹೇಶ್ ಹೊರಹೊಮ್ಮಿದ್ದು, ಡ್ರೋನ್ ಪ್ರತಾಪ್‌ ರನ್ನರ್‌ ಅಪ್‌ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 10ರ ಚಾಂಪಿಯನ್ ಆಗಿ ಕಾರ್ತಿಕ್ ಮಹೇಶ್ ಹೊರಹೊಮ್ಮಿದ್ದು, ಡ್ರೋನ್ ಪ್ರತಾಪ್‌ ರನ್ನರ್‌ ಅಪ್‌ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.

ಈ ವಿನ್ನರ್​ ಪಟ್ಟಕ್ಕಾಗಿ ಸಾಕಷ್ಟು ಸ್ಪರ್ಧಿಗಳು ಹೋರಾಟ ನಡೆಸಿದ್ದರು. ಅದರಲ್ಲೂ ಸಂಗೀತಾ ಶೃಂಗೇರಿ, ವಿನಯ್​ ಗೌಡ ಮತ್ತು ಡ್ರೋನ್​ ಪ್ರತಾಪ್ ಅವರು ಬಿಗ್​ಬಾಸ್​​ ಸೀಸನ್​​ ವಿನ್ನರ್​ ಪಟ್ಟಕ್ಕಾಗಿ ಸಾಕಷ್ಟು ಟಾಸ್ಕ್​​ಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಸದ್ಯ ಈ ಇಬ್ಬರಲ್ಲಿ ಬಿಗ್​ಬಾಸ್​ ವಿನ್ನರ್​ ಪಟ್ಟಕ್ಕಾಗಿ ದೊಡ್ಡ ಫೈಟ್​ ನಡೆದಿತ್ತು. 

ಅಂತಿಮ ಮೂರರ ಸುತ್ತಿನಲ್ಲಿ ಸಂಗೀತ ಶೃಂಗೇರಿ ಅವರು ಎರಡನೇ ರನ್ನರ್ ಅಪ್ ಆಗಿ ಹೊರಬಂದಿದ್ದರು. ನಂತರ ವೇದಿಕೆಯ ಮೇಲೆ ಉಳಿದಿದ್ದು ಕಾರ್ತಿಕ್ ಮತ್ತು ಡ್ರೋಣ್ ಪ್ರತಾಪ್. ಕಿಚ್ಚನ ಒಂದು ಕೈಯಲ್ಲಿ ಕಾರ್ತಿಕ್ ಕೈ ಮತ್ತೊಂದು ಕೈಯಲ್ಲಿ ಪ್ರತಾಪ್‌ ಕೈ ಇತ್ತು. ಅದರಲ್ಲಿ ಸುದೀಪ್‌ ಅವರು ಕಾರ್ತಿಕ್ ಅವರ ಕೈಯನ್ನು ಎತ್ತಿ ಹಿಡಿದರು. ಅಂದರೆ ಡ್ರೋಣ್ ಅವರು ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ. ಅವರಿಗೆ ಹತ್ತು ಲಕ್ಷ ರೂಪಾಯಿಗಳ ಬಹುಮಾನ ಪಡೆದುಕೊಂಡಿದ್ದಾರೆ.

ಕೊನೆಯ ಕ್ಷಣದಲ್ಲಿ ಕೈ ಹಿಡಿದ ಅದೃಷ್ಟ
ಕೊನೆಯ ಕ್ಷಣದಲ್ಲಿ ಬಿಗ್​ಬಾಸ್​ ಮನೆಗೆ ಬರಲು ತೆಗೆದುಕೊಂಡ ನಿರ್ಣಯ ಕಾರ್ತಿಕ್ ಅವರ ಕೈಹಿಡಿದಿದೆ. ಹಲವು ಏಳು-ಬೀಳುಗಳಿದ್ದ ಪಯಣದಲ್ಲಿ ಕಾರ್ತಿಕ್ ಮಹೇಶ್ ಗಮ್ಯ ತಲುಪಿದ್ದಾರೆ. ಅವರಿಗೆ ಬರೋಬ್ಬರಿ 2,97,39,904 ಮತ ಗಳಿಸಿದ್ದಾರೆ. ಹಲವು ಏಳು-ಬೀಳು, ನೋವು, ಬೇಸರ, ಖುಷಿಗಳನ್ನು ಸಹ ಕಂಡಿದ್ದ ಡ್ರೋನ್ ಪ್ರತಾಪ್ ರನ್ನರ್ ಅಪ್ ಆಗಿದ್ದಾರೆ.

ಸ್ವತಃ ಕಾರ್ತಿಕ್ ಮಹೇಶ್ ಹೇಳಿಕೊಂಡಿರುವಂತೆ ಬಿಗ್​ಬಾಸ್​ಗೆ ಬರುವ ನಿರ್ಧಾರವನ್ನು ಒಂದೇ ದಿನದಲ್ಲಿ ತೆಗೆದುಕೊಂಡು ಅವರು ಬಿಗ್​ಬಾಸ್​ಗೆ ಬಂದರಂತೆ. ಆ ಆತುರದ ನಿರ್ಧಾರ ಅವರಿಗೆ ಗೆಲುವು ತಂದುಕೊಟ್ಟಿದೆ. ಆರನೇ ಕಂಟೆಸ್ಟೆಂಟ್ ಆಗಿ ಕಷ್ಟದಲ್ಲೇ ಕಾರ್ತಿಕ್ ಮಹೇಶ್ ಫಿನಾಲೆ ವಾರಕ್ಕೆ ಬಂದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT