ಅಮೂಲ್ಯ 
ಸಿನಿಮಾ ಸುದ್ದಿ

ಏಳು ವರ್ಷಗಳ ನಂತರ 'ಚೆಲುವಿನ ಚಿತ್ತಾರ' ಬೆಡಗಿ ಕಮ್ ಬ್ಯಾಕ್: ಪ್ರಜ್ವಲ್ ದೇವರಾಜ್ 'ಕರಾವಳಿ'ಯಲ್ಲಿ ಅಮೂಲ್ಯ!

ಕೊನೆಯದಾಗಿ ಗಣೇಶ್ ಅಭಿನಯದ ಮುಗುಳು ನಗೆ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಅಮೂಲ್ಯ, ಮದುವೆಯಾದ ನಂತರ ಮತ್ತು ಅವಳಿ ಗಂಡು ಮಕ್ಕಳ ಆರೈಕೆಗಾಗಿ ಬ್ರೇಕ್ ತೆಗೆದುಕೊಂಡಿದ್ದರು.

ಚೆಲುವಿನ ಚಿತ್ತಾರ ಮತ್ತು ಗಜಕೇಸರಿ ಖ್ಯಾತಿಯ ನಟಿ ಅಮೂಲ್ಯ ಕೆಲವು ವರ್ಷಗಳ ನಂತರ ಕಮ್ ಬ್ಯಾಕ್ ಮಾಡುತ್ತಿದ್ದಾರೆ. ಕೊನೆಯದಾಗಿ ಗಣೇಶ್ ಅಭಿನಯದ ಮುಗುಳು ನಗೆ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಅಮೂಲ್ಯ, ಮದುವೆಯಾದ ನಂತರ ಮತ್ತು ಅವಳಿ ಗಂಡು ಮಕ್ಕಳ ಆರೈಕೆಗಾಗಿ ಬ್ರೇಕ್ ತೆಗೆದುಕೊಂಡಿದ್ದರು.

ಏಳು ವರ್ಷಗಳ ನಂತರ ಮತ್ತೆ ಕ್ಯಾಮರಾ  ಮುಂದೆ ಬರಲು ಅಮೂಲ್ಯ ತಯಾರಿ ನಡೆಸುತ್ತಿದ್ದಾರೆ ಎನ್ನಲಾಗಿದೆ. ಪ್ರಜ್ವಲ್ ದೇವರಾಜ್ ಮತ್ತು ಗುರುದತ್ತ ಗಾಣಿಗ ಅವರ ಬಹು ನಿರೀಕ್ಷಿತ ಸಿನಿಮಾ ಕರಾವಳಿ ಮೂಲಕ ಅಮೂಲ್ಯ ಪುನಾರಾಗಮನ ಮಾಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರತಿಭಾವಂತ ಕಲಾವಿದರ ಹುಡುಕಾಟದಲ್ಲಿದ್ದ ನಿರ್ದೇಶಕರು, ಆ ಪಾತ್ರಕ್ಕೆ ಅಮೂಲ್ಯ ಸೂಕ್ತ ಎಂದು ನಿರ್ಧರಿಸಿದ್ದಾರೆ, ಈ ಸಂಬಂಧ ನಟಿಯ ಜೊತೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಶ್ರಾವಣಿ ಸುಬ್ರಹ್ಮಣ್ಯ ನಟಿ ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಅತಿ  ಶೀಘ್ರದಲ್ಲೇ ಈ ಸಂಬಂಧ ಅಧಿಕೃತ ಮಾಹಿತಿ ಹೊರಬೀಳುವ ಸಾಧ್ಯತೆಯಿದೆ.

ಬಾಲ ಕಲಾವಿದೆಯಾಗಿ ಸಿನಿಮಾ ಪಯಣ ಆರಂಭಿಸಿದ ಅಮೂಲ್ಯ 13ಕ್ಕೂ ಹೆಚ್ಚು ಚಿತ್ರಗಳಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಇದೇ ಮೊದಲ ಬಾರಿಗೆ ಪ್ರಜ್ವಲ್ ದೇವರಾಜ್ ಅವರೊಂದಿಗೆ ಕರಾವಳಿಯಲ್ಲಿ ತೆರೆ ಹಂಚಿಕೊಳ್ಳಲಿದ್ದಾರೆ.

ಕರಾವಳಿಯು ಈಗಾಗಲೇ ತನ್ನ ಫಸ್ಟ್ ಲುಕ್‌ನೊಂದಿಗೆ ಕುತೂಹಲ ಕೆರಳಿಸಿದೆ. ತುಳುನಾಡಿನ ಜನಪ್ರಿಯ ಕಂಬಳದ ಸುತ್ತ ಕೇಂದ್ರೀಕೃತವಾದ ಕಥೆ ಒಳಗೊಂಡಿದೆ. ಪ್ರಜ್ವಲ್ ದೇವರಾಜ್ ವಿಶಿಷ್ಟ ಫಸ್ಟ್ ಲುಕ್ ಮಾನವ ಮತ್ತು ಪ್ರಾಣಿಗಳ ನಡುವಿನ ಸಂಘರ್ಷದ ಸುಳಿವು ನೀಡುತ್ತದೆ.

ಪ್ರಜ್ವಲ್ ದೇವರಾಜ್

ಮೂಲಗಳ ಪ್ರಕಾರ, ಅಮೂಲ್ಯ ಪಾತ್ರವು ಕಥೆಗೆ ಆಸಕ್ತಿದಾಯಕ ಆಯಾಮವನ್ನು ತರಲು ಸಿದ್ಧವಾಗಿದೆ. ಏತನ್ಮಧ್ಯೆ, ನಿರ್ದೇಶಕರು ಉಳಿದ ಕಲಾವಿದರ ಆಯ್ಕೆಯಲ್ಲಿ ತೊಡಗಿಕೊಂಡಿದ್ದಾರೆ. ಫೆಬ್ರವರಿ ಮಧ್ಯದಲ್ಲಿ ಚಿತ್ರೀಕರಣ ಪ್ರಾರಂಭಿಸಲು ಪ್ಲಾನ್ ಮಾಡಲಾಗಿದ್ದು, ಮುಂದಿನ ಕೆಲ ದಿನಗಳಲ್ಲಿ ಮಾಹಿತಿ ಹೊರಬೀಳಲಿದೆ.

ಅಂಬಿ ನಿಂಗ್ ವಯಸ್ಸಾಯ್ತೋ ನಂತರ ನಿರ್ದೇಶಕ ಗುರುದತ್ತ ಗಾಣಿಗ ಎರಡನೇ ಸಿನಿಮಾ ಕರಾವಳಿ. ವಿಕೆ ಫಿಲ್ಮ್ಸ್ ಸಹಯೋಗದೊಂದಿಗೆ ಗುರುದತ್ತ ಗಾಣಿಗ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಸಿನಿಮಾ ನಿರ್ಮಿಸಲಿದ್ದಾರೆ. ಅಭಿಮನ್ಯು ಸದಾನಂದ್ ಛಾಯಾಗ್ರಹಣ ಮತ್ತು ಸಚಿನ್ ಬಸ್ರೂರ್ ಸಂಗೀತವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT