ಸುದೀಪ್ 
ಸಿನಿಮಾ ಸುದ್ದಿ

ನಾನು ದೋಷರಹಿತನಲ್ಲ, ಪರಿಪೂರ್ಣನೂ ಅಲ್ಲ: ಕಿಚ್ಚ ಸುದೀಪ್ ಹೀಗೆ ಹೇಳಿದ್ದೇಕೆ?

ಕೆಲವು ವರ್ಷಗಳ ಹಿಂದೆ ನಾನು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್‌ ಮಾಮ ಅವರೊಂದಿಗೆ ಕ್ಯಾಮೆರಾ ಎದುರಿಸಿದೆ. ʻಬ್ರಹ್ಮʼ ಚಿತ್ರದ ಶೂಟಿಂಗ್‌ ಸಮಯ. ಈ ಸಿನಿಮಾ ಶೂಟಿಂಗ್‌ ಕೆಲವೇ ವರ್ಷವಾಗಿದೆ ಎಂಬ ಅನುಭವ.

ಬೆಂಗಳೂರು: ಕೆಲವು ವರ್ಷಗಳ ಹಿಂದೆ ನಾನು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್‌ ಮಾಮ ಅವರೊಂದಿಗೆ ಕ್ಯಾಮೆರಾವನ್ನು ಎದುರಿಸಿದೆ. ʻಬ್ರಹ್ʼʼ ಚಿತ್ರದ ಶೂಟಿಂಗ್‌ ಸಮಯ. ಈ ಸಿನಿಮಾ ಶೂಟಿಂಗ್‌ ಕೆಲವೇ ವರ್ಷವಾಗಿದೆ ಎಂಬ ಅನುಭವ. ಆಗಲೇ ಇದಕ್ಕೆ 28 ವರ್ಷಗಳು ತುಂಬಿವೆ. ಎಲ್ಲರಿಗೂ ಧನ್ಯವಾದ’ ಎಂದು ಟ್ವಿಟ್ಟರ್ ನಲ್ಲಿ ಸುದೀಪ್ ಬರೆದುಕೊಂಡಿದ್ದಾರೆ.

ನಟ ಕಿಚ್ಚ ಸುದೀಪ್‌ ಸಿನಿಮಾ ರಂಗಕ್ಕೆ ಕಾಲಿಟ್ಟು ಇಂದಿಗೆ 28 ವರ್ಷಗಳು ಕಳೆದಿವೆ. ಸುದೀಪ್‌ ಮೊದಲಿಗೆ 1997ರಲ್ಲಿ ಬಿಡುಗಡೆಯಾದ ʻತಾಯವ್ವʼ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಆ ಸಿನಿಮಾಗಾಗಿ ಅವರು ಜನವರಿ 31ರಂದು ಮೊದಲನೆಯದಾಗಿ ಬಣ್ಣ ಹಚ್ಚಿ, ಕ್ಯಾಮೆರಾ ಮುಂದೆ ನಿಂತಿದ್ದರು. ಇದೀಗ ಕಿಚ್ಚ ಅವರು ಮೊದಲ ದಿನ ಕ್ಯಾಮೆರಾ ಎದುರಿಸಿದ್ದನ್ನು ಟ್ವೀಟ್‌ ಮೂಲಕ ಹೇಳಿಕೊಂಡಿದ್ದಾರೆ.

ಈ ಅದ್ಭುತ ಮನರಂಜನಾ ಕ್ಷೇತ್ರದಲ್ಲಿ 28 ಸುಂದರ ವರ್ಷಗಳು. ನನ್ನ ಜೀವನದ ಅತ್ಯಂತ ಸುಂದರ ಭಾಗವಾಗಿದೆ. ಈ ಉಡುಗೊರೆಗಾಗಿ ನಾನು ದೇವರಿಗೆ ಧನ್ಯವಾದ ತಿಳಿಸುತ್ತೇನೆ. ನನ್ನ ಪೋಷಕರು, ಕುಟುಂಬ, ಎಲ್ಲಾ ಅಮೂಲ್ಯ ತಂತ್ರಜ್ಞರು, ಬರಹಗಾರರು, ನಿರ್ಮಾಪಕರು, ನನ್ನ ಸಹ-ನಟರು, ಮಾಧ್ಯಮ, ಮನರಂಜನಾ ಚಾನೆಲ್‌ಗಳು, ವಿತರಕರು, ಪ್ರದರ್ಶಕರಿಗೆ ನನ್ನ ಪ್ರಯಾಣದ ಭಾಗವಾಗಿರುವ ಪ್ರತಿಯೊಬ್ಬರಿಗೂ ಧನ್ಯವಾದಗಳು. ಯಾವಾಗಲೂ ನನ್ನನ್ನು ಪ್ರೀತಿಸುತ್ತಿರುವುದಕ್ಕಾಗಿ, ನನ್ನ ಜೀವನದಲ್ಲಿ ನನ್ನ ಅತ್ಯಮೂಲ್ಯ ಗಳಿಕೆಯಾಗಿರುವ ಅಭಿಮಾನಿಗಳ ರೂಪದಲ್ಲಿ ನನ್ನ ಎಲ್ಲಾ ಸ್ನೇಹಿತರಿಗೆ ಒಂದು ದೊಡ್ಡ ಅಪ್ಪುಗೆ.

ಇದು ರೋಲರ್-ಕೋಸ್ಟರ್ ಸವಾರಿಯಾಗಿದೆ. ನಾನು ಜೀವನದಲ್ಲಿ ಗಳಿಸಿದ ಅತ್ಯಂತ ಅಮೂಲ್ಯ ವಿಚಾರ ಎಂದರೆ ಅದು ಫ್ಯಾನ್ಸ್. ಅವರಿಗೂ ಧನ್ಯವಾದ. ನಾನು ದೋಷರಹಿತನಲ್ಲ, ಪರಿಪೂರ್ಣನಲ್ಲ, ನಾನು ನನ್ನ ಕೈಲಾದಷ್ಟು ಪ್ರಯತ್ನಿಸಿದ್ದೇನೆ. ಮತ್ತು ಅವಕಾಶಗಳು ಬಂದಾಗ ನನ್ನ ಅತ್ಯುತ್ತಮವಾದದ್ದನ್ನು ನೀಡಿದ್ದೇನೆ. ನಾನು ಹೇಗಿದ್ದೇನೆಯೋ ಹಾಗೆಯೇ ನನ್ನನ್ನು ಸ್ವೀಕರಿಸಿದ್ದಕ್ಕಾಗಿ ಎಲ್ಲರಿಗೂ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!