ಕೆಟಿಎಂ ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

ದೀಕ್ಷಿತ್ ಶೆಟ್ಟಿ ಅಭಿನಯದ 'ಕೆಟಿಎಂ' ಚಿತ್ರ ಫೆಬ್ರವರಿ 16ಕ್ಕೆ ತೆರೆಗೆ

ದಿಯಾ ಚಿತ್ರದ ಮೂಲಕ ಸಣ್ಣ ಪರದೆಯಿಂದ ಬೆಳ್ಳಿತೆರೆಗೆ ಎಂಟ್ರಿ ಕೊಟ್ಟಿರುವ ದೀಕ್ಷಿತ್ ಶೆಟ್ಟಿ ಅಭಿನಯದ 'ಕೆಟಿಎಂ' ಚಿತ್ರ ಈಗ ಬಿಡುಗಡೆಗೆ ಸಿದ್ಧವಾಗಿದ್ದು, ಫೆಬ್ರವರಿ 14ಕ್ಕೆ ತೆರೆಗೆ ಬರಲಿದೆ.

ಬೆಂಗಳೂರು: ದಿಯಾ ಚಿತ್ರದ ಮೂಲಕ ಸಣ್ಣ ಪರದೆಯಿಂದ ಬೆಳ್ಳಿತೆರೆಗೆ ಎಂಟ್ರಿ ಕೊಟ್ಟಿರುವ ದೀಕ್ಷಿತ್ ಶೆಟ್ಟಿ ಅಭಿನಯದ 'ಕೆಟಿಎಂ' ಚಿತ್ರ ಈಗ ಬಿಡುಗಡೆಗೆ ಸಿದ್ಧವಾಗಿದ್ದು, ಫೆಬ್ರವರಿ 14ಕ್ಕೆ ತೆರೆಗೆ ಬರಲಿದೆ.

ದಿಯಾ ನಂತರ ಇತರ ಭಾಷೆಗಳಲ್ಲೂ ಅಭಿನಯಿಸಿರುವ ದೀಕ್ಷಿತ್ ಶೆಟ್ಟಿ ಅವರು, ಖ್ಯಾತ ತೆಲುಗು ನಟ ನಾನಿ ಅವರ ದಸರಾದಲ್ಲೂ ಅಭಿನಯಿಸಿದ್ದಾರೆ. ಅಲ್ಲದೆ ಅವರ ಮುಂದಿನ ಚಿತ್ರ ದಿ ಗರ್ಲ್‌ಫ್ರೆಂಡ್‌ನಲ್ಲಿ ರಶ್ಮಿಕಾ ಮಂದಣ್ಣ ಅವರೊಂದಿಗೆ ಪರದೆ ಹಂಚಿಕೊಳ್ಳುತ್ತಿದ್ದಾರೆ.

ರೊಮ್ಯಾಂಟಿಕ್ ಕಥೆ ಎಂದು ಬಿಂಬಿಸಲಾದ ಕೆಟಿಎಂ ಚಿತ್ರ  ಟೀಸರ್ ಮೂಲಕ ಗಮನ ಸೆಳೆದಿದ್ದು, ಹಾಡುಗಳು ಸಹ ಸಾಮಾಜಿಕ ಮಾಧ್ಯಮದಲ್ಲಿ ಸದ್ದು ಮಾಡುತ್ತಿವೆ. ಇತ್ತೀಚಿನ ಟ್ರ್ಯಾಕ್‌ಗಳಾದ ಸೋಜಿಗ ಮತ್ತು ಅಯ್ಯಯ್ಯೋ ಹಾಡುಗಳು ಲಕ್ಷಾಂತರ ವೀಕ್ಷಣೆ ಪಡೆದಿವೆ.

ಚೇತನ್ ರಾವ್ ಸಂಗೀತ ಸಂಯೋಜನೆ ಮತ್ತು ಅರಸು ಅಂಥಾರೆ ಬರೆದಿರುವ ಸೋಜಿಗ ಹಾಡಿಗೆ ಸಂಜಿತ್ ಹೆಗಡೆ ಅವರ ಗಾಯನವಿದೆ. ಅಯ್ಯಯ್ಯೋ ಎಂಬ ಮತ್ತೊಂದು ಹಾಡವನ್ನು ಆಂಟೋನಿ ದಾಸ್ ಅವರು ಹಾಡಿದ್ದು, ಅವರಿಗೆ ಆರವ್ ಜೋಶಿ ಮತ್ತು ಚೇತನ್ ರಾವ್ ಅವರು ಸಾಥ್ ನೀಡಿದ್ದಾರೆ.

ಈ ಹಿಂದೆ ಅಥರ್ವ ಚಿತ್ರವನ್ನು ನಿರ್ದೇಶಿಸಿದ್ದ ಅರುಣ್ ಕುಮಾರ್ ನಿರ್ದೇಶನದ ಕೆಟಿಎಂ ಚಿತ್ರದಲ್ಲಿ ದೀಕ್ಷಿತ್ ಶೆಟ್ಟಿ ನಾಲ್ಕು ವಿಭಿನ್ನ ಶೇಡ್ ನ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕಾಜಲ್ ಕುಂದರ್ ಮತ್ತು ಸಂಜನಾ ದಾಸ್ ಚಿತ್ರದ ನಾಯಕಿಯರಾಗಿದ್ದಾರೆ. ಉಳಿದಂತೆ ಉಷಾ ಭಂಡಾರಿ, ಪ್ರಕಾಶ್ ತುಮ್ಮಿನಾಡು, ಶನಿಲ್ ಗುರು, ಬಾಬು ಹಿರಣ್ಣಯ್ಯ, ದೇವ್ ದೇವಯ್ಯ, ಅಭಿಷೇಕ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ರಕ್ಷಯ್ ಸಹಯೋಗದಲ್ಲಿ ಮಹಾಸಿಂಹ ಮೂವೀಸ್ ಅಡಿಯಲ್ಲಿ ಆದಿ ವಿನಯ್ ಅವರು ಕೆಟಿಎಂ ಚಿತ್ರ ನಿರ್ಮಿಸಿದ್ದಾರೆ. ಸಿನಿಮಾಗೆ ನವೀನ್ ಅವರ ಛಾಯಾಗ್ರಹಣ ಇದ್ದು, ಅರ್ಜುನ್ ಕಿಟ್ಟು ಸಂಕಲನವಿದೆ. 

ಚಿತ್ರವನ್ನು ಉಡುಪಿ, ಮಂಗಳೂರು, ಕಾರ್ಕಳ, ಬೆಂಗಳೂರು ಮತ್ತು ಇತರ ಸ್ಥಳಗಳಲ್ಲಿ ಚಿತ್ರೀಕರಿಸಲಾಗಿದ್ದು, ಫೆಬ್ರವರಿ 16 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT