ದರ್ಶನ್ 
ಸಿನಿಮಾ ಸುದ್ದಿ

ಜೈಲಿನಲ್ಲಿರುವ ದರ್ಶನ್ ಭೇಟಿಯಾದ ಮೀನಾ ತೂಗುದೀಪ್ ಹಾಗೂ ದಿನಕರ್: ಮಗನನ್ನು ಸಂತೈಸಿದ ತಾಯಿ!

ದರ್ಶನ್ ಅವರನ್ನು ಅವರ ತಾಯಿ ಮೀನಾ ತೂಗುದೀಪ ಶ್ರೀನಿವಾಸ್ ಅವರು ತಮ್ಮ ಕಿರಿಯ ಮಗ ದಿನಕರ್ ತೂಗುದೀಪ ಅವರೊಂದಿಗೆ ಭೇಟಿಯಾದರು.

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಕೈದಿ ಆಗಿರುವ ದರ್ಶನ್‌ ಅವರನ್ನ ನೋಡಲು ಸೋಮವಾರ ತಾಯಿ ಮೀನಾ ತೂಗುದೀಪ ಹಾಗೂ ಸೋಹದರ ದಿನಕರ್‌ ತೂಗುದೀಪ ಆಗಮಿಸಿದ್ದರು.

33 ವರ್ಷದ ಎಸ್ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ನಟ ದರ್ಶನ್ ಪರಪ್ಪನ ಅಗ್ರಹಾರದ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿದ್ದಾರೆ. ದರ್ಶನ್ ಅವರನ್ನು ಅವರ ತಾಯಿ ಮೀನಾ ತೂಗುದೀಪ ಶ್ರೀನಿವಾಸ್ ಅವರು ತಮ್ಮ ಕಿರಿಯ ಮಗ ದಿನಕರ್ ತೂಗುದೀಪ ಅವರೊಂದಿಗೆ ಭೇಟಿಯಾದರು.

ಸೋಮವಾರ ಬೆಳಗ್ಗೆ 10.30ರ ಸುಮಾರಿಗೆ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಮತ್ತು ಅವರ ಮಗ ಮೀನಾ ಮತ್ತು ದಿನಕರ್ ಅವರನ್ನು ಜೈಲಿನಲ್ಲಿ ಭೇಟಿಯಾದರು. ಮೀನಾ ಮತ್ತು ದಿನಕರ್ ಕಳೆದ ಕೆಲವು ವರ್ಷಗಳಿಂದ ದರ್ಶನ್ ಜೊತೆ ವೈಯಕ್ತಿಕ ಕಾರಣಗಳಿಗಾಗಿ ಮಾತನಾಡುತ್ತಿರಲಿಲ್ಲ. 10 ದಿನ ಜೈಲು ವಾಸ ಅನುಭವಿಸಿರುವ ದರ್ಶನ್ ಮೌನವಾಗಿದ್ದು ಆತಂಕಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ. ಆದರೆ, ತನ್ನ ತಾಯಿಯನ್ನು ನೋಡಿದ ನಂತರ, ಅವರು ಅಳಲು ತೋಡಿಕೊಂಡಿದ್ದು, ಮೀನಾ ಅವರು ಸಾಂತ್ವನ ಹೇಳಿದ್ದಾರೆಂದು ತಿಳಿದು ಬಂದಿದೆ.

ಕೊಲೆ ಕೇಸ್‌ನಲ್ಲಿ ದರ್ಶನ್ ಸಿಲುಕಿದಾಗಿನಿಂದಲೂ ತಾಯಿ ಮೀನಾ ತೂಗುದೀಪ ಹಾಗೂ ತಮ್ಮ ದಿನಕರ್ ತೂಗುದೀಪ ಮೌನಕ್ಕೆ ಜಾರಿದ್ದರು. ಹೊರಗೆಲ್ಲೂ ಕಾಣಿಸಿಕೊಂಡಿರಲಿಲ್ಲ. ಇದೀಗ ಜೈಲಿನಲ್ಲಿರುವ ದರ್ಶನ್‌ ಅವರನ್ನ ಕಾಣಲು ಇಬ್ಬರೂ ಪರಪ್ಪನ ಅಗ್ರಹಾರಕ್ಕೆ ಆಗಮಿಸಿದ್ದರು. ಜೈಲಿನಲ್ಲಿ ಮಗನನ್ನ ಕಂಡು ತಾಯಿ ಮೀನಾ ತೂಗುದೀಪ ಭಾವುಕರಾಗಿದ್ದಾರೆ. ಸಹೋದರ ದಿನಕರ್ ತೂಗುದೀಪ ಕೂಡ ಸಂಕಟ ಪಟ್ಟಿದ್ದಾರೆ. ಬಹುದಿನಗಳ ಬಳಿಕ ಅಮ್ಮ ಹಾಗೂ ತಮ್ಮನನ್ನ ಕಂಡು ದರ್ಶನ್‌ ಕಣ್ಣೀರಿಟ್ಟಿದ್ದಾರೆ.

ಈ ನಡುವೆ ದರ್ಶನ್ ಅಭಿಮಾನಿಗಳಿದ ಪರಪ್ಪನ ಅಗ್ರಹಾರ ಔಟ್ ಪೋಸ್ಟ್ ಪೊಲೀಸರು ಪರದಾಡುವಂತಾಗಿದೆ. ಅವರು ತಮ್ಮ ನೆಚ್ಚಿನ ನಟನನ್ನು ಭೇಟಿ ಮಾಡಲು ಅನುಮತಿಸದಿದ್ದರೂ ಸಹ, ಜೈಲಿನ ಸುತ್ತಮುತ್ತಲಿ ನಿಯಮಿತವಾಗಿ ಹಾಜರಾಗುತ್ತಿದ್ದಾರೆ. ದರ್ಶನ್ ಕೂಡ ತಮ್ಮ ಅಭಿಮಾನಿಗಳನ್ನು ಭೇಟಿಯಾಗಲು ಜೈಲಿಗೆ ಬಂದು ಸಮಯ ವ್ಯರ್ಥ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ. ನಟ ಮತ್ತು ಇತರ ಆರೋಪಿಗಳ ನ್ಯಾಯಾಂಗ ಬಂಧನವು ಜುಲೈ 4 ರವರೆಗೆ ಇರಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT