ನಾಟ್ ಔಟ್ ಸಿನಿಮಾ ಸ್ಟಿಲ್ 
ಸಿನಿಮಾ ಸುದ್ದಿ

ಫಸ್ಟ್ ಹಾಫ್ ಫ್ರೀ, ಸೆಕೆಂಡ್ ಹಾಫ್‌ಗೆ ಟಿಕೆಟ್‌: 'ನಾಟ್ ಔಟ್' ಚಿತ್ರತಂಡದಿಂದ ವಿನೂತನ ಪ್ರಚಾರ ತಂತ್ರ!

ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಮೊದಲ ಬಾರಿಗೆ ಚಿತ್ರತಂಡ ಪ್ರೇಕ್ಷಕರಿಗೆ ಸಿನಿಮಾದ ಗುಣಮಟ್ಟವನ್ನು ತಿಳಿಸುವ ಉದ್ದೇಶದಿಂದ ಫಸ್ಟ್ ಆಫ್​ ಸಿನಿಮಾವನ್ನು ಉಚಿತವಾಗಿ ಪ್ರೇಕ್ಷಕರಿಗೆ ನೋಡಲು ಅವಕಾಶ ನೀಡಿದೆ.

'ನಾಟ್ ಔಟ್' ಚಿತ್ರತಂಡ ಕನ್ನಡ ಸಿನಿಪ್ರೇಮಿಗಳನ್ನು ಸೆಳೆಯಲು ಹೊಸ ತಂತ್ರಗಾರಿಕೆಯನ್ನು ಪರಿಚಯಿಸುತ್ತಿದೆ. ಜುಲೈ 19 ರಂದು ಥಿಯೇಟರ್‌ಗೆ ಚಿತ್ರದ ನಿರ್ಮಾಪಕರು, ನಾಟ್ ಔಟ್‌ನ ಮೊದಲಾರ್ಧವನ್ನು ಉಚಿತವಾಗಿ ಪ್ರದರ್ಶಿಸಲಾಗುವುದು ಎಂದು ಘೋಷಿಸಿದ್ದಾರೆ. ಆದಾಗ್ಯೂ, ದ್ವಿತೀಯಾರ್ಧವನ್ನು ವೀಕ್ಷಿಸಲು ಪ್ರೇಕ್ಷಕರು ಟಿಕೆಟ್ ಖರೀದಿಸಬೇಕು. ಈ ತಂತ್ರವನ್ನು ಇತ್ತೀಚೆಗೆ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಘೋಷಿಸಲಾಯಿತು

ಡಾರ್ಕ್ ಕಾಮಿಡಿ, 'ನಾಟ್ ಔಟ್' ಸಿನಿಮಾವನ್ನು ರಾಷ್ಟ್ರಕೂಟ ಪಿಕ್ಚರ್ಸ್ ಅಡಿಯಲ್ಲಿ ವಿ ರವಿಕುಮಾರ್ ಮತ್ತು ಶಂಶುದ್ದೀನ್ ನಿರ್ಮಿಸಿದ್ದಾರೆ. ಅಜಯ ಪೃಥ್ವಿ ಮತ್ತು ರಚನಾ ಇಂದರ್ ಪ್ರಧಾನ ಪಾತ್ರದಲ್ಲಿ ನಟಿಸಿದ್ದಾರೆ.

ಅಂಬರೀಶ್​ ಎಂ. ನಿರ್ದೇಶನದ ಚಿತ್ರದ ಟ್ರೇಲರ್​​ ಇತ್ತೀಚೆಗೆ ಬಿಡುಗಡೆಯಾಗಿದೆ. ನಟ ಶ್ರೀನಗರ ಕಿಟ್ಟಿ, ನಿರ್ದೇಶಕ ಸಿಂಪಲ್​ ಸುನಿ ಹಾಗೂ ಮಂಗಳೂರಿನಿಂದ ಬೆಂಗಳೂರಿಗೆ ಕೇವಲ ನಾಲ್ಕು ಗಂಟೆಗಳಲ್ಲಿ ಮಗುವನ್ನು ಆಂಬ್ಯುಲೆನ್ಸ್​ನಲ್ಲಿ ಕರೆತಂದ ಚಾಲಕ ಹನೀಫ್ ಸೇರಿ ಟ್ರೇಲರ್ ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಮೊದಲ ಬಾರಿಗೆ ಚಿತ್ರತಂಡ ಪ್ರೇಕ್ಷಕರಿಗೆ ಸಿನಿಮಾದ ಗುಣಮಟ್ಟವನ್ನು ತಿಳಿಸುವ ಉದ್ದೇಶದಿಂದ ಫಸ್ಟ್ ಆಫ್​ ಸಿನಿಮಾವನ್ನು ಉಚಿತವಾಗಿ ಪ್ರೇಕ್ಷಕರಿಗೆ ನೋಡಲು ಅವಕಾಶ ನೀಡಿದೆ. ಆದರೆ ಸೆಕೆಂಡ್ ಹಾಫ್ ಸಿನಿಮಾ ನೋಡುವ ಕುತೂಹಲವಿದ್ದರೆ ಮಧ್ಯಂತರದಲ್ಲಿ ಟಿಕೆಟ್ ಖರೀದಿಸಬೇಕು.

ನಾಟ್ ಔಟ್ ಲಾಕ್ ಡೌನ್​ನಲ್ಲಿ ನಾನು ಬರೆದ ಕಥೆ. ನನ್ನ ಕಥೆಯನ್ನು ಮೆಚ್ಚಿ ರಾಷ್ಟ್ರಕೂಟ ಪಿಕ್ಚರ್ಸ್ ನಿರ್ಮಾಣಕ್ಕೆ ಮುಂದಾದರು. ಟೊರೊಂಟೊದಲ್ಲಿ ಅಭಿನಯ ಕಲಿತು ಬಂದಿರುವ ಅಜಯ್ ಪೃಥ್ವಿ ಸಿನಿಮಾದಲ್ಲಿ ನಟಿಸಿದ್ದಾರೆ ಎಂದು ನಿರ್ದೇಶಕ ಅಂಬರೀಷ್ ತಿಳಿಸಿದ್ದಾರೆ. ನಾಟ್ ಔಟ್ ಪರಿಕಲ್ಪನೆಯು ಹುಲಿ-ಕುರಿ ಆಟದಿಂದ ಪ್ರೇರಿತವಾಗಿದೆ, ಇದು ಕರ್ನಾಟಕ, ತಮಿಳುನಾಡು ಮತ್ತು ಆಂಧ್ರಪ್ರದೇಶದ ಗಡಿಯುದ್ದಕ್ಕೂ ಜನಪ್ರಿಯ ಹಳ್ಳಿಯ ಆಟವಾಗಿದೆ.

ನಾಟ್ ಔಟ್ ಚಿತ್ರಕ್ಕೆ ಜೂಡಾ ಸ್ಯಾಂಡಿ ಅವರ ಸಂಗೀತ ಮತ್ತು ಹಾಲೇಶ್ ಅವರ ಛಾಯಾಗ್ರಹಣವಿದೆ. ರಚನಾ ಇಂದರ್ ನರ್ಸ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ಈ ಚಿತ್ರದಲ್ಲಿ ಕಾಕ್ರೋಚ್ ಸುಧೀ, ಗೋಪಾಲಕೃಷ್ಣ ದೇಶಪಾಂಡೆ, ಗೋವಿಂದೇಗೌಡ, ಅಶ್ವಿನ್ ಹಾಸನ್, ಪ್ರಶಾಂತ್ ಸಿದ್ದಿ, ರವಿಶಂಕರ್ ಮತ್ತು ಸಲ್ಮಾನ್ ಕೂಡ ನಟಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Kerala, Karnataka Bypoll & Assam, Puducherry Election 2026 Live Updates | ಅಸ್ಸಾಂ, ಕೇರಳ, ಪುದುಚೆರಿ, ಕರ್ನಾಟಕದ 2 ಕ್ಷೇತ್ರಗಳಲ್ಲಿ ಮತದಾನ ಪ್ರಗತಿಯಲ್ಲಿ

ಲೆಬನಾನ್ ಮೇಲೆ ದಾಳಿ: ಅಮೆರಿಕಾ ವಿರುದ್ಧ ಇರಾನ್ ತೀವ್ರ ಕಿಡಿ; ಮಾತುಕತೆಗೂ ಮುನ್ನವೇ ಕದನ ವಿರಾಮ ಉಲ್ಲಂಘನೆ, ಸಂಧಾನ ಪ್ರಯತ್ನ ಅರ್ಥಹೀನ ಎಂದ ಟೆಹ್ರಾನ್

ಕದನ ವಿರಾಮ ಉಲ್ಲಂಘಿಸಿ ಲೆಬನಾನ್ ಮೇಲೆ ಇಸ್ರೇಲ್ ದಾಳಿ: ಪ್ರತೀಕಾರಕ್ಕೆ ಇರಾನ್ ಮುಂದು, ಹಾರ್ಮುಜ್ ಮಾರ್ಗ ಮತ್ತೆ ಬಂದ್..!

ಲೆಬನಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಹಿಜ್ಬುಲ್ಲಾ ರಾಕೆಟ್ ದಾಳಿ, ಸಂಘರ್ಷ ಮತ್ತಷ್ಟು ಉದ್ನಿಗ್ನ ಸಾಧ್ಯತೆ

IPL 2026: KL Rahul 92 ರನ್; ಕೊನೆಯ ಎಸೆತದಲ್ಲಿ ಎಡವಿದ ಡೆಲ್ಲಿ, 1 ರನ್‌ನಿಂದ GT ಗೆ ರೋಚಕ ಜಯ!

SCROLL FOR NEXT