ಭೈರತಿ ರಣಗಲ್ ಸಿನಿಮಾ ಸ್ಟಿಲ್ 
ಸಿನಿಮಾ ಸುದ್ದಿ

'ಭೈರತಿ ರಣಗಲ್' ಆಡಿಯೋ ಹಕ್ಕು ಭಾರೀ ಬೆಲೆಗೆ ಆನಂದ್ ಆಡಿಯೋ ಪಾಲು!

ಶಿವರಾಜಕುಮಾರ್ ಅಭಿನಯದ ಬಹು ನಿರೀಕ್ಷಿತ ಆಕ್ಷನ್ ಥ್ರಿಲ್ಲರ್ ಭೈರತಿ ರಣಗಲ್ ಇತ್ತೀಚೆಗೆ ಶೂಟಿಂಗ್ ಪೂರ್ಣಗೊಳಿಸಿದೆ. ನರ್ತನ್ ನಿರ್ದೇಶನದ ಈ ಚಿತ್ರವು 2017 ರ ಚಲನಚಿತ್ರ ಮಫ್ತಿ ಫ್ರೀಕ್ವೆಲ್ ಆಗಿದೆ.

ಶಿವರಾಜಕುಮಾರ್ ಅಭಿನಯದ ಬಹು ನಿರೀಕ್ಷಿತ ಆಕ್ಷನ್ ಥ್ರಿಲ್ಲರ್ ಭೈರತಿ ರಣಗಲ್ ಇತ್ತೀಚೆಗೆ ಶೂಟಿಂಗ್ ಪೂರ್ಣಗೊಳಿಸಿದೆ. ನರ್ತನ್ ನಿರ್ದೇಶನದ ಈ ಚಿತ್ರವು 2017 ರ ಚಲನಚಿತ್ರ ಮಫ್ತಿ ಫ್ರೀಕ್ವೆಲ್ ಆಗಿದೆ. ಗೀತಾ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಗೀತಾ ಶಿವರಾಜಕುಮಾರ್ ಈ ಸಿನಿಮಾ ನಿರ್ಮಿಸಿದ್ದಾರೆ.

ಆರಂಭದಲ್ಲಿ ಸ್ವಾತಂತ್ರ್ಯ ದಿನದಂದು ಬಿಡುಗಡೆ ಮಾಡಲು ಉದ್ದೇಶಿಸಲಾಗಿತ್ತು. ಆದರೆ ನಿರ್ದೇಶಕರು ಸಿನಿಮಾ ಬಿಡುಗಡೆಯನ್ನು ಮುಂದೂಡಲು ನಿರ್ಧರಿಸಿದ್ದಾರೆ. ಹೊಸ ಬಿಡುಗಡೆ ದಿನಾಂಕವನ್ನು ಇನ್ನೂ ಘೋಷಿಸಬೇಕಾಗಿದೆ.

ಭೈರತಿ ರಣಗಲ್ ಪಾತ್ರದಲ್ಲಿ ಶಿವರಾಜಕುಮಾರ್ ನಟಿಸಿರುವ ಈ ಚಿತ್ರದಲ್ಲಿ ರುಕ್ಮಿಣಿ ವಸಂತ್ ಅವರ ಪಾತ್ರದ ವಿವರಗಳನ್ನು ಇಲ್ಲಿಯವರೆಗೆ ಮುಚ್ಚಿಡಲಾಗಿದೆ. ಆದರೆ, ಭೈರತಿ ರಣಗಲ್ ನಲ್ಲಿ ಸಪ್ತ ಸಾಗರದಾಚೆ ಎಲ್ಲೋ ನಟ ಡಾಕ್ಟರ್ ಪಾತ್ರ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಿಡುಗಡೆ ದಿನಾಂಕ ಸಮೀಪಿಸುತ್ತಿದ್ದಂತೆ ಅವರ ಪಾತ್ರದ ಕುರಿತು ಹೆಚ್ಚಿನ ಮಾಹಿತಿಯನ್ನು ಬಹಿರಂಗಪಡಿಸಲಾಗುತ್ತದೆ ಎಂದು ತಿಳಿದು ಬಂದಿದೆ.

ಏತನ್ಮಧ್ಯೆ, ಭೈರತಿ ರಣಗಲ್ ಚಿತ್ರದ ಆಡಿಯೊ ಹಕ್ಕುಗಳನ್ನು ಆನಂದ್ ಆಡಿಯೊ ಗಣನೀಯ ಬೆಲೆಗೆ ಪಡೆದುಕೊಂಡಿದೆ ಎಂದು ನಿರ್ಮಾಪಕರು ಘೋಷಿಸಿದ್ದಾರೆ. ಸಂಗೀತ ನಿರ್ದೇಶಕ ರವಿ ಬಸ್ರೂರು ಚಿತ್ರಕ್ಕೆ ಮೂರು ಹಾಡುಗಳನ್ನು ರಚಿಸಿದ್ದಾರೆ. ಅಂತಿಮ ಬಿಡುಗಡೆ ದಿನಾಂಕ ಸೇರಿದಂತೆ ಹೆಚ್ಚಿನ ಅಪ್ ಡೇಟ್ ಗಳನ್ನು ಜುಲೈ 12 ರಂದು ಶಿವರಾಜಕುಮಾರ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಹಂಚಿಕೊಳ್ಳಲಾಗುತ್ತದೆ ಎಂದು ತಿಳಿದು ಬಂದಿದೆ. ಬಹು ಭಾಷೆಗಳಲ್ಲಿ ಡಬ್ ಮಾಡಿ ಬಿಡುಗಡೆಯಾಗಲಿರುವ ಈ ಚಿತ್ರವು ಸೆಪ್ಟೆಂಬರ್ ಮೂರನೇ ವಾರದಲ್ಲಿ ಚಿತ್ರಮಂದಿರಗಳಲ್ಲಿ ರಿಲೀಸ್ ಆಗಬಹುದು ಎಂದು ಹೇಳಲಾಗಿದೆ.

ಭೈರತಿ ರಣಗಲ್‌ನಲ್ಲಿ ಅವಿನಾಶ್, ದೇವರಾಜ್, ಛಾಯಾ ಸಿಂಗ್, ಬಾಬು ಹಿರಣ್ಣಯ್ಯ, ಮಧು ಗುರುಸ್ವಾಮಿ ಮತ್ತು ಗೋಪಾಲಕೃಷ್ಣ ದೇಶಪಾಂಡೆ ಪ್ರಮುಖ ಪಾತ್ರಗಳಲ್ಲಿದ್ದಾರೆ. ಚಿತ್ರಕ್ಕೆ ನವೀನ್ ಕುಮಾರ್ ಛಾಯಾಗ್ರಹವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT