ನಟ ಗಣೇಶ್ 
ಸಿನಿಮಾ ಸುದ್ದಿ

'ಕೃಷ್ಣಂ ಪ್ರಣಯ ಸಖಿ' ನನ್ನ ವೃತ್ತಿಜೀವನದ ಅತಿ ದೊಡ್ಡ ಬಜೆಟ್ ಚಿತ್ರ: ನಟ ಗಣೇಶ್

ಚಿತ್ರದಲ್ಲಿ ಅರ್ಜುನ್ ಜನ್ಯ ಸಂಯೋಜಿಸಿರುವ ಆರು ಹಾಡುಗಳಿವೆ. ಎರಡು ಹಾಡು ಈಗಾಗಲೇ ಬಿಡುಗಡೆಯಾಗಿದೆ ಮತ್ತು ಚಿನ್ನಮ್ಮ ಟ್ರ್ಯಾಕ್ ಪ್ರೇಕ್ಷಕರ ಗಮನ ಸೆಳೆದಿದೆ.

ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ಕೃಷ್ಣಂ ಪ್ರಣಯ ಸಖಿ ಆಗಸ್ಟ್ 15 ರಂದು ಬಿಡುಗಡೆಯಾಗಲಿದೆ. ಸಿನಿಮಾ ಬಿಡುಗಡೆಗೆ ಕುತೂಹಲದಿಂದ ಕಾಯುತ್ತಿರುವ ನಟ ಗಣೇಶ್, ಈಚಿತ್ರ ತನ್ನ ವೃತ್ತಿಜೀವನದ ಅತಿದೊಡ್ಡ ಬಜೆಟ್ ಚಿತ್ರವಾಗಿದೆ ಎಂದು ಹೇಳಿದ್ದಾರೆ.

ದಂಡುಪಾಳ್ಯ ನಿರ್ದೇಶಕ ಶ್ರೀನಿವಾಸ್ ರಾಜು ಚಿತ್ರದ ಕಥೆಯನ್ನು ಹೇಳಿದಾಗ, ಇದು ನನ್ನ ಪ್ರಕಾರದ ಬದಲಾವಣೆಯಾಗಬಹುದು ಎಂದು ನಾನು ಭಾವಿಸಿದೆ. ಆದರೆ ಎಂಟು ನಾಯಕಿಯರಿದ್ದಾರೆ ಎಂದು ಅವರು ಹೇಳಿದಾಗ, ಈ ಕಥೆಯು ನನ್ನೊಂದಿಗೆ ಆಳವಾಗಿ ಸಂಪರ್ಕ ಹೊಂದಿದೆ ಎಂದು ನನಗೆ ತಿಳಿಯಿತು ಎಂದು ಗಣೇಶ್ ಹಂಚಿಕೊಂಡಿದ್ದಾರೆ. ಕೃಷ್ಣಂ ಪ್ರಣಯ ಸಖಿ ಬಲವಾದ ಕಥಾ ನಿರೂಪಣೆಯನ್ನು ಹೊಂದಿದೆ. ಕನ್ನಡ ಚಲನಚಿತ್ರೋದ್ಯಮದ ಹಿರಿಯ ನಟರೊಂದಿಗೆ ಅಭಿನಯಿಸಲು ಸಂತೋಷವಾಗಿದೆ ಮತ್ತು ನನ್ನ ಈ ಸಿನಿ ಜರ್ನಿಯನ್ನು ಪ್ರೇಕ್ಷಕರು ಸಂಪೂರ್ಣವಾಗಿ ಆನಂದಿಸುತ್ತಾರೆ ಎಂದು ನಾನು ನಂಬಿದ್ದೇನೆ ಎಂದು ಹೇಳಿದ್ದಾರೆ.

ಮಾಧ್ಯಮ ಸಂವಾದದಲ್ಲಿ ಮಾತನಾಡಿದ ನಿರ್ದೇಶಕ ಶ್ರೀನಿವಾಸ್ ರಾಜು, ಈ ಕಥೆ ಗಣೇಶ್‌ಗೆ ಹೇಳಿ ಮಾಡಿಸಿದಂತಿದೆ ಮತ್ತು ಅವರು ಸೇರಿದಂತೆ ಇಡೀ ಚಿತ್ರತಂಡದ ಅಭಿನಯವು ಅತ್ಯುತ್ತಮವಾಗಿದೆ. ತಾಂತ್ರಿಕ ಅಂಶಗಳೂ ಶ್ಲಾಘನೀಯ. ಚಿತ್ರದಲ್ಲಿ ಅರ್ಜುನ್ ಜನ್ಯ ಸಂಯೋಜಿಸಿರುವ ಆರು ಹಾಡುಗಳಿವೆ. ಎರಡು ಹಾಡು ಈಗಾಗಲೇ ಬಿಡುಗಡೆಯಾಗಿದೆ ಮತ್ತು ಚಿನ್ನಮ್ಮ ಟ್ರ್ಯಾಕ್ ಪ್ರೇಕ್ಷಕರ ಗಮನ ಸೆಳೆದಿದೆ ಎಂದಿದ್ದಾರೆ. ತ್ರಿಶೂಲ್ ಎಂಟರ್‌ಟೈನ್‌ಮೆಂಟ್ ಬ್ಯಾನರ್ ಅಡಿಯಲ್ಲಿ ಪ್ರಶಾಂತ್ ಜೆ ರುದ್ರಪ್ಪ ನಿರ್ಮಿಸಿರುವ ಈ ಚಿತ್ರದ ತಾರಾಬಳಗದಲ್ಲಿ ಮಾಳವಿಕಾ ನಾಯರ್ ಮತ್ತು ಶರಣ್ ಶೆಟ್ಟಿ ಜೊತೆಗೆ ಹಿರಿಯ ನಟರಾದ ಶ್ರೀನಿವಾಸ ಮೂರ್ತಿ, ಸಾಧು ಕೋಕಿಲ, ರಂಗಾಯಣ ರಘು, ಶಿವದ್ವಾಜ್ ಮತ್ತು ಗಿರಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT