ಸದಾನಂದ ಸುವರ್ಣ 
ಸಿನಿಮಾ ಸುದ್ದಿ

'ಘಟಶ್ರಾದ್ಧ' ನಿರ್ಮಾಪಕ ಸದಾನಂದ ಸುವರ್ಣ ವಿಧಿವಶ

ಅವರ ನಿರ್ದೇಶನದ 'ಕೋರ್ಟ್‌ ಮಾರ್ಷಲ್' ನಾಟಕವೂ ರಂಗಾಸಕ್ತರ ಮೆಚ್ಚುಗೆಗೆ ಪಾತ್ರವಾಗಿತ್ತು. ಮುಂಬೈನಲ್ಲಿ ರಾತ್ರಿ ಶಾಲೆಯಲ್ಲಿ ಕಲಿತು, ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದರು.

ಮಂಗಳೂರು: 'ಘಟಶ್ರಾದ್ಧ' ಹಾಗೂ ಗುಡ್ಡದ ಭೂತ ಧಾರವಾಹಿ ಸೇರಿದಂತೆ ಹಲವು ಜನಪ್ರಿಯ ಸಿನಿಮಾ ನಿರ್ಮಿಸಿದ್ದ ಕನ್ನಡದ ಹೆಸರಾಂತ ನಿರ್ಮಾಪಕರಾದ ಸದಾನಂದ ಸುವರ್ಣ (93) ಅವರು ಮಂಗಳೂರಿನಲ್ಲಿ ನಿಧನರಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿಯವರಾದ ಅವರು 1931, ಡಿಸೆಂಬರ್ 24 ರಂದು ಜನಿಸಿದ್ದರು. ಅವರು ನಿರ್ಮಿಸಿದ ಮೊದಲ ಸಿನಿಮಾ ಘಟಶ್ರಾದ್ಧ. ಗಿರೀಶ್ ಕಾಸರವಳ್ಳಿ ನಿರ್ದೇಶನದ ಮೊದಲ ಸಿನಿಮಾ‌ವಿದು. ಬಳಿಕ ಗಿರೀಶ್ ಕಾಸರವಳ್ಳಿ ನಿರ್ದೇಶಿಸಿದ ಮನೆ, ಕುಬಿ ಮತ್ತು ಇಯಾಲ, ತಬರನ ಕಥೆ ಸಿನಿಮಾಗಳ ಕಾರ್ಯನಿರ್ವಾಹಕ ನಿರ್ಮಾಪಕರಾಗಿದ್ದರು. ದೂರದರ್ಶನಕ್ಕೆ ಗುಡ್ಡದ ಭೂತ ಧಾರಾವಾಹಿ ನಿರ್ಮಿಸಿ, ನಿರ್ದೇಶಿಸಿದ್ದರು. ಇದು ಪ್ರಕಾಶ್ ರೈ ಅವರಿಗೆ ಜನಪ್ರಿಯತೆ ತಂದು ಕೊಟ್ಟಿತು. ದೂರದರ್ಶನಕ್ಕೆ‌ ಅವರ ನಿರ್ದೇಶನದ, ಶಿವರಾಮ ಕಾರಂತ ಅವರ ಸಂದರ್ಶನದ 'ಹುಚ್ಚು ಮನಸ್ಸಿನ ಹತ್ತು ಮುಖಗಳು' ಹತ್ತು ಕಂತುಗಳಲ್ಲಿ ಪ್ರಸಾರವಾಗಿತ್ತು.

ಅವರ ನಿರ್ದೇಶನದ 'ಕೋರ್ಟ್‌ ಮಾರ್ಷಲ್' ನಾಟಕವೂ ರಂಗಾಸಕ್ತರ ಮೆಚ್ಚುಗೆಗೆ ಪಾತ್ರವಾಗಿತ್ತು. ಮುಂಬೈನಲ್ಲಿ ರಾತ್ರಿ ಶಾಲೆಯಲ್ಲಿ ಕಲಿತು, ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದರು. ರಂಗಭೂಮಿಯಲ್ಲಿಯೂ ಸಹ ಸದಾನಂದ ಸುವರ್ಣ ಸಕ್ರಿಯರಾಗಿದ್ದರು, ಇದರ ಜೊತೆಗೆ ‘ಉರುಳು’, ‘ಧರ್ಮಚಕ್ರ’, ‘ಸುಳಿ’, ‘ಡೊಂಕುಬಾಲ’ ಇನ್ನೂ ಕೆಲವು ನಾಟಕಗಳನ್ನು ಸದಾನಂದ ಸುವರ್ಣ ನಿರ್ದೇಶಿಸಿದ್ದರು. ಸದಾನಂದ ಸುವರ್ಣ ನಿರ್ಮಾಣ ಮಾಡಿದ್ದ ‘ಘಟಶ್ರಾದ್ಧ’ ಸಿನಿಮಾಕ್ಕೆ ಕೇಂದ್ರ ಸರ್ಕಾರವು ಸುವರ್ಣ ಕಮಲ ನೀಡಿತ್ತು.

ಚಿಕ್ಕ ವಯಸ್ಸಿನಲ್ಲೇ ಮಂಗಳೂರು ರಂಗಭೂಮಿಗೆ ಸೇರಿದ ಅವರು ತಮ್ಮ ಸೃಜನಶೀಲ ಪ್ರತಿಭೆಯ ಚಿನ್ನದ ಛಾಪು ಮೂಡಿಸಿದರು. ‘ಉರುಳು’, ‘ಕೋರ್ಟ್ ಮಾರ್ಷಲ್’, ‘ಮಳೆ ನಿಂತ ಮೇಲೆ’ ಮುಂತಾದ ನಾಟಕಗಳನ್ನು ನಿರ್ದೇಶಿಸಿದ್ದಾರೆ.ಸುವರ್ಣ ಅವರು ಕರ್ನಾಟಕದಲ್ಲಿ ರಂಗಭೂಮಿ ಮತ್ತು ಚಿತ್ರರಂಗವನ್ನು ಶ್ರೀಮಂತಗೊಳಿಸಿದ ನೂರಾರು ಯುವ ಮತ್ತು ಹಿರಿಯ ಕಲಾವಿದರನ್ನು ಬೆಳೆಸಿದ ಅನನ್ಯ ರಂಗಭೂಮಿ ದಾರ್ಶನಿಕ ಎಂದು ಪರಿಗಣಿಸಲ್ಪಟ್ಟರು.

ಸದಾನಂದ ಸುವರ್ಣ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಹಿರಿಯ ರಂಗಕರ್ಮಿ, ಚಲನಚಿತ್ರ ನಿರ್ದೇಶಕ- ನಿರ್ಮಾಪಕ ಸದಾನಂದ ಸುವರ್ಣರ ನಿಧನದ ಸುದ್ದಿ ಕೇಳಿ ದು:ಖವಾಯಿತು. ಸದಾನಂದ ಸುವರ್ಣರು ನಿರ್ಮಿಸಿದ್ದ ‘‘ಘಟಶ್ರಾದ್ಧ’’ ಚಿತ್ರ ಮತ್ತು ನಿರ್ದೇಶಿಸಿದ್ದ ಕೆ.ಪಿ.ಪೂರ್ಣಚಂದ್ರ ತೇಜಸ್ವಿಯವರ ‘’ಕುಬಿ ಮತ್ತು ಇಯಾಳ’’ ಕತೆಯನ್ನಾಧರಿಸಿದ ಚಿತ್ರಗಳೆರಡೂ ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿಗಳಿಗೆ ಭಾಜನವಾಗಿವೆ.

ನೂರಾರು ಕನ್ನಡ ಮತ್ತು ತುಳು ನಾಟಕಗಳನ್ನು ನಿರ್ದೇಶಿಸಿದ್ದ ಸುವರ್ಣರ ರಂಗಗರಡಿಯಿಂದ ಬಂದಿರುವ ಹಲವಾರು ಪ್ರತಿಭಾವಂತ ನಟ-ನಟಿಯರು ಕಲಾಜಗತ್ತಿನಲ್ಲಿ ಬದುಕು ಕಟ್ಟಿಕೊಂಡಿದ್ದಾರೆ. ಸದಾನಂದ ಸುವರ್ಣರನ್ನು ಕಳೆದುಕೊಂಡಿರುವ ಅವರ ಶಿಷ್ಯವರ್ಗ ಮತ್ತು ಅಭಿಮಾನಿ ಬಳಗದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT