ನಟ ರಕ್ಷಿತ್ ಶೆಟ್ಟಿ 
ಸಿನಿಮಾ ಸುದ್ದಿ

ಕಾಪಿ ರೈಟ್ಸ್ ಉಲ್ಲಂಘನೆ ವಿರುದ್ಧ ನ್ಯಾಯಾಲಯದಲ್ಲಿ ಹೋರಾಟ: ರಕ್ಷಿತ್ ಶೆಟ್ಟಿಯ ಪರಂವಃ ಬಹಿರಂಗ ಪತ್ರ

ಈ ಸಂಬಂಧ ತನ್ನ ಇನ್‌ಸ್ಟಾಗ್ರಾಮ್ ಪುಟದಲ್ಲಿ ಬಹಿರಂಗ ಪತ್ರ ಬಿಡುಗಡೆ ಮಾಡಿರುವ ಪರಂವಃ, ಈ ಪ್ರಕರಣದ ವಿರುದ್ಧ ನ್ಯಾಯಾಲಯದಲ್ಲಿ ಹೋರಾಡಲು ಪ್ರೊಡಕ್ಷನ್ ಹೌಸ್ ನಿರ್ಧರಿಸಿದೆ ಎಂದು ಹೇಳಿದೆ.

ಬೆಂಗಳೂರು: ಕಾಪಿ ರೈಟ್ಸ್ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನಟ, ನಿರ್ಮಾಪಕ ರಕ್ಷಿತ್ ಶೆಟ್ಟಿ ಅವರ ವಿರುದ್ಧ ಎಫ್ ಐಆರ್ ದಾಖಲಾಗಿದ್ದು, ಈ ಕುರಿತು ಪ್ರತಿಕ್ರಿಯಿಸಿರುವ ಅವರ ಪರಂವಃ ಸ್ಟುಡಿಯೋಸ್, ನ್ಯಾಯಾಲಯದಲ್ಲಿ ಹೋರಾಟ ನಡೆಸುವುದಾಗಿ ಹೇಳಿದೆ.

ಈ ಸಂಬಂಧ ತನ್ನ ಇನ್‌ಸ್ಟಾಗ್ರಾಮ್ ಪುಟದಲ್ಲಿ ಬಹಿರಂಗ ಪತ್ರ ಬಿಡುಗಡೆ ಮಾಡಿರುವ ಪರಂವಃ, ಈ ಪ್ರಕರಣದ ವಿರುದ್ಧ ನ್ಯಾಯಾಲಯದಲ್ಲಿ ಹೋರಾಡಲು ಪ್ರೊಡಕ್ಷನ್ ಹೌಸ್ ನಿರ್ಧರಿಸಿದೆ ಎಂದು ಹೇಳಿದೆ.

ರಕ್ಷಿತ್ ಶೆಟ್ಟಿ ನಿರ್ಮಾಣದ 'ಬ್ಯಾಚುಲರ್ ಪಾರ್ಟಿ' ಸಿನಿಮಾ ಇತ್ತೀಚೆಗೆ ಬಿಡುಗಡೆಯಾಗಿದ್ದು, ಈ ಚಿತ್ರದಲ್ಲಿ 'ಗಾಳಿಮಾತು' ಹಾಗೂ 'ನ್ಯಾಯ ಎಲ್ಲಿದೆ' ಎಂಬ ಹಾಡುಗಳನ್ನು ಅನುಮತಿ ಇಲ್ಲದೇ ಕದ್ದಿದ್ದಾರೆ ಎಂದು ಆರೋಪಿಸಿ MRT ಮ್ಯೂಸಿಕ್ ಪ್ರಕರಣ ದಾಖಲಿಸಿದೆ.

ಜುಲೈ 15 ರಂದು ರಕ್ಷಿತ್ ಶೆಟ್ಟಿ ಮತ್ತು ಅವರ ನಿರ್ಮಾಣ ಸಂಸ್ಥೆ ಪರಂವಃ ವಿರುದ್ಧ ಎಂಆರ್‌ಟಿ ಮ್ಯೂಸಿಕ್‌ನ ಪಾಲುದಾರ ನವೀನ್ ಕುಮಾರ್ ಅವರು ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ ಮತ್ತು ಈ ಸಂಬಂಧ ನಟ ರಕ್ಷಿತ್ ಶೆಟ್ಟಿ ಅವರಿಗೆ ನೋಟಿಸ್ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎಫ್‌ಐಆರ್‌ನಲ್ಲಿ, ರಕ್ಷಿತ್ ಶೆಟ್ಟಿ ಅವರು ಪ್ರಸಾರ ಮತ್ತು ಮಾಲೀಕತ್ವದ ಹಕ್ಕುಗಳನ್ನು ಖರೀದಿಸದೆ ಹಕ್ಕುಸ್ವಾಮ್ಯ ಕಾಯ್ದೆಯನ್ನು ಉಲ್ಲಂಘಿಸಿ ಈ ಹಾಡುಗಳನ್ನು ಬಳಸಿದ್ದಾರೆ ಎಂದು ಆರೋಪಿಸಲಾಗಿದೆ.

ಆದಾಗ್ಯೂ, ಬಹಿರಂಗ ಪತ್ರದಲ್ಲಿ, ಪರಂವಃ ಸ್ಟುಡಿಯೋಸ್, ವಿವಾದದಲ್ಲಿರುವ ಹಾಡುಗಳನ್ನು ಚಿತ್ರದಲ್ಲಿ ಪರೋಕ್ಷವಾಗಿ ಬಳಸಲಾಗಿದೆ ಎಂದು ಹೇಳಿದೆ. ಒಂದು ದೃಶ್ಯದಲ್ಲಿ, ಶಾಲಾ ಬಾಲಕಿ ತನ್ನ ತರಗತಿಯಲ್ಲಿದ್ದಾಗ ಒಂದು ಹಾಡನ್ನು ಹಾಡುತ್ತಾಳೆ ಮತ್ತು ಇನ್ನೊಂದು ಹಾಡಿಗೆ ಅದರ ಕಿರು ತುಣುಕು ಹಿನ್ನೆಲೆಯಲ್ಲಿ ಟಿವಿಯಲ್ಲಿ ಪ್ಲೇ ಮಾಡುವುದನ್ನು ತೋರಿಸಲಾಗಿದೆ.

ಬ್ಯಾಚುಲರ್ ಪಾರ್ಟಿ' ಚಿತ್ರ ಬಿಡುಗಡೆಗೆ ಮುನ್ನ ನಾವು MRT ಯೊಂದಿಗೆ ಮಾತನಾಡಿದ್ದೇವೆ. ಆದರೆ ಉಲ್ಲೇಖಿಸಿದ ಬೆಲೆ ನಮ್ಮ ಬಜೆಟ್‌ಗೆ ಮೀರಿದೆ ಮತ್ತು ಮಾತುಕತೆಗೆ ಮುಕ್ತವಾಗಿಲ್ಲ ಎಂದು ಪತ್ರದಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

SCROLL FOR NEXT