ಮಾರ್ಟಿನ್ ಚಿತ್ರ 
ಸಿನಿಮಾ ಸುದ್ದಿ

Dhruva Sarja ಅಭಿನಯದ 'ಮಾರ್ಟಿನ್'ಗೆ ಧೋಖಾ; ಗ್ರಾಫಿಕ್ ಡಿಸೈನರ್ ಬಂಧನ

ನಟ ಧ್ರುವ ಸರ್ಜಾ ಅಭಿನಯದ ಮಾರ್ಟಿನ್ ಚಿತ್ರಕ್ಕೆ ಗ್ರಾಫಿಕ್ಸ್ ಮಾಡುವುದಾಗಿ ಹೇಳಿ ಸುಮಾರು 3.20 ಕೋಟಿ ರೂ ಹಣ ವಂಚನೆ ಮಾಡಿದ ಆರೋಪದ ಮೇರೆಗೆ ಗ್ರಾಫಿಕ್ಸ್ ವಿನ್ಯಾಸಕರನೊಬ್ಬನ್ನು ಬಸವೇಶ್ವರನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ನಟ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ಚಿತ್ರ ಮಾರ್ಟಿನ್ ಚಿತ್ರಕ್ಕೆ ಗ್ರಾಫಿಕ್ಸ್ ಮಾಡುವುದಾಗಿ ಕೋಟ್ಯಂತರ ರೂ ಹಣ ವಂಚನೆ ಮಾಡಿದ್ದ ಆರೋಪದ ಮೇರೆಗೆ ಗ್ರಾಫಿಕ್ಸ್ ವಿನ್ಯಾಸಕರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಹೌದು.. ನಟ ಧ್ರುವ ಸರ್ಜಾ ಅಭಿನಯದ ಮಾರ್ಟಿನ್ ಚಿತ್ರಕ್ಕೆ ಗ್ರಾಫಿಕ್ಸ್ ಮಾಡುವುದಾಗಿ ಹೇಳಿ ಸುಮಾರು 3.20 ಕೋಟಿ ರೂ ಹಣ ವಂಚನೆ ಮಾಡಿದ ಆರೋಪದ ಮೇರೆಗೆ ಗ್ರಾಫಿಕ್ಸ್ ವಿನ್ಯಾಸಕರನೊಬ್ಬನ್ನು ಬಸವೇಶ್ವರನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ ಮಹದೇವಪುರದ ನಿವಾಸಿ ಸತ್ಯರೆಡ್ಡಿ ಎಂಬುವವರನ್ನು ಬಂಧಿಸಲಾಗಿದ್ದು, ಚಿತ್ರತಂಡದ ದೂರಿನ ಮೇರೆಗೆ ಈತನನ್ನು ಬಂಧಿಸಲಾಗಿದೆ ಎನ್ನಲಾಗಿದೆ.

ಈ ವಂಚನೆ ಸಂಬಂಧ ಬಸವೇಶ್ವರನಗರ ಠಾಣೆಗೆ ಮಾರ್ಟಿನ್ ಚಲನಚಿತ್ರದ ನಿರ್ಮಾಪಕ ಉದಯ್‌ ಮೆಹ್ತಾ ದೂರು ನೀಡಿದ್ದರು. ಈ ವಂಚನೆ ಪ್ರಕರಣ ದಾಖಲಾದ ಬಳಿಕ ನಗರ ತೊರೆದು ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಆರೋಪಿ ತಲೆಮರೆಸಿಕೊಂಡಿದ್ದ. ಇದೀಗ ಕಾರ್ಯಾಚರಣೆ ನಡೆಸಿದ ಪೊಲೀಸರು ಆತನನ್ನು ಬಂಧಿಸಿ ಕರೆ ತಂದಿದ್ದಾರೆ ಎನ್ನಲಾಗಿದೆ.

ಧ್ರುವ ಸರ್ಜಾ ನಟನೆಯ ಮಾರ್ಟಿನ್‌ ಸಿನಿಮಾಗೆ ವಿಶೇಷ ಗ್ರಾಫಿಕ್ಸ್ ವಿನ್ಯಾಸಕ್ಕೆ ಸತ್ಯರೆಡ್ಡಿ ಜತೆ ನಿರ್ಮಾಪಕ ಮೆಹ್ತಾ ಒಪ್ಪಂದ ಮಾಡಿಕೊಂಡಿದ್ದು, ಅಂತೆಯೇ ಆತನಿಗೆ 3.20 ಕೋಟಿ ರೂ ಹಣನ್ನು ಬ್ಯಾಂಕ್ ಮೂಲಕ ಮೆಹ್ತಾ ಪಾವತಿಸಿದ್ದರು. ಆದರೆ ಹಣ ಸ್ವೀಕರಿಸಿದ ಬಳಿಕ ಪೂರ್ವ ಒಪ್ಪಂದಂತೆ ಕೆಲಸ ಮಾಡದೆ ಸತ್ಯ ರೆಡ್ಡಿ ವಂಚಿಸಿದ್ದ ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!