ವಿನೋದ್ ವಿ ದೊಂಡಾಲೆ 
ಸಿನಿಮಾ ಸುದ್ದಿ

ಬೆಂಗಳೂರು: ಕನ್ನಡ ಕಿರುತೆರೆ ನಿರ್ದೇಶಕ ವಿನೋದ್ ವಿ. ದೊಂಡಾಲೆ ನೇಣಿಗೆ ಶರಣು!

ಸದ್ಯ ನಿನಾಸಮ್ ಸತೀಶ್ ನಟನೆಯ ʻಅಶೋಕ ಬ್ಲೇಡ್ʼ ಚಿತ್ರ ನಿರ್ದೇಶನಕ್ಕೆ ಸಿದ್ಧತೆ ಮಾಡಿಕೊಂಡಿದ್ದರು. ಮುಂದಿನ ವಾರದಿಂದ ಚಿತ್ರೀಕರಣ ಶುರು ಮಾಡಬೇಕಿತ್ತು. ಕಳೆದ ಎರಡು ವರ್ಷಗಳಿಂದಲೂ ಚಿತ್ರದ ಶೂಟಿಂಗ್ ಕುಂಟುತ್ತಲೇ ಸಾಗಿತ್ತು.

ಬೆಂಗಳೂರು: ಕನ್ನಡ ಕಿರುತೆರೆಯ ಖ್ಯಾತ ನಿರ್ದೇಶಕ ವಿನೋದ್ ದೊಂಡಾಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ʻಕರಿಮಣಿʼ, ʻಶಾಂತಂ ಪಾಪಂʼ ಸೇರಿದಂತೆ ಹಲವು ಧಾರವಾಹಿಗಳಿಗೆ ವಿನೋದ್ ನಿರ್ದೇಶನ ಮಾಡಿದ್ದರು.

ಸದ್ಯ ನಿನಾಸಮ್ ಸತೀಶ್ ನಟನೆಯ ʻಅಶೋಕ ಬ್ಲೇಡ್ʼ ಚಿತ್ರ ನಿರ್ದೇಶನಕ್ಕೆ ಸಿದ್ಧತೆ ಮಾಡಿಕೊಂಡಿದ್ದರು. ಮುಂದಿನ ವಾರದಿಂದ ಚಿತ್ರೀಕರಣ ಶುರು ಮಾಡಬೇಕಿತ್ತು. ಕಳೆದ ಎರಡು ವರ್ಷಗಳಿಂದಲೂ ಚಿತ್ರದ ಶೂಟಿಂಗ್ ಕುಂಟುತ್ತಲೇ ಸಾಗಿತ್ತು. ನಿರ್ಮಾಪಕರಾಗಿದ್ದರಿಂದ ಸಾಲದ ಸುಳಿಗೆ ಸಿಲುಕಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ವಿನೋದ್ ವಿ ದೋಂಡಾಲೆ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಿರ್ದೇಶಕ. ಪಿ.ಶೇಷಾದ್ರಿ, ಟಿ.ಎನ್, ಸೀತಾರಾಂ ಅವರ ಜೊತೆ ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ಸಂಚಿಕೆ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ನಾಗರಬಾವಿಯಲ್ಲಿ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಸದ್ಯ ವಿಕ್ಟೊರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದಿದೆ. ಅತಿಥಿ, ಬೇರು, ತುತ್ತೂರಿ, ವಿಮುಕ್ತಿ ಸೇರಿದಂತೆ ಹಲವು ಚಿತ್ರಗಳಲ್ಲಿ ವಿನೋದ್ ಕೆಲಸ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇಂದ್ರ ಬಜೆಟ್ 2026: ಷೇರುಮಾರುಕಟ್ಟೆ 'ರಕ್ತಪಾತ', ಹೂಡಿಕೆದಾರರ 9.40 ಲಕ್ಷ ಕೋಟಿ ರೂ ನಷ್ಟ! ಕುಸಿತಕ್ಕೆ ಕಾರಣವೇನು?

'ಆಗ ಸಿದ್ಧಾರ್ಥ್, ಈಗ CJ Roy': 'ತೆರಿಗೆ ಭಯೋತ್ಪಾದನೆ'; ಐಟಿ ದಾಳಿ ಕುರಿತು ಕೇಂದ್ರಕ್ಕೆ ಉದ್ಯಮಿ Mohandas Pai ಪತ್ರ! Video

T20 World Cup 2026: 'ಟೂರ್ನಿ ಆಡ್ತೇವೆ.. ಆದ್ರೆ ಭಾರತದ ವಿರುದ್ಧ ಆಡಲ್ಲ'; ಐಸಿಸಿಗೆ PCB ಹೊಸ ತಲೆನೋವು!

ಇನ್ಮುಂದೆ ಷೇರು ಮರುಖರೀದಿ ಲಾಭಕ್ಕೂ ತೆರಿಗೆ! Capital gains ಎಂದು ಪರಿಗಣಿಸುವ ಘೋಷಣೆ

U19 World Cup: ಪಾಕಿಸ್ತಾನವನ್ನು ಬಗ್ಗು ಬಡಿದು ಭಾರತ ಸೆಮಿಫೈನಲ್‌ಗೆ ಲಗ್ಗೆ; ಅಫ್ಘಾನ್ ಜೊತೆ ಗುದ್ದಾಟ!

SCROLL FOR NEXT