ವಿನೋದ್ ವಿ ದೊಂಡಾಲೆ 
ಸಿನಿಮಾ ಸುದ್ದಿ

ಬೆಂಗಳೂರು: ಕನ್ನಡ ಕಿರುತೆರೆ ನಿರ್ದೇಶಕ ವಿನೋದ್ ವಿ. ದೊಂಡಾಲೆ ನೇಣಿಗೆ ಶರಣು!

ಸದ್ಯ ನಿನಾಸಮ್ ಸತೀಶ್ ನಟನೆಯ ʻಅಶೋಕ ಬ್ಲೇಡ್ʼ ಚಿತ್ರ ನಿರ್ದೇಶನಕ್ಕೆ ಸಿದ್ಧತೆ ಮಾಡಿಕೊಂಡಿದ್ದರು. ಮುಂದಿನ ವಾರದಿಂದ ಚಿತ್ರೀಕರಣ ಶುರು ಮಾಡಬೇಕಿತ್ತು. ಕಳೆದ ಎರಡು ವರ್ಷಗಳಿಂದಲೂ ಚಿತ್ರದ ಶೂಟಿಂಗ್ ಕುಂಟುತ್ತಲೇ ಸಾಗಿತ್ತು.

ಬೆಂಗಳೂರು: ಕನ್ನಡ ಕಿರುತೆರೆಯ ಖ್ಯಾತ ನಿರ್ದೇಶಕ ವಿನೋದ್ ದೊಂಡಾಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ʻಕರಿಮಣಿʼ, ʻಶಾಂತಂ ಪಾಪಂʼ ಸೇರಿದಂತೆ ಹಲವು ಧಾರವಾಹಿಗಳಿಗೆ ವಿನೋದ್ ನಿರ್ದೇಶನ ಮಾಡಿದ್ದರು.

ಸದ್ಯ ನಿನಾಸಮ್ ಸತೀಶ್ ನಟನೆಯ ʻಅಶೋಕ ಬ್ಲೇಡ್ʼ ಚಿತ್ರ ನಿರ್ದೇಶನಕ್ಕೆ ಸಿದ್ಧತೆ ಮಾಡಿಕೊಂಡಿದ್ದರು. ಮುಂದಿನ ವಾರದಿಂದ ಚಿತ್ರೀಕರಣ ಶುರು ಮಾಡಬೇಕಿತ್ತು. ಕಳೆದ ಎರಡು ವರ್ಷಗಳಿಂದಲೂ ಚಿತ್ರದ ಶೂಟಿಂಗ್ ಕುಂಟುತ್ತಲೇ ಸಾಗಿತ್ತು. ನಿರ್ಮಾಪಕರಾಗಿದ್ದರಿಂದ ಸಾಲದ ಸುಳಿಗೆ ಸಿಲುಕಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ವಿನೋದ್ ವಿ ದೋಂಡಾಲೆ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಿರ್ದೇಶಕ. ಪಿ.ಶೇಷಾದ್ರಿ, ಟಿ.ಎನ್, ಸೀತಾರಾಂ ಅವರ ಜೊತೆ ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ಸಂಚಿಕೆ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ನಾಗರಬಾವಿಯಲ್ಲಿ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಸದ್ಯ ವಿಕ್ಟೊರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದಿದೆ. ಅತಿಥಿ, ಬೇರು, ತುತ್ತೂರಿ, ವಿಮುಕ್ತಿ ಸೇರಿದಂತೆ ಹಲವು ಚಿತ್ರಗಳಲ್ಲಿ ವಿನೋದ್ ಕೆಲಸ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

'Toxic': ಸಿನಿಮಾ ಮಾಡುವುದು ಸುಲಭವಲ್ಲ, ಇಡೀ ಪ್ರಪಂಚದ ವಿರುದ್ಧ ಯುದ್ಧಕ್ಕೆ ಹೋದಂತೆ': ವದಂತಿಗಳ ನಡುವೆ ಆ ವ್ಯಕ್ತಿ ಬಂಡೆಯಂತೆ ನಿಂತರು- ಯಶ್!

Toxic: ಯಶ್ ಜೊತೆಗೆ ಕಿಯಾರಾ ಬೋಲ್ಡ್ ಅವತಾರ, ಟ್ರೋಲರ್ ಗಳ ಬಾಯಿ ಮುಚ್ಚಿಸಿದ ಪತಿ ಸಿದ್ಧಾರ್ಥ್ ಮಲ್ಹೋತ್ರಾ!

'ಕಳ್ಳಿ, ಕಳ್ಳಿ' ಅಂತಾ ಘೋಷಣೆ ಕೂಗಿ ಮಮತಾ ಬ್ಯಾನರ್ಜಿ ಕಾರಿನ ಮೇಲೆ ಕಲ್ಲು ತೂರಾಟ, ಕೆಸರು ಎರಚಿ ಆಕ್ರೋಶ! ಭಯಾನಕ Video