ಶಿವರಾಜಕುಮಾರ್‌ ನಟನೆಯ 131ನೇ ಸಿನಿಮಾದ ಶೂಟಿಂಗ್ ಆಗಸ್ಟ್ ನಲ್ಲಿ ಆರಂಭ 
ಸಿನಿಮಾ ಸುದ್ದಿ

ಶಿವರಾಜಕುಮಾರ್‌ ನಟನೆಯ 131ನೇ ಸಿನಿಮಾದ ಶೂಟಿಂಗ್ ಆಗಸ್ಟ್ ನಲ್ಲಿ ಆರಂಭ

ನಿರ್ದೇಶಕ ಕಾರ್ತಿಕ್ ಅದ್ವೈತ್, ನಿರ್ಮಾಪಕರಾದ ಎನ್ ಎಸ್ ರೆಡ್ಡಿ ಮತ್ತು ಸುಧೀರ್, ಛಾಯಾಗ್ರಾಹಕ ಎಜೆ ಶೆಟ್ಟಿ ಮತ್ತು ಸಂಕಲನಕಾರ ದೀಪು ಎಸ್ ಕುಮಾರ್ ಸೇರಿದಂತೆ ಇಡೀ ತಂಡವು ಶಿವರಾಜಕುಮಾರ್ ಅವರ ನಿವಾಸದಲ್ಲಿ ಸಭೆ ಸೇರಿದ್ದು, ಆಗಸ್ಟ್‌ನಲ್ಲಿ ಚಿತ್ರೀಕರಣ ಶೂಟಿಂಗ್ ಆರಂಭಿಸಲು ನಿರ್ಧರಿಸಿದೆ.

ಭುವನೇಶ್ವರಿ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಾದ ಸೆಂಚುರಿ ಸ್ಟಾರ್ ಅವರ 131 ನೇ ಚಿತ್ರದ ಶೂಟಿಂಗ್ ಆಗಸ್ಟ್ ನಲ್ಲಿ ಆರಂಭವಾಗಲಿದೆ. ಶಿವಣ್ಣನ ಹುಟ್ಟುಹಬ್ಬದಂದು ಟೀಸರ್ ಬಿಡುಗಡೆಯಾಗಿದ್ದು, ಅಭಿಮಾನಿಗಳು ಸಂತಸಗೊಂಡಿದ್ದಾರೆ. ನಿರ್ಮಾಣ ತಂಡವು ಈಗ ಚಿತ್ರದ ಶೂಟಿಂಗ್ ಆರಂಭಿಸಲು ಸಜ್ಜಾಗಿದೆ.

ನಿರ್ದೇಶಕ ಕಾರ್ತಿಕ್ ಅದ್ವೈತ್, ನಿರ್ಮಾಪಕರಾದ ಎನ್ ಎಸ್ ರೆಡ್ಡಿ ಮತ್ತು ಸುಧೀರ್, ಛಾಯಾಗ್ರಾಹಕ ಎಜೆ ಶೆಟ್ಟಿ ಮತ್ತು ಸಂಕಲನಕಾರ ದೀಪು ಎಸ್ ಕುಮಾರ್ ಸೇರಿದಂತೆ ಇಡೀ ತಂಡವು ಶಿವರಾಜಕುಮಾರ್ ಅವರ ನಿವಾಸದಲ್ಲಿ ಸಭೆ ಸೇರಿದ್ದು, ಆಗಸ್ಟ್‌ನಲ್ಲಿ ಚಿತ್ರೀಕರಣ ಶೂಟಿಂಗ್ ಆರಂಭಿಸಲು ನಿರ್ಧರಿಸಿದೆ. ಕಾರ್ತಿಕ್ ಅದ್ವೈತ್, ಶಿವಣ್ಣನಿಗೆ ಆ್ಯಕ್ಷನ್ ಕಟ್ ಹೇಳುವ ಮೂಲಕ ಸ್ಯಾಂಡಲ್​ವುಡ್​​ ಅಂಗಳಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಅಂದಹಾಗೆ, ಇವರಿಗೆ ಇದು ನಿರ್ದೇಶಕನಾಗಿ ಎರಡನೇ ಸಿನಿಮಾ. ಇದೊಂದು ಆ್ಯಕ್ಷನ್ ಥ್ರಿಲ್ಲರ್ ಸಿನಿಮಾವಾಗಿದ್ದು, ಶಿವಣ್ಣ ಡಿಫ್ರೆಂಟ್ ಲುಕ್​​​ನಲ್ಲಿ, ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. 'ಘೋಸ್ಟ್' ಖ್ಯಾತಿಯ ವಿ.ಎಂ.ಪ್ರಸನ್ನ ಹಾಗೂ 'ಸೀತಾರಾಮಂ' ಖ್ಯಾತಿಯ ಜಯಕೃಷ್ಣ ಬರಹಗಾರರಾಗಿ ಸಾಥ್ ಕೊಡುತ್ತಿದ್ದಾರೆ.

ವಿಕ್ರಂ ವೇದ, ಆರ್​ಡಿಎಕ್ಸ್, ಖೈದಿ ಸಿನಿಮಾ ಖ್ಯಾತಿಯ ಸ್ಯಾಮ್ ಸಿ.ಎಸ್. ಸಂಗೀತ ಸಂಯೋಜಿಸಲಿದ್ದಾರೆ. ಎ.ಜೆ.ಶೆಟ್ಟಿ ಛಾಯಾಗ್ರಹಣ ನಿರ್ವಹಿಸಲಿದ್ದಾರೆ. ದೀಪು ಎಸ್.ಕುಮಾರ್ ಅವರ ಸಂಕಲನ ಹಾಗೂ ರವಿ ಸಂತೆಹಕ್ಲು ಅವರ ಕಲಾ ನಿರ್ದೇಶನ ಚಿತ್ರಕ್ಕಿರಲಿದೆ. ಭುವನೇಶ್ವರಿ ಪ್ರೊಡಕ್ಷನ್ ಅಡಿ ಎಸ್.ಎನ್.ರೆಡ್ಡಿ ಹಾಗೂ ಸುಧೀರ್ ಪಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದು, ರಮಣ ರೆಡ್ಡಿ ಕಾರ್ಯಕಾರಿ ನಿರ್ಮಾಪಕರಾಗಿ ಸಾಥ್ ಕೊಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT