ಮಾರ್ಟಿನ್‌ ಸಿನಿಮಾ 
ಸಿನಿಮಾ ಸುದ್ದಿ

ಧ್ರುವ ಸರ್ಜಾ Martin ಚಿತ್ರದ VFXಗೆ 50 ಲಕ್ಷ ರೂ ಕಮಿಷನ್‌ ಆರೋಪ; ನಿರ್ದೇಶಕ AP ಅರ್ಜುನ್‌ಗೆ ಸಂಕಷ್ಟ, ಬಂಧನ ಭೀತಿ?

ತೀವ್ರ ಕುತೂಹಲ ಕೆರಳಿಸಿರುವ ನಟ ಧ್ರುವ ಸರ್ಜಾ (Dhruva Sarja) ಅಭಿನಯದ ʻಮಾರ್ಟಿನ್‌ʼ ಸಿನಿಮಾ ಬಿಡುಗಡೆಗೆ ಸಜ್ಜಾಗಿರುವಂತೆಯೇ ಇದೀಗ ಚಿತ್ರ ಹೊಸ ಹೊಸ ವಿವಾದಗಳಿಗೆ ಸುದ್ದಿಯಾಗುತ್ತಿದೆ.

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ನಟ ಧ್ರುವ ಸರ್ಜಾ (Dhruva Sarja) ಅಭಿನಯದ ʻಮಾರ್ಟಿನ್‌ʼ ಸಿನಿಮಾ ಬಿಡುಗಡೆಗೆ ಸಜ್ಜಾಗಿರುವಂತೆಯೇ ಇದೀಗ ಚಿತ್ರ ಹೊಸ ಹೊಸ ವಿವಾದಗಳಿಗೆ ಸುದ್ದಿಯಾಗುತ್ತಿದೆ.

ಈ ಹಿಂದೆ ಚಿತ್ರದ ವಿಎಫ್ ಎಕ್ಸ್ ಗಾಗಿ ಹಣ ಪಡೆದು ನಿರ್ಮಾಪಕರನ್ನು ವಂಚಿಸಿದ್ದ ಆರೋಪಿ ಬಂಧನ ಬೆನ್ನಲ್ಲೇ ಇದೀಗ ಚಿತ್ರದ ನಿರ್ದೇಶಕ ಎಪಿ ಅರ್ಜುನ್ ವಿರುದ್ಧ ಕಮಿಷನ್ ಪಡೆದ ಆರೋಪ ಕೇಳಿಬರುತ್ತಿದೆ.

ಈ ಬಗ್ಗೆ ಸುದ್ದಿವಾಹಿನಿಯೊಂದು ವರದಿ ಮಾಡಿದ್ದು, ಚಿತ್ರದ ವಿಎಫ್‌ಎಕ್ಸ್‌ಗಾಗಿ ಡಿಜಿಟಲ್ ಟೆರೇನ್ ಪ್ರೊಡಕ್ಷನ್ ಪ್ರೈ. ಲಿಮಿಟೆಡ್ ಕಂಪನಿಗೆ ನಿರ್ಮಾಪಕ ನೀಡಿದ್ದ 2.5 ಕೋಟಿ ರೂ.ಗಳಲ್ಲಿ ನಿರ್ದೇಶಕ ಎ.ಪಿ. ಅರ್ಜುನ್‌ 50 ಲಕ್ಷ ರೂ. ಕಮಿಷನ್‌ ಪಡೆದಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ ಎಂದು ವರದಿಯಾಗಿದೆ.

ಎಪಿ ಅರ್ಜುನ್ ಗೆ ಬಂಧನ ಭೀತಿ

ಇನ್ನು ನಿರ್ಮಾಪಕ ಉದಯ್ ಮೆಹ್ತಾ ನೀಡಿದ್ದ ದೂರು ಆಧರಿಸಿ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ಸದ್ಯಕ್ಕೆ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ತಲೆಮರೆಸಿಕೊಂಡಿದ್ದ ಸತ್ಯಾ ರೆಡ್ಡಿ ಎಂಬಾತನನ್ನು ಬಂಧಿಸಿದ್ದರು. ಆದರೆ, ವಿಎಫ್‌ಎಕ್ಸ್ ಕೆಲಸವನ್ನು ತಮಗೆ ನೀಡಲು ನೀಡಲು ಅರ್ಜುನ್ ನಮ್ಮಿಬ್ಬರಿಂದ 50 ಲಕ್ಷ ರೂ. ಕಮಿಷನ್ ಪಡೆದಿದ್ದಾರೆ ಎಂದು ಸುನಿಲ್ ಆರೋಪಿಸಿದ್ದಾರೆ ಎನ್ನಲಾಗಿದೆ.

ಉದಯ್ ಮೆಹ್ತಾ, 2.5 ಕೋಟಿ ಲಾಸ್ ಆಗಿದ್ದಷ್ಟೇ ಅಲ್ಲದೇ ಸಿನಿಮಾ 6 ತಿಂಗಳಿಗೂ ಹೆಚ್ಚು ಕಾಲ ತಡವಾಗಿದೆ ಎಂದಿದ್ದರು. ಹೀಗಾಗಿ ನಿರ್ದೇಶಕನ ಬಂಧನ ಸಾಧ್ಯತೆ ಇದೆ ಎಂಬ ಮಾತುಗಳು ಚಂದನವನದ ಅಂಗಳದಲ್ಲಿ ಕೇಳಿಬರುತ್ತಿವೆ.

ಅಕ್ಟೋಬರ್ 11ರಂದು 5 ಭಾಷೆಗಳಲ್ಲಿ ತೆರೆಗೆ ಬರಲಿರುವ ಈ ಚಿತ್ರಕ್ಕೆ ಧ್ರುವ ಸರ್ಜಾ ಅವರ ಸೋದರ ಮಾವ ಅರ್ಜುನ್‌ ಸರ್ಜಾ ಕತೆ ಕೊಟ್ಟು, ʻಮಾರ್ಟಿನ್‌ʼಗೆ ಬೆಂಬಲವಾಗಿ ನಿಂತಿದ್ದಾರೆ. ನಿರ್ಮಾಪಕ ಉದಯ್‌ ಮೆಹ್ತಾ ಸಾಕಷ್ಟು ಹಣ ಸುರಿದಿದ್ದಾರೆ. ಮೂರು ವರ್ಷವಾದರೂ ಸಿನಿಮಾ ನಾನಾ ಕಾರಣಕ್ಕೆ ತಡವಾಗುತ್ತಲೇ ಬಂತು. ಆ ಕಾರಣಗಳಲ್ಲಿ ಚಿತ್ರದ ವಿಎಫ್‌ಎಕ್ಸ್‌ ಕೆಲಸ ಕೂಡ ಒಂದು. ನಿರ್ಮಾಪಕ ಉದಯ್ ಮೆಹ್ತಾ ನಿರ್ದೇಶಕರ ಸೂಚನೆ ಮೇರೆಗೆ ಈ ಚಿತ್ರದ ವಿಎಫ್ಎಕ್ಸ್​ನ ಜವಾಬ್ಧಾರಿಗಳನ್ನೆಲ್ಲ ಡಿಜಿಟಲ್ ಟೆರೇನ್ ಪ್ರೊಡಕ್ಷನ್ ಪ್ರೈ. ಲಿಮಿಟೆಡ್ ಸಂಸ್ಥೆಗೆ ವಹಿಸಿದ್ದರು.

ಆದರೆ ಅಲ್ಲಿ ಆಗಿದ್ದೇ ಬೇರೆ. ಡಿಜಿಟಲ್ ಟೆರೇನ್ ಪ್ರೊಡಕ್ಷನ್ ಪ್ರೈ. ಲಿಮಿಟೆಡ್ ನ ಸತ್ಯ ರೆಡ್ಡಿ ಮತ್ತು ಸುನಿಲ್ ಕೇಳಿದಾಗೆಲ್ಲ ನಿರ್ಮಾಪಕ ಉದಯ್ ಮೆಹ್ತಾ ದುಡ್ಡು ಕೊಡುತ್ತಲೇ ಬಂದಿದ್ದರು. ಎರಡೂವರೆ ಕೋಟಿ ಹಣವನ್ನು ಈ ಸತ್ಯಾ ರೆಡ್ಡಿ ಮತ್ತು ಸುನಿಲ್ ಎಂಬುವರ ಮೇಲೆ ಸುರಿದರೂ ಕೆಲಸ ಮಾತ್ರ ಆಗಲಿಲ್ಲ. ಇತ್ತೀಚೆಗೆ ಹಣದ ವ್ಯವಹಾರದ ದಾಖಲೆ ಸಮೇತ ಬೆಂಗಳೂರಿನ ಬಸವೇಶ್ವರ ನಗರ ಠಾಣೆ ಮೆಟ್ಟಿಲೇರಿದ್ದ ನಿರ್ಮಾಪಕ ಉದಯ್ ಮೆಹ್ತಾ, ವಂಚಕರಾದ ಸತ್ಯ ರೆಡ್ಡಿ ಮತ್ತು ಸುನಿಲ್ ವಿರುದ್ದ ದೂರು ಸಲ್ಲಿಸಿದ್ದರು. ಆದರೆ, ಇದೀಗ ವಿಚಾರಣೆ ವೇಳೆ ನಿರ್ದೇಶಕ ಅರ್ಜುನ್‌ಗೆ ಕಮಿಷನ್ ನೀಡಿರುವುದಾಗಿ ಆರೋಪಿ ಸುನಿಲ್ ರೆಡ್ಡಿ ಹೇಳಿದ್ದಾರೆ ಎನ್ನಲಾಗಿದೆ.

ವಿವಾದ ಇದೇ ಮೊದಲೇನಲ್ಲ!

ನಟ ಧ್ರುವ ಸರ್ಜಾ ಡಬ್ಬಿಂಗ್ ಮಾಡುವಾಗಲೂ ನಿರ್ದೇಶಕ ಅರ್ಜುನ್ ಗೈರಾಗಿದ್ದರು. ಈ ಹಿಂದೆಯೂ ಮಾರ್ಟಿನ್ ಚಿತ್ರತಂಡದಲ್ಲಿ ಮನಸ್ತಾಪಗಳಿವೆ ಎಂಬ ಮಾತುಗಳು ಕೇಳಿಬಂದಿದ್ದವು. ಇದೀಗ ನಿರ್ಮಾಪಕ ಉದಯ್ ಮೆಹ್ತಾ ಹಾಗೂ ನಿರ್ದೇಶಕ ಎ.ಪಿ. ಅರ್ಜುನ್ ನಡುವೆ ಭಿನ್ನಾಭಿಪ್ರಾಯ ಭುಗಿಲೆದ್ದಿದೆ ಎನ್ನಲಾಗಿದೆ. ಈ ಹಿಂದೆ ದರ್ಶನ್ ನಾಯಕನಾಗಿ ನಟಿಸಿದ ಐರಾವತ ಚಿತ್ರದ ಮೇಕಿಂಗ್ ಸೇರಿ ಅರ್ಜುನ್ ವಿರುದ್ಧ ಈ ಹಿಂದೆ ಇದೇ ರೀತಿಯ ಆರೋಪಗಳು ಕೇಳಿಬಂದಿತ್ತು. ಅರ್ಜುನ್ ಮತ್ತು ನಿರ್ಮಾಪಕ ಸಂದೇಶ್ ನಾಗರಾಜ್ ಮತ್ತು ದರ್ಶನ್ ನಡುವೆ ಭಿನ್ನಾಭಿಪ್ರಾಯದ ವದಂತಿಗಳು ಕೇಳಿಬಂದಿದ್ದವು.

ವಿವಾದಗಳ ನಡುವೆಯೇ ಬಿಡುಗಡೆಗೆ ಸಿದ್ಧ 'ಮಾರ್ಟಿನ್'

ಇಷ್ಟೆಲ್ಲಾ ವಿವಾದಗಳ ನಡುವೆಯೇ ಈ ಮಾರ್ಟಿನ್ ಸಿನಿಮಾ ಅಕ್ಟೋಬರ್ 11ಕ್ಕೆ ಬಿಡುಗಡೆಗೆ ಸಿದ್ಧವಾಗಿದೆ. ಮಾರ್ಟಿನ್ ಚಿತ್ರಕ್ಕೆ ಮಣಿ ಶರ್ಮಾ ಅವರ ಸಂಗೀತ ಮತ್ತು ಸತ್ಯ ಹೆಗಡೆ ಅವರ ಛಾಯಾಗ್ರಹಣವಿದೆ. ಮಾರ್ಟಿನ್‌ ಸಿನಿಮಾದಲ್ಲಿ ಕನ್ನಡದ ಕಲಾವಿದರ ಜತೆಗೆ ಹಿಂದಿ, ತೆಲುಗು, ತಮಿಳು ಚಿತ್ರರಂಗದ ಕಲಾವಿದರು ನಟಿಸಿದ್ದಾರೆ. ಅಚ್ಯುತ್‌ ಕುಮಾರ್‌, ನಿಕಿತನ್‌ ಧೀರ್‌, ನವಾಬ್‌ ಶಾ ಸೇರಿದಂತೆ ಹಲವರು ಪ್ರಮುಖ ಪಾತ್ರಗಳಲ್ಲಿದ್ದಾರೆ. ‘ಧೀರನ್‌ ಅಧಿಕಾರಂ ಒಂಡ್ರು’ತಮಿಳು ಚಿತ್ರದ ಮೂಲಕ ಗಮನ ಸೆಳೆದಿದ್ದ ನಟ ರೋಹಿತ್‌ ಪಾಠಕ್‌ ಸಹ ‘ಮಾರ್ಟಿನ್‌’ನಲ್ಲಿ ಬಹು ಮುಖ್ಯ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಯತ್ತ ನುಗ್ಗಿದ 'ಪಾಕ್ ಡ್ರೋನ್' ಗಳು!

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

SCROLL FOR NEXT