ನಟ ಚಿರಂಜೀವಿ 
ಸಿನಿಮಾ ಸುದ್ದಿ

ಸೆಲ್ಫಿಗೆ ಮುಂದಾದ ಅಭಿಮಾನಿಯನ್ನು 'ತಳ್ಳಿದ' ಮೆಗಾಸ್ಟಾರ್ ಚಿರಂಜೀವಿ! ವಿಡಿಯೋ ವೈರಲ್

ಪತ್ನಿ ಸುರೇಖಾ ಕೊನಿಡೆಲಾ ಹಾಗೂ ಸೆಕ್ಯೂರಿಟಿಯೊಂದಿಗೆ ಎಲಿವೇಟರ್ ನಲ್ಲಿ ಚಿರಂಜೀವಿ ವಿಮಾನ ನಿಲ್ದಾಣದಿಂದ ನಿರ್ಗಮಿಸುತ್ತಿರುವ ದಿನಾಂಕ ಇಲ್ಲದ ವಿಡಿಯೋವನ್ನು ಅನೇಕ ಎಕ್ಸ್ ಬಳಕೆದಾರರು ತಮ್ಮ ಖಾತೆಗಳಲ್ಲಿ ಹಂಚಿಕೊಳ್ಳುವ ಮೂಲಕ ನಟನ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಹೈದರಾಬಾದ್: ತೆಲುಗಿನ ಸೂಪರ್‌ಸ್ಟಾರ್, ಪದ್ಮವಿಭೂಷಣ ಪ್ರಶಸ್ತಿ ವಿಜೇತ ಚಿರಂಜೀವಿ ವಿಮಾನ ನಿಲ್ದಾಣದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಮುಂದಾದ ಅಭಿಮಾನಿಯನ್ನು ಪಕ್ಕಕ್ಕೆ ತಳ್ಳುತ್ತಿರುವ ವಿಡಿಯೋ ವೈರಲ್ ಆದ ನಂತರ ಸೋಶಿಯಲ್ ಮೀಡಿಯಾ ಬಳಕೆದಾರರಿಂದ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ಪತ್ನಿ ಸುರೇಖಾ ಕೊನಿಡೆಲಾ ಹಾಗೂ ಸೆಕ್ಯೂರಿಟಿಯೊಂದಿಗೆ ಎಲಿವೇಟರ್ ನಲ್ಲಿ ಚಿರಂಜೀವಿ ವಿಮಾನ ನಿಲ್ದಾಣದಿಂದ ನಿರ್ಗಮಿಸುತ್ತಿರುವ ದಿನಾಂಕ ಇಲ್ಲದ ವಿಡಿಯೋವನ್ನು ಅನೇಕ ಎಕ್ಸ್ ಬಳಕೆದಾರರು ತಮ್ಮ ಖಾತೆಗಳಲ್ಲಿ ಹಂಚಿಕೊಳ್ಳುವ ಮೂಲಕ ನಟನ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ವಿಡಿಯೋದಲ್ಲಿ ದೇಶಿಯ ವಿಮಾನಯಾನ ಸಂಸ್ಥೆಯೊಂದರ ಸಮವಸ್ತ್ರ ಧರಿಸಿರುವ ಅಭಿಮಾನಿಯೊಬ್ಬ ಚಿರಂಜೀವಿಯೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸಿದ್ದಾರೆ. ಆದರೆ, ನಟ ಸೆಲ್ಫಿ ನೀಡದೆ ಹೊರ ನಡೆದಿದ್ದಾರೆ. ವಿಮಾನ ನಿಲ್ದಾಣದಲ್ಲಿ ಸ್ವಲ್ಪ ಹೊತ್ತು ವಿರಮಿಸಿದ ಸೂಪರ್‌ಸ್ಟಾರ್ ಅವರನ್ನು ನೋಡಿದ ಅಭಿಮಾನಿಗಳು,ಅವರೊಂದಿಗೆ ಫೋಟೋ ಕ್ಲಿಕ್ಕಿಸಲು ಮತ್ತೊಂದು ಪ್ರಯತ್ನ ಮಾಡಿದ್ದಾರೆ. ಆದರೆ, ಅವರನ್ನು ಪಕ್ಕಕ್ಕೆ ತಳ್ಳಿ ಹೊರನಡೆದಿದ್ದು, ಕೆಲವರು ನಟನ ನಡವಳಿಕೆ 'ಒರಟು' ಎಂದಿದ್ದಾರೆ. ಮತ್ತೆ ಕೆಲವರು ಅವರ ಖಾಸಗಿತನವನ್ನು ಗೌರವಿಸಬೇಕು ಎಂದು ಸಮರ್ಥಿಸಿಕೊಂಡಿದ್ದಾರೆ.

ಕಳೆದ ತಿಂಗಳು, ಮತ್ತೊಬ್ಬ ತೆಲುಗು ಸೂಪರ್‌ಸ್ಟಾರ್ ನಾಗಾರ್ಜುನ ಅವರ ಅಂಗರಕ್ಷಕರೊಬ್ಬರು ವಿಶೇಷ ಚೇತನ ಅಭಿಮಾನಿಯೊಬ್ಬರನ್ನು ಹೊಡೆದ ನಂತರ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಟೀಕೆ ವ್ಯಕ್ತವಾಗಿತ್ತು. ಬಳಿಕ ನಾಗಾರ್ಜುನ ಅವರು ಎಕ್ಸ್ ಪೋಸ್ಟ್‌ನಲ್ಲಿ ಘಟನೆಗೆ ಕ್ಷಮೆಯಾಚಿಸಿದ್ದರು. ಕೆಫೆ ಉದ್ಯೋಗಿಯಾಗಿದ್ದ ಅಭಿಮಾನಿಯನ್ನು ಭೇಟಿಯಾಗಿ, ವೈಯಕ್ತಿಕವಾಗಿ ಕ್ಷಮೆಯಾಚಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಹೋರಾಟ ನಡೆಸುತ್ತೇವೆಂದ ಸಿಎಂ ಸಿದ್ದರಾಮಯ್ಯ

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

SCROLL FOR NEXT