ಚಿಕ್ಕಣ್ಣ - ಎಪಿ ಅರ್ಜುನ್ 
ಸಿನಿಮಾ ಸುದ್ದಿ

ಮತ್ತೊಂದು ಚಿತ್ರದಲ್ಲಿ ನಾಯಕನಾಗಿ ನಟ ಚಿಕ್ಕಣ್ಣ; ಎಪಿ ಅರ್ಜುನ್ ನಿರ್ಮಾಣ!

ಅದ್ಧೂರಿ, ಅಂಬಾರಿ, ಕಿಸ್ ಮತ್ತು ಮಿ. ಐರಾವತದಂತಹ ಚಿತ್ರಗಳಿಗೆ ಹೆಸರಾದ ನಿರ್ದೇಶಕ ಎಪಿ ಅರ್ಜುನ್ ಚಿಕ್ಕಣ್ಣ ನಟನೆಯ ಹೊಸ ಚಿತ್ರವನ್ನು ನಿರ್ಮಿಸಲಿದ್ದಾರೆ ಎಂದು ಉದ್ಯಮದ ಮೂಲಗಳು ಬಹಿರಂಗಪಡಿಸಿವೆ. ‘ಕೆರೆಬೇಟೆ’ ಚಿತ್ರದ ಮೂಲಕ ನಿರ್ದೇಶಕರಾಗಿ ಪದಾರ್ಪಣೆ ಮಾಡಿದ ರಾಜ್ ಗುರು ಈ ಚಿತ್ರವನ್ನು ನಿರ್ದೇಶಿಸಲಿದ್ದಾರೆ.

ಉಪಾಧ್ಯಕ್ಷ ಚಿತ್ರದ ಮೂಲಕ ನಾಯಕನಾಗಿ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡ ನಟ ಚಿಕ್ಕಣ್ಣ ಇದೀಗ ಮತ್ತೊಮ್ಮೆ ಮುಂಬರುವ ಚಿತ್ರದಲ್ಲಿಯೂ ನಾಯಕನಾಗಿ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ. ಅದ್ಧೂರಿ, ಅಂಬಾರಿ, ಕಿಸ್ ಮತ್ತು ಮಿ. ಐರಾವತದಂತಹ ಚಿತ್ರಗಳಿಗೆ ಹೆಸರಾದ ನಿರ್ದೇಶಕ ಎಪಿ ಅರ್ಜುನ್ ಚಿಕ್ಕಣ್ಣ ನಟನೆಯ ಹೊಸ ಚಿತ್ರವನ್ನು ನಿರ್ಮಿಸಲಿದ್ದಾರೆ ಎಂದು ಉದ್ಯಮದ ಮೂಲಗಳು ಬಹಿರಂಗಪಡಿಸಿವೆ. ‘ಕೆರೆಬೇಟೆ’ ಚಿತ್ರದ ಮೂಲಕ ನಿರ್ದೇಶಕರಾಗಿ ಪದಾರ್ಪಣೆ ಮಾಡಿದ ರಾಜ್ ಗುರು ಈ ಚಿತ್ರವನ್ನು ನಿರ್ದೇಶಿಸಲಿದ್ದಾರೆ.

ಗೌರಿ ಶಂಕರ್ ಅಭಿನಯದ ರಾಜ್ ಗುರು ನಿರ್ದೇಶನದ ಕೆರೆಬೇಟೆ ಇತ್ತೀಚೆಗೆ ಚಿತ್ರಮಂದಿರಗಳಲ್ಲಿ 50 ದಿನಗಳನ್ನು ಪೂರೈಸಿರುವುದು ಗಮನಾರ್ಹ.

ಎಪಿ ಅರ್ಜುನ್ ಅವರು ಸದ್ಯ ಧ್ರುವ ಸರ್ಜಾ ಅಭಿನಯದ ಮಾರ್ಟಿನ್ ಚಿತ್ರ ನಿರ್ದೇಶನದಲ್ಲಿ ಬ್ಯುಸಿಯಾಗಿದ್ದು, ಈ ಚಿತ್ರದ ಬಿಡುಗಡೆ ನಂತರವೇ ಚಿಕ್ಕಣ್ಣ ಅವರ ಹೊಸ ಚಿತ್ರ ಸೆಟ್ಟೇರಲಿದೆ ಎಂದು ತಿಳಿದು ಬಂದಿದೆ. ಮಾರ್ಟಿನ್ ಅಕ್ಟೋಬರ್ 11 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಅರ್ಜುನ್ ಸದ್ಯ ವಿರಾಟ್ ಮತ್ತು ಪ್ರಿಯಾಂಕಾ ಕುಮಾರ್ ಅಭಿನಯದ 'ಅದ್ಧೂರಿ ಲವರ್' ಚಿತ್ರವನ್ನು ಸಹ ನಿರ್ಮಿಸುತ್ತಿದ್ದಾರೆ. ಅಲ್ಲದೆ, ಮತ್ತೊಂದು ಯೋಜನೆಯನ್ನು ಹೊಂದಿದ್ದಾರೆ ಎನ್ನಲಾಗಿದೆ.

ಈ ಚಿತ್ರದ ಕುರಿತು ಹೆಚ್ಚಿನ ವಿವರಗಳು ಇನ್ನೂ ಲಭ್ಯವಾಗಬೇಕಿದೆ. ವರದಿಗಳ ಪ್ರಕಾರ, ಸಿನಿಮಾ ಭಾವನೆಗಳನ್ನು ಒಳಗೊಂಡಿರುವ ಕಮರ್ಷಿಯಲ್ ಎಂಟರ್‌ಟೈನರ್ ಎನ್ನಲಾಗಿದೆ. 250ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಚಿಕ್ಕಣ್ಣ, ಕಾಮಿಡಿ ನಟನಾಗಿ ಹೆಸರಾಗಿದ್ದಾರೆ. ಬಳಿಕ ಉಪಾಧ್ಯಕ್ಷ ಸಿನಿಮಾದಲ್ಲಿ ನಾಯಕನಾಗಿ ಯಶಸ್ಸು ಕಂಡರು. ಈ ಫ್ಯಾಮಿಲಿ ಎಂಟರ್‌ಟೈನರ್ ಅನ್ನು ಅನಿಲ್ ಕುಮಾರ್ ನಿರ್ದೇಶಿಸಿದ್ದರು. ಉಮಾಪತಿ ಶ್ರೀನಿವಾಸ್ ಗೌಡ ನಿರ್ಮಾಣದ ಈ ಚಿತ್ರದಲ್ಲಿ ಕಿರುತೆರೆ ನಟಿ ಮಲೈಕಾ ವಸುಪಾಲ್ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಈಮಧ್ಯೆ, ಚಿಕ್ಕಣ್ಣ ಇನ್ನೂ ಒಂದೆರಡು ನಿರ್ದೇಶಕರೊಂದಿಗೆ ಮಾತುಕತೆ ನಡೆಸುತ್ತಿದ್ದು, ಈ ಚಿತ್ರಗಳಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಯತ್ತ ನುಗ್ಗಿದ 'ಪಾಕ್ ಡ್ರೋನ್' ಗಳು!

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

SCROLL FOR NEXT