ಚಂದನ್ ಶೆಟ್ಟಿ, ನಿವೇದಿತಾ ಗೌಡ 
ಸಿನಿಮಾ ಸುದ್ದಿ

ಚಂದನ್ ಶೆಟ್ಟಿ- ನಿವೇದಿತಾ ದಾಂಪತ್ಯದಲ್ಲಿ ಬಿರುಕು: ವಿಚ್ಚೇದನಕ್ಕೆ ಮುಂದು

ಕನ್ನಡ ಕಿರುತೆರೆಯ ಜನಪ್ರಿಯ ಜೋಡಿಗಳಲ್ಲಿ ಒಂದಾದ ಚಂದನ್ ಶೆಟ್ಟಿ- ನಿವೇದಿತಾ ದಾಂಪತ್ಯದಲ್ಲಿ ಬಿರುಕು ಉಂಟಾಗಿದ್ದು, ಪರಸ್ಪರ ಒಪ್ಪಿಗೆ ಮೂಲಕ ವಿಚ್ಛೇದನ ಪಡೆದುಕೊಳ್ಳಲು ಕೋರ್ಟ್ ಮೆಟ್ಟಿಲೇರಿದ್ದರು.

ಕನ್ನಡ ಕಿರುತೆರೆಯ ಜನಪ್ರಿಯ ಜೋಡಿಗಳಲ್ಲಿ ಒಂದಾದ ಚಂದನ್ ಶೆಟ್ಟಿ- ನಿವೇದಿತಾ ದಾಂಪತ್ಯದಲ್ಲಿ ಬಿರುಕು ಉಂಟಾಗಿದ್ದು, ಪರಸ್ಪರ ಒಪ್ಪಿಗೆ ಮೂಲಕ ವಿಚ್ಛೇದನಕ್ಕೆ ಮುಂದಾಗಿದ್ದಾರೆ. ಈ ಸಂಬಂಧ ಶಾಂತಿನಗರದ ಕೋರ್ಟ್ ನಲ್ಲಿ ನಿನ್ನೆ ಕೇಸ್ ದಾಖಲಿಸಿದ್ದರು. ಪ್ರಕರಣದ ಮೊದಲ ವಿಚಾರಣೆ ಹಿನ್ನೆಲೆಯಲ್ಲಿ ಇಬ್ಬರೂ ಇಂದು 2ನೇ ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯಕ್ಕೆ ಹಾಜರಾದರು.

ಬಿಗ್​ ಬಾಸ್​ ಕನ್ನಡ ಸೀಸನ್​ 5’ ರಿಯಾಲಿಟಿ ಶೋನಲ್ಲಿ ನಿವೇದಿತಾ ಗೌಡ ಹಾಗೂ ಚಂದನ್​ ಶೆಟ್ಟಿ ಅವರು ಸ್ಪರ್ಧಿಸಿದ್ದರು. ಅಲ್ಲಿಯೇ ಅವರಿಗೆ ಮೊದಲ ಬಾರಿಗೆ ಪರಿಚಯ ಆಗಿ, ಸ್ನೇಹ ನಂತರ ಪ್ರೀತಿಯಾಗಿ ಬದಲಾಯಿತು. 2017ರಲ್ಲಿ ಮೈಸೂರಿನ ಯುವ ದಸರಾ ವೇದಿಕೆಯಲ್ಲಿ ನಿವೇದಿತಾಗೆ ಚಂದನ್​ ಶೆಟ್ಟಿ ಅವರು ಪ್ರಪೋಸ್​ ಮಾಡಿದ್ದರು. ಬಳಿಕ ಅವರಿಬ್ಬರು 2020 ಫೆಬ್ರವರಿಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.

ಬಳಿಕ ಗಿಚ್ಚಿಗಿಲಿಗಿಲಿ ಸೇರಿದಂತೆ ಹಲವು ಟಿವಿ ರಿಯಾಲಿಟಿ ಶೋಗಳಲ್ಲಿ ಈ ಜೋಡಿ ಕಾಣಿಸಿಕೊಳ್ಳುತಿತ್ತು. ಇನ್ನೂ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ಟಿವ್ ಆಗಿರುವ ನಿವೇದಿತಾ ಗೌಡ ಆಗಾಗ ಹೊಸ ಹೊಸ ರೀಲ್ಸ್​ ಹಂಚಿಕೊಳ್ಳುತ್ತಾರೆ. ಕೆಲವು ರೀಲ್ಸ್‌ಗಳನ್ನು ನೋಡಿ ನೆಟ್ಟಿಗರು ಗರಂ ಆಗುತ್ತಿದ್ದರು. ಕಮೆಂಟ್​ಗಳಲ್ಲಿ ಅನೇಕರು ಚಂದನ್​ ಶೆಟ್ಟಿಯ ಹೆಸರನ್ನೂ ಆಗಾಗ ಎಳೆದು ತರುತ್ತಿದ್ದರು. ಮಗು ವಿಚಾರವೇ ಅವರಿಬ್ಬರ ನಡುವಿನ ದಾಂಪತ್ಯ ಜೀವನ ಬಿರುಕುಗೊಳ್ಳಲು ಕಾರಣ ಎಂಬುದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT