ಕೋಟಿ ಚಿತ್ರದ ಡಾಲಿ ಧನಂಜಯ 
ಸಿನಿಮಾ ಸುದ್ದಿ

''ಕೋಟಿ​ ಕನಸುಗಳ ಬೆನ್ನತ್ತಿ ಹೊರಟ ಕಾಮನ್‌ ಮ್ಯಾನ್‌'': ಡಾಲಿ ಧನಂಜಯ್‌ ಅಭಿನಯದ ಕೋಟಿ ಚಿತ್ರದ ಟ್ರೈಲರ್‌ ರಿಲೀಸ್

ಕನ್ನಡ ಚಲನಚಿತ್ರೋದ್ಯಮದಲ್ಲಿ ಸಾಕಷ್ಟು ನೀರಸ ಸನ್ನಿವೇಶದ ಮಧ್ಯೆ, ಆಕ್ಷನ್-ಪ್ಯಾಕ್ಡ್ ಫ್ಯಾಮಿಲಿ ಎಂಟರ್ಟೈನರ್ ಕೋಟಿ ಚಿತ್ರದ ಟ್ರೈಲರ್ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ.

ಬೆಂಗಳೂರು: ಕನ್ನಡ ಚಲನಚಿತ್ರೋದ್ಯಮದಲ್ಲಿ ಸಾಕಷ್ಟು ನೀರಸ ಸನ್ನಿವೇಶದ ಮಧ್ಯೆ, ಆಕ್ಷನ್-ಪ್ಯಾಕ್ಡ್ ಫ್ಯಾಮಿಲಿ ಎಂಟರ್ಟೈನರ್ ಕೋಟಿ ಚಿತ್ರದ ಟ್ರೈಲರ್ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ.

ಕೋಟಿ ಚಿತ್ರವು ಪರಮೇಶ್ವರ್ ಗುಂಡ್ಕಲ್ ಅವರ ಚೊಚ್ಚಲ ನಿರ್ದೇಶನದ ಚಿತ್ರವಾಗಿದ್ದು, ಡಾಲಿ ಧನಂಜಯ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ನಿನ್ನೆಯಷ್ಟೇ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಕೋಟಿ​ ಕನಸುಗಳ ಬೆನ್ನತ್ತಿ ಹೊರಟ ಕಾಮನ್‌ ಮ್ಯಾನ್‌ ಕಥೆಯನ್ನು ಈ ಚಿತ್ರ ಹೊಂದಿದೆ.

ಅಸಾಮಾನ್ಯ ಕನಸುಗಳನ್ನು ಹೊಂದಿರುವ ಸಾಮಾನ್ಯ ಚಾಲಕ ಕೋಟಿ ಧನಂಜಯ ಅವರ ಚಿತ್ರಣದ ಒಂದು ನೋಟವನ್ನು ನೀಡುತ್ತದೆ.

ಚಿತ್ರದಲ್ಲಿನ ಡಾಲಿ ಪಾತ್ರವು ಉದಾತ್ತ ಮಹತ್ವಾಕಾಂಕ್ಷೆಯಿಂದ ಉತ್ತೇಜಿಸಲ್ಪಟ್ಟಿದ್ದು, ಒಂದು ಕೋಟಿ ರೂಪಾಯಿಗಳ ಸಂಪತ್ತನ್ನು ಪ್ರಾಮಾಣಿಕ ವಿಧಾನಗಳ ಮೂಲಕ, ವಂಚನೆ ಅಥವಾ ಹಾನಿಯಿಲ್ಲದೆ ಸಂಪಾದಿಸಿ ತನ್ನ ಕುಟುಂಬಕ್ಕೆ ಉತ್ತಮ ಭವಿಷ್ಯವನ್ನು ಭದ್ರಪಡಿಸುವುದು ನಾಯಕನ ಕನಸಾಗಿರುತ್ತದೆ. ಸಾಮಾನ್ಯ ಮನುಷ್ಯನ ಹೋರಾಟಗಳು ಮತ್ತು ಆಕಾಂಕ್ಷೆಗಳ ಸುತ್ತ ನಡೆಯುವ ಕೋಟಿ ಚಿತ್ರದಲ್ಲಿ ರಮೇಶ್ ಇಂದಿರಾ ಅವರು ಖಡಕ್ ಖಳನಾಯಕನಾಗಿ ಕಾಣಿಸಿಕೊಂಡಿದ್ದಾರೆ.

ಈ ಹಿಂದೆ ಬಿಗ್ ಬಾಸ್ ಕನ್ನಡ ಸೇರಿದಂತೆ ಟಿವಿವಾಹಿನಿಯಲ್ಲಿ ಯಶಸ್ವಿ ಕಾರ್ಯಕ್ರಮಗಳನ್ನು ತಂದಿದ್ದ ಪರಮ್, ಈ ಚಿತ್ರದೊಂದಿಗೆ ವಿಷಯ-ಚಾಲಿತ ಸಿನಿಮೀಯ ಅನುಭವವನ್ನು ನೀಡುವ ಗುರಿಯನ್ನು ಹೊಂದಿದ್ದಾರೆ. ''ಗುಣಮಟ್ಟದ ಮನರಂಜನೆ ನೀಡುವ ತಮ್ಮ ಬದ್ಧತೆಯನ್ನು ವಿವರಿಸಿದ ನಿರ್ದೇಶಕ ಪರಮ್, ಕೋಟಿ ಮಧ್ಯಮ ವರ್ಗದ ಕಥೆಯಾಗಿದ್ದು, ಎಲ್ಲರೂ ಚಿತ್ರಕಥೆಗೆ ಕನೆಕ್ಟ್ ಆಗುತ್ತಾರೆ'' ಎಂದು ಹೇಳಿದರು.

ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ನಿರ್ದೇಶಕ ಪರಮ್ "ಇದೊಂದು ಕಂಟೆಂಟ್ ಇರುವ ಕಮರ್ಷಿಯಲ್ ಸಿನಿಮಾ. ಒಂದೊಳ್ಳೆ ಕತೆ, ಒಳ್ಳೆ ಮನರಂಜನೆ ಗ್ಯಾರಂಟಿ" ಎಂದರು. ಅಪ್ಪಟ ಕನ್ನಡ ಮಣ್ಣಿನ ಕತೆಯಾದ ಕೋಟಿ ಈಗಾಗಲೇ ಟೀಸರ್ ಮತ್ತು ಹಾಡುಗಳ ಮುಖಾಂತರ ಸದ್ದು ಮಾಡುತ್ತಿದೆ. ವರ್ಷದ ಮೊದಲಾರ್ಧದಲ್ಲಿ ಯಾವುದೇ ದೊಡ್ಡ ಗೆಲುವು ಕಾಣದೆ ಕಂಗೆಟ್ಟಿರುವ ಕನ್ನಡ ಇಂಡಸ್ಟ್ರಿಗೆ 'ಕೋಟಿ' ಗೆಲ್ಲುವ ಭರವಸೆಯಾಗಿ ಕಂಡಿದೆ.

ಕೋಟಿ ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್‌ ಮತ್ತು ಖಳನಾಯಕನಾಗಿ ರಮೇಶ್ ಇಂದಿರಾ ಇದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ತಾರಾ, ಸರ್ದಾರ್‌ ಸತ್ಯ ಜತೆಗೆ ಪೃಥ್ವಿ ಶಾಮನೂರು, ತನುಜಾ ವೆಂಕಟೇಶ್, ಅಭಿಷೇಕ್ ಶ್ರೀಕಾಂತ್, ವಿಜಯ್ ಶೋಭರಾಜ್ ಪವೂರ್ ಮುಂತಾದವರು ಅಭಿನಯಿಸಿದ್ದಾರೆ.

ಅಂದಹಾಗೆ ಈ ಕೋಟಿ ಸಿನಿಮಾ ಇದೇ ಜೂನ್ 14ಕ್ಕೆ ಬಿಡುಗಡೆಯಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

SCROLL FOR NEXT