ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ 
ಸಿನಿಮಾ ಸುದ್ದಿ

ಕಲಾವಿದರ ಸಂಘದ ಜೊತೆಗೆ ಚರ್ಚಿಸಿ ನಟ ದರ್ಶನ್ ವಿರುದ್ಧ ಕ್ರಮ: ಫಿಲಂ ಚೇಂಬರ್ ಅಧ್ಯಕ್ಷ ಎನ್‌ಎಂ ಸುರೇಶ್

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಟ ದರ್ಶನ್ ತೂಗುದೀಪ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಕಲಾವಿದರ ಸಂಘದ ಜೊತೆಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್‌ಸಿಸಿ) ಅಧ್ಯಕ್ಷ ಎನ್‌ಎಂ ಸುರೇಶ್‌ ಬುಧವಾರ ಹೇಳಿದ್ದಾರೆ.

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಟ ದರ್ಶನ್ ತೂಗುದೀಪ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಕಲಾವಿದರ ಸಂಘದ ಜೊತೆಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್‌ಸಿಸಿ) ಅಧ್ಯಕ್ಷ ಎನ್‌ಎಂ ಸುರೇಶ್‌ ಬುಧವಾರ ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ ನಂತರವೇ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ದರ್ಶನ್ ವಿರುದ್ಧ ಕೆಎಫ್‌ಸಿಸಿ ಕಠಿಣ ಕ್ರಮ ಕೈಗೊಳ್ಳಬೇಕು, ಅವರ ಸಿನಿಮಾ ಬಿಡುಗಡೆ ಮಾಡಬಾರದು, ಅವರನ್ನು ಬ್ಯಾನ್ ಮಾಡಬೇಕು ಎಂದು ಒತ್ತಾಯಿಸಿ ತಮ್ಮನ್ನು ಭೇಟಿ ಮಾಡಿದ ಕೆಲವು ಕನ್ನಡ ಪರ ಸಂಘಟನೆಗಳ ಸದಸ್ಯರಿಗೆ ಪ್ರತಿಕ್ರಿಯಿಸಿದ ಎನ್.ಎಂ. ಸುರೇಶ್, ಮೊದಲಿಗೆ ರೇಣುಕಾ ಸ್ವಾಮಿ ಕುಟುಂಬಕ್ಕೆ ಸಾಂತ್ವನ ಹೇಳುತ್ತೇನೆ. ಅವರ ನೋವು ನಮಗೂ ಅರ್ಥವಾಗಿದೆ. ಬೇಡಿಕೆಗೆ ಪ್ರತಿಕ್ರಿಯಿಸುವುದು ನಮ್ಮ ಕರ್ತವ್ಯ. ಫಿಲಂ ಚೇಂಬರ್ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಹೇಳಬೇಡಿ, ಅದನ್ನು ನಾನು ಒಪ್ಪಿಕೊಳ್ಳಲ್ಲ ಎಂದರು.

ಕಾನೂನು ಪ್ರಕಾರ ಪ್ರಕರಣದ ಸಮಗ್ರ ತನಿಖೆ ನಡೆಸುತ್ತಿದ್ದು, ಸತ್ಯವನ್ನು ಹೊರಗೆ ತರಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಹೇಳಿದ್ದಾರೆ. ಕಾನೂನು ಪ್ರಕರ ಆರೋಪಿಗಳಿಗೆ ಶಿಕ್ಷೆಯಾಗಲಿ ಎಂದು ನಾವು ಕೂಡಾ ಹೇಳಿದ್ದೇವೆ. ನಮಗೂ ಕೆಲವು ದೂರುಗಳು ಬಂದಿವೆ, ಆದರೆ ಅದಕ್ಕಾಗಿ 'ಕಲಾವಿದರ ಸಂಘ' ಇದೆ. ಅದರೊಂದಿಗೆ ಮಾತನಾಡಲು ಪ್ರಯತ್ನಿಸಿದ್ದೇವೆ. ಅವರ ಜೊತೆಗೆ ಮಾತನಾಡದೆ ಏಕಪಕ್ಷೀಯವಾಗಿ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಾಗದು. ಚರ್ಚೆ ನಡೆಸಲು ಸಭೆ ಕರೆಯಲಾಗುವುದು, ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಚಿತ್ರ ನಿರ್ಮಾಪಕ ಹಾಗೂ ಕೆಎಫ್‌ಸಿಸಿ ಮಾಜಿ ಅಧ್ಯಕ್ಷ ಸಾ.ರಾ.ಗೋವಿಂದ್ ಮಾತನಾಡಿ, ಹತ್ಯೆಯನ್ನು ಖಂಡಿಸಿದರು. ರೇಣುಕಾಸ್ವಾಮಿ ಪೋಷಕರ ದುಃಖದಲ್ಲಿ ಅವರ ಜೊತೆ ನಿಲ್ಲಬೇಕು. ಇಂತಹ ಘಟನೆಗಳಿಂದ ಚಿತ್ರರಂಗಕ್ಕೆ ಅಪಖ್ಯಾತಿ ಉಂಟಾಗುತ್ತದೆ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ, ಯಾರೂ ಕಾನೂನಿಗಿಂತ ಮೇಲಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT