ಶರತ್ ಚಕ್ರವರ್ತಿ ನಿರ್ದೇಶನದ ಚಿತ್ರದಲ್ಲಿ ಶಿವರಾಜ್ ಕೆಆರ್ ಪೇಟೆ 
ಸಿನಿಮಾ ಸುದ್ದಿ

ಶರತ್ ಚಕ್ರವರ್ತಿ ಚೊಚ್ಚಲ ನಿರ್ದೇಶನದ ಚಿತ್ರಕ್ಕೆ ಶಿವರಾಜ್ ಕೆಆರ್ ಪೇಟೆ ನಾಯಕ

ಹಾಸ್ಯ ನಟರು ಹೀರೋಗಳಾಗಿ ಸಿನಿಮಾದಲ್ಲಿ ನಟಿಸುವುದು ಸಾಮಾನ್ಯವಾಗಿದೆ. ಟಿವಿ ಶೋಗಳು ಮತ್ತು ಚಲನಚಿತ್ರಗಳಲ್ಲಿ ಕಾಮಿಡಿ ಪಾತ್ರಗಳಿಗೆ ಹೆಸರಾಗಿದ್ದ ನಟ ಶಿವರಾಜ್ ಕೆಆರ್ ಪೇಟೆ ಅವರು 2020ರ 'ನಾನು ಮತ್ತೆ ಗುಂಡ' ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದರು. ಇದೀಗ ಮತ್ತೊಮ್ಮೆ ಹೊಸ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ.

ಹಾಸ್ಯ ನಟರು ಹೀರೋಗಳಾಗಿ ಸಿನಿಮಾದಲ್ಲಿ ನಟಿಸುವುದು ಸಾಮಾನ್ಯವಾಗಿದೆ. ಟಿವಿ ಶೋಗಳು ಮತ್ತು ಚಲನಚಿತ್ರಗಳಲ್ಲಿ ಕಾಮಿಡಿ ಪಾತ್ರಗಳಿಗೆ ಹೆಸರಾಗಿದ್ದ ನಟ ಶಿವರಾಜ್ ಕೆಆರ್ ಪೇಟೆ ಅವರು 2020ರ 'ನಾನು ಮತ್ತೆ ಗುಂಡ' ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದರು. ಇದೀಗ ಮತ್ತೊಮ್ಮೆ ಹೊಸ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ.

ಶಿವರಾಜ್ ತಮ್ಮ ಮುಂದಿನ ಸಿನಿಮಾಗಾಗಿ ಮೊದಲ ಬಾರಿಗೆ ನಿರ್ದೇಶಕನ ಜವಾಬ್ದಾರಿ ಹೊತ್ತಿರುವ ಶರತ್ ಚಕ್ರವರ್ತಿ ಅವರೊಂದಿಗೆ ಕೈಜೋಡಿಸುತ್ತಿದ್ದಾರೆ. ಅಯೋಗ್ಯ, ರೈಡರ್, ಮತ್ತು ನಾನು ಮತ್ತೆ ಗುಂಡ ಮುಂತಾದ ಚಿತ್ರಗಳಲ್ಲಿ ಬರಹಗಾರರಾಗಿ ಗುರುತಿಸಿಕೊಂಡಿದ್ದ ಶರತ್ ಇದೀಗ ನಿರ್ದೇಶಕರಾಗಿ ಪದಾರ್ಪಣೆ ಮಾಡುತ್ತಿದ್ದಾರೆ. ಹೊಸ ಚಿತ್ರವನ್ನು ಶಿವರಾಜ್ ಅವರ ಹುಟ್ಟುಹಬ್ಬದಂದು ಮುಹೂರ್ತ ಸಮಾರಂಭದೊಂದಿಗೆ ಘೋಷಿಸಲಾಯಿತು.

'ನಾನು ಭಾವನಾತ್ಮಕ ವಿಷಯಗಳನ್ನು ಹೊಂದಿರುವ ಚಿತ್ರವನ್ನು ನಿರ್ದೇಶಿಸುತ್ತಿದ್ದೇನೆ. ಇದು ಸಾಮಾನ್ಯ ಚಿತ್ರಗಳಿಗಿಂತ ಭಿನ್ನವಾಗಿರುತ್ತದೆ. ಶಿವರಾಜ್ ಅವರು ನಾನು ಮತ್ತೆ ಗುಂಡ ಚಿತ್ರದ ಮೂಲಕ ತಮ್ಮ ಬಹುಮುಖ ಪ್ರತಿಭೆಯನ್ನು ಸಾಬೀತುಪಡಿಸಿದ್ದಾರೆ ಮತ್ತು ಈ ಚಿತ್ರವು ಅವರ ಅಭಿನಯದ ಮತ್ತೊಂದು ಅಂಶವನ್ನು ಪ್ರದರ್ಶಿಸುತ್ತದೆ' ಎಂದು ಶರತ್ ಹೇಳುತ್ತಾರೆ.

ಸದ್ಯಕ್ಕೆ ಚಿತ್ರತಂಡದ ಬಗ್ಗೆ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲಾಗಿಲ್ಲವಾದರೂ, ಚಿತ್ರತಂಡ ಜೂನ್ 20 ರಂದು ನಿರ್ಮಾಣ ಕಾರ್ಯವನ್ನು ಪ್ರಾರಂಭಿಸಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT