ಶರತ್ ಚಕ್ರವರ್ತಿ ನಿರ್ದೇಶನದ ಚಿತ್ರದಲ್ಲಿ ಶಿವರಾಜ್ ಕೆಆರ್ ಪೇಟೆ 
ಸಿನಿಮಾ ಸುದ್ದಿ

ಶರತ್ ಚಕ್ರವರ್ತಿ ಚೊಚ್ಚಲ ನಿರ್ದೇಶನದ ಚಿತ್ರಕ್ಕೆ ಶಿವರಾಜ್ ಕೆಆರ್ ಪೇಟೆ ನಾಯಕ

ಹಾಸ್ಯ ನಟರು ಹೀರೋಗಳಾಗಿ ಸಿನಿಮಾದಲ್ಲಿ ನಟಿಸುವುದು ಸಾಮಾನ್ಯವಾಗಿದೆ. ಟಿವಿ ಶೋಗಳು ಮತ್ತು ಚಲನಚಿತ್ರಗಳಲ್ಲಿ ಕಾಮಿಡಿ ಪಾತ್ರಗಳಿಗೆ ಹೆಸರಾಗಿದ್ದ ನಟ ಶಿವರಾಜ್ ಕೆಆರ್ ಪೇಟೆ ಅವರು 2020ರ 'ನಾನು ಮತ್ತೆ ಗುಂಡ' ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದರು. ಇದೀಗ ಮತ್ತೊಮ್ಮೆ ಹೊಸ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ.

ಹಾಸ್ಯ ನಟರು ಹೀರೋಗಳಾಗಿ ಸಿನಿಮಾದಲ್ಲಿ ನಟಿಸುವುದು ಸಾಮಾನ್ಯವಾಗಿದೆ. ಟಿವಿ ಶೋಗಳು ಮತ್ತು ಚಲನಚಿತ್ರಗಳಲ್ಲಿ ಕಾಮಿಡಿ ಪಾತ್ರಗಳಿಗೆ ಹೆಸರಾಗಿದ್ದ ನಟ ಶಿವರಾಜ್ ಕೆಆರ್ ಪೇಟೆ ಅವರು 2020ರ 'ನಾನು ಮತ್ತೆ ಗುಂಡ' ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದರು. ಇದೀಗ ಮತ್ತೊಮ್ಮೆ ಹೊಸ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ.

ಶಿವರಾಜ್ ತಮ್ಮ ಮುಂದಿನ ಸಿನಿಮಾಗಾಗಿ ಮೊದಲ ಬಾರಿಗೆ ನಿರ್ದೇಶಕನ ಜವಾಬ್ದಾರಿ ಹೊತ್ತಿರುವ ಶರತ್ ಚಕ್ರವರ್ತಿ ಅವರೊಂದಿಗೆ ಕೈಜೋಡಿಸುತ್ತಿದ್ದಾರೆ. ಅಯೋಗ್ಯ, ರೈಡರ್, ಮತ್ತು ನಾನು ಮತ್ತೆ ಗುಂಡ ಮುಂತಾದ ಚಿತ್ರಗಳಲ್ಲಿ ಬರಹಗಾರರಾಗಿ ಗುರುತಿಸಿಕೊಂಡಿದ್ದ ಶರತ್ ಇದೀಗ ನಿರ್ದೇಶಕರಾಗಿ ಪದಾರ್ಪಣೆ ಮಾಡುತ್ತಿದ್ದಾರೆ. ಹೊಸ ಚಿತ್ರವನ್ನು ಶಿವರಾಜ್ ಅವರ ಹುಟ್ಟುಹಬ್ಬದಂದು ಮುಹೂರ್ತ ಸಮಾರಂಭದೊಂದಿಗೆ ಘೋಷಿಸಲಾಯಿತು.

'ನಾನು ಭಾವನಾತ್ಮಕ ವಿಷಯಗಳನ್ನು ಹೊಂದಿರುವ ಚಿತ್ರವನ್ನು ನಿರ್ದೇಶಿಸುತ್ತಿದ್ದೇನೆ. ಇದು ಸಾಮಾನ್ಯ ಚಿತ್ರಗಳಿಗಿಂತ ಭಿನ್ನವಾಗಿರುತ್ತದೆ. ಶಿವರಾಜ್ ಅವರು ನಾನು ಮತ್ತೆ ಗುಂಡ ಚಿತ್ರದ ಮೂಲಕ ತಮ್ಮ ಬಹುಮುಖ ಪ್ರತಿಭೆಯನ್ನು ಸಾಬೀತುಪಡಿಸಿದ್ದಾರೆ ಮತ್ತು ಈ ಚಿತ್ರವು ಅವರ ಅಭಿನಯದ ಮತ್ತೊಂದು ಅಂಶವನ್ನು ಪ್ರದರ್ಶಿಸುತ್ತದೆ' ಎಂದು ಶರತ್ ಹೇಳುತ್ತಾರೆ.

ಸದ್ಯಕ್ಕೆ ಚಿತ್ರತಂಡದ ಬಗ್ಗೆ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲಾಗಿಲ್ಲವಾದರೂ, ಚಿತ್ರತಂಡ ಜೂನ್ 20 ರಂದು ನಿರ್ಮಾಣ ಕಾರ್ಯವನ್ನು ಪ್ರಾರಂಭಿಸಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT