ನಾಗರತ್ನ, ದುನಿಯಾ ವಿಜಯ್ 
ಸಿನಿಮಾ ಸುದ್ದಿ

ಮೊದಲನೇ ಪತ್ನಿಗೆ ವಿಚ್ಛೇದನ: ನಟ ದುನಿಯಾ ವಿಜಯ್ ಅರ್ಜಿ ವಜಾ!

ಮೊದಲನೇ ಪತ್ನಿ ನಾಗರತ್ನ ರಿಂದ ವಿಚ್ಛೇದನ ಪಡೆಯಲು ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಗುರುವಾರ ವಜಾಗೊಳಿಸಿದೆ.

ಬೆಂಗಳೂರು: ಮೊದಲನೇ ಪತ್ನಿ ನಾಗರತ್ನ ರಿಂದ ವಿಚ್ಛೇದನ ಪಡೆಯಲು ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಗುರುವಾರ ವಜಾಗೊಳಿಸಿದೆ.

ನಾಗರತ್ನಗೆ ವಿಚ್ಛೇದನ ನೀಡದೆ ಕೀರ್ತಿ ಗೌಡ ಅವರನ್ನು ವಿವಾಹವಾಗಿರುವ ದುನಿಯಾ ವಿಜಯ್ ಕ್ರೌರ್ಯದ ಆಧಾರದಲ್ಲಿ ನಾಗರತ್ನ ಅವರಿಗೆ ವಿಚ್ಚೇದನ ನೀಡಲು ಶಾಂತಿನಗರದ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ, ಪತ್ನಿ ನಾಗರತ್ನ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸುವಲ್ಲಿ ವಿಫಲವಾದ ಕಾರಣ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ.

2018ರಲ್ಲಿ ಮಾರುತಿ ಗೌಡ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದುನಿಯಾ ವಿಜಯ್ ಜೈಲು ಪಾಲಾಗಿದ್ದಾಗ, ಕೀರ್ತಿ ಗೌಡ ಮೇಲೆ ನಾಗರತ್ನ ಹಲ್ಲೆ ನಡೆಸಿದ್ದರು. ಕ್ರೌರ್ಯದ ಕಾರಣ ನೀಡಿ ನಾಗರತ್ನರಿಂದ ವಿಚ್ಛೇದನ ಪಡೆಯಲು ಕೌಟುಂಬಿಕ ನ್ಯಾಯಾಲಯಕ್ಕೆ ದುನಿಯಾ ವಿಜಯ್ ಎರಡನೇ ಬಾರಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ನಾಗರತ್ನ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ವಿಜಯ್ ಅವರ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

"ಕೇಸರಿ ಧರಿಸುವ ಯೋಗ ಗುರು ಸಭ್ಯತೆಯ ಎಲ್ಲಾ ಮಿತಿಗಳನ್ನು ಮೀರಿದ್ದಾರೆ": ಬಾಬಾ ರಾಮ್‌ದೇವ್ ವಿರುದ್ಧ ಕಂಗನಾ ಮತ್ತೆ ಕಿಡಿ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!