ರೇಣುಕಾಸ್ವಾಮಿ ಮತ್ತು ದರ್ಶನ್  
ಸಿನಿಮಾ ಸುದ್ದಿ

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ತನಿಖಾಧಿಕಾರಿ ಬದಲಾವಣೆ!

ಕನ್ನಡ ಚಿತ್ರರಂಗದ ನಟ ದರ್ಶನ್‌ ಭಾಗಿಯಾಗಿದ್ದಾರೆ ಎನ್ನಲಾದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ ಪ್ರಮುಖ ಹಂತಕ್ಕೆ ತಲುಪುವ ಹೊತ್ತಲ್ಲೇ ತನಿಖಾಧಿಕಾರಿಯನ್ನು ಬದಲಾವಣೆ ಮಾಡಲಾಗಿದೆ.

ಬೆಂಗಳೂರು: ಕನ್ನಡ ಚಿತ್ರರಂಗದ ನಟ ದರ್ಶನ್‌ ಭಾಗಿಯಾಗಿದ್ದಾರೆ ಎನ್ನಲಾದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ ಪ್ರಮುಖ ಹಂತಕ್ಕೆ ತಲುಪುವ ಹೊತ್ತಲ್ಲೇ ತನಿಖಾಧಿಕಾರಿಯನ್ನು ಬದಲಾವಣೆ ಮಾಡಲಾಗಿದೆ.

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ಆರೋಪದಲ್ಲಿ ನಟ ದರ್ಶನ್ ಆ್ಯಂಡ್ ಗ್ಯಾಂಗ್ ಅನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಎ1 ಆರೋಪಿಯಾಗಿ ಪವಿತ್ರಾ ಗೌಡರನ್ನ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಆದರೆ ಇದರ ಬೆನ್ನಲ್ಲೇ ತನಿಖಾಧಿಕಾರಿಯನ್ನು ಬದಲಾವಣೆ ಮಾಡಲಾಗಿದೆ. ಕೇಸ್ ಪ್ರಾರಂಭದಿಂದ ಕಾಮಾಕ್ಷಿಪಾಳ್ಯದ ಇನ್​​ಸ್ಪೆಕ್ಟರ್​ ಗಿರೀಶ್ ನಾಯ್ಕ್ ಅವರು ತನಿಖಾಧಿಕಾರಿ ಆಗಿದ್ದರು.

ರೇಣುಕಾಸ್ವಾಮಿ ಕೊಲೆ‌ ಪ್ರಕರಣದ ತನಿಖಾಧಿಕಾರಿಯನ್ನು ಇಂದಿನಿಂದ ಬದಲಾವಣೆ ಮಾಡಲಾಗಿದ್ದು, ವಿಜಯನಗರ ಉಪವಿಭಾಗ ಎಸಿಪಿ ಚಂದನ್ ನೂತನ ತನಿಖಾಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಇಂದಿನಿಂದ ಎಸಿಪಿ ಚಂದನ್ ನೇತೃತ್ವದಲ್ಲಿ ಪ್ರಕರಣದ ತನಿಖೆ ಮುಂದುವರಿಯಲಿದೆ.

ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಸಿ.ಕೆ ಅಚ್ಚುಕಟ್ಟು‌ ಠಾಣೆಯಿಂದ ಗಿರೀಶ್ ನಾಯ್ಕ್ ಅವರನ್ನು ಕಾಮಾಕ್ಷಿಪಾಳ್ಯಕ್ಕೆ ವರ್ಗಾವಣೆ ಮಾಡಲಾಗಿತ್ತು. ಎರಡು ದಿನಗಳ‌ ಹಿಂದೆ ಪುನಃ ವಾಪಸ್ ತಮ್ಮ ಠಾಣೆಗಳಿಗೆ ಹೋಗಲು ಆದೇಶ ಬಂದಿದ್ದು, ಈ ಮಧ್ಯೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಜವಾಬ್ದಾರಿ ಇವರ ಹೆಗಲಿಗೆ ಬಿದ್ದಿತ್ತು.

ಪ್ರಕರಣವನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿದ್ದ ಗಿರೀಶ್ ನಾಯ್ಕ್, ನಟ ದರ್ಶನ್‌, ಪವಿತ್ರ ಗೌಡ ಸೇರಿದಂತೆ ಒಟ್ಟು 14 ಜನರನ್ನು ಬಂಧಿಸಿ ಕೇಸ್‌ಅನ್ನು ಸಮರ್ಥವಾಗಿ ನಡೆಸುತ್ತಿದ್ದರು. ಇದೀಗ ಗಿರೀಶ್ ನಾಯ್ಕ್ ಸಿ.ಕೆ ಅಚ್ಚುಕಟ್ಟು ಠಾಣೆಗೆ ವಾಪಸ್ ಹಿನ್ನಲೆಯಲ್ಲಿ ವಿಜಯನಗರ ಉಪವಿಭಾಗ ಎಸಿಪಿ ಚಂದನ್ ನೂತನ ತನಿಖಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!