ಕಾರ್ತಿಕ್ ಮಹೇಶ್ 
ಸಿನಿಮಾ ಸುದ್ದಿ

'ರಾಮರಸ' ಮೂಲಕ ಬೆಳ್ಳಿತೆರೆಗೆ ಬಿಗ್ ಬಾಸ್ ಖ್ಯಾತಿಯ ಕಾರ್ತಿಕ್ ಮಹೇಶ್

ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​​ಬಾಸ್​ ಸೀಸನ್ 10​ರ ವಿನ್ನರ್​​ ಕಾರ್ತಿಕ್​ ಮಹೇಶ್ ಮತ್ತೆ ಬೆಳ್ಳಿ ಪರದೆ ಮೇಲೆ ಮಿಂಚಲು ರೆಡಿಯಾಗಿದ್ದಾರೆ.

ಬೆಂಗಳೂರು: ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​​ಬಾಸ್​ ಸೀಸನ್ 10​ರ ವಿನ್ನರ್​​ ಕಾರ್ತಿಕ್​ ಮಹೇಶ್ ಮತ್ತೆ ಬೆಳ್ಳಿ ಪರದೆ ಮೇಲೆ ಮಿಂಚಲು ರೆಡಿಯಾಗಿದ್ದಾರೆ.

ಈ ಹಿಂದೆ ಸಾಗರ್ ಪುರಾಣಿಕ್ ಅವರ ಡೊಳ್ಳು ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟಿದ್ದ ಕಾರ್ತಿಕ್ ಮಹೇಶ್ ಇದೀಗ 'ರಾಮರಸ' ಚಿತ್ರದ ಮೂಲಕ ಮತ್ತೆ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಕಾರ್ತಿಕ್ ರ ಮೊದಲ ಚಿತ್ರ ಪ್ರೇಕ್ಷಕರ ಮೆಚ್ಚುಗೆ ಗಳಿಸಿದ್ದು ಮಾತ್ರವಲ್ಲದೇ ರಾಷ್ಟ್ರ ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು. ಇದೀಗ ರಾಮರಸ ಚಿತ್ರದ ಮೂಲಕ ಮತ್ತೆ ಬೆಳ್ಳಿ ಪರದೆ ಮೇಲೆ ಮಿಂಚಲು ಸಿದ್ಧರಾಗಿದ್ದಾರೆ.

ಕಾರ್ತಿಕ್​ ಮಹೇಶ್ ನಟನೆಯ ‘ರಾಮರಸ’ ಸಿನಿಮಾದ ಸುದ್ದಿಗೋಷ್ಠಿಗೆ ನಟ ಕಿಚ್ಚ ಸುದೀಪ್​ ಅವರು ಅತಿಥಿಯಾಗಿ ಬಂದಿದ್ದರು. ನೂತನ ‘ರಾಮರಸ’ ಸಿನಿಮಾದ ಹೀರೋ ಆಗಿ ಕಾರ್ತಿಕ್​ ಮಹೇಶ್​ ಅವರನ್ನು ಕಿಚ್ಚ ಸುದೀಪ್​ ಲಾಂಚ್​ ಮಾಡಿದ್ದು, ಕಿಚ್ಚ ಸುದೀಪ್​ ಅವರಿಂದ ಹೀರೋ ಆಗಿ ಲಾಂಚ್​ ಆದ ಕಾರ್ತಿಕ್​ ಮಹೇಶ್​ ಅವರು ಫುಲ್ ಖುಷ್​ ಆಗಿದ್ದಾರೆ. ಈ ರಾಮರಸ ಚಿತ್ರವನ್ನು ಜಿ-ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಗುರು ದೇಶಪಾಂಡೆ ನಿರ್ಮಿಸಿದ್ದಾರೆ. ಚಿತ್ರವನ್ನು ಗಿರಿರಾಜ್ ಬಿಎಂ ನಿರ್ದೇಶಿಸಿದ್ದು, ಚಿತ್ರ ಸಾಕಷ್ಟು ಕುತೂಹಲ ಕೆರಳಿಸಿದೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಕಾರ್ತಿಕ್, "ಬಿಗ್ ಬಾಸ್‌ನಲ್ಲಿ ಗೆಲ್ಲುವ ಕ್ಷಣದಲ್ಲಿ ಸುದೀಪ್ ಸರ್ ನನ್ನ ಕೈ ಹಿಡಿದಿದ್ದರು.. ಅಂದಿನಿಂದ ನಿಸ್ಸಂದೇಹವಾಗಿ ಅವರ ಬೆಂಬಲ ಮುಂದುವರಿಯುತ್ತಿದೆ ಎಂದರು. ಅಂತೆಯೇ ಡೊಳ್ಳು ಚಿತ್ರದ ಮೂಲಕ ನಾನು ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರೂ, ರಾಮರಸ ನನ್ನ ಮೊದಲ ಕಮರ್ಷಿಯಲ್ ಚಿತ್ರವಾಗಿದೆ ಎಂದರು. ಬಿಗ್ ಬಾಸ್ ಮೂಲಕ ಚಿತ್ರೋದ್ಯಮದ ಬಗ್ಗೆ ಸಾಕಷ್ಚು ಕಲಿತಿದ್ದೇನೆ. ನಾನು ಹೆಚ್ಚು ಜನರನ್ನು ಮತ್ತು ಚಲನಚಿತ್ರ ಬಂಧುಬಳಗವನ್ನು ತಲುಪಿದ್ದೇನೆ, ಹಾಗಾಗಿ ಸಾಕಷ್ಟು ಅವಕಾಶಗಳು ನನ್ನನ್ನು ಸಂಪರ್ಕಿಸುತ್ತಿವೆ ಎಂದರು.

ರಾಮರಸ ಚಿತ್ರಕ್ಕೆ ಸಹಿ ಹಾಕುವ ಮುನ್ನ ನಾನು ಸುಮಾರು 20ಕ್ಕೂ ಹೆಚ್ಚು ಸ್ಕ್ರಿಪ್ಟ್‌ಗಳನ್ನು ಕೇಳಿದ್ದೆ. ನನ್ನ ಮೊದಲ ಚಿತ್ರ ಡೊಳ್ಳುನಲ್ಲಿ ಹಳ್ಳಿಯ ಯುವಕನಾಗಿ ಕಾಣಿಸಿಕೊಂಡಿದ್ದೆ. ಇದೀಗ ರಾಮರಸ ಚಿತ್ರದಲ್ಲಿ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಇದು ಪರಿಕಲ್ಪನೆ ಆಧಾರಿತ ವಾಣಿಜ್ಯ ಮನರಂಜನೆಯಾಗಿದೆ ಎಂದು ಕಾರ್ತಿಕ್ ಹೇಳಿದರು.

ನನ್ನ ಸಿನಿ ವೃತ್ತಿ ಜೀವನದ ಪ್ರತೀಯೊಂದು ಹೆಜ್ಜೆಗಳೂ ಕೂಡ ನನಗೆ ಪ್ರಮುಖ ಘಟ್ಟಗಳಾಗಿವೆ. ಆರಂಭದಲ್ಲಿ ನನಗೆ ಐಟಿ ಉದ್ಯೋಗ ಲಭಿಸಿತ್ತು. ಆದರೆ ಕೆಲಸಕ್ಕೆ ಸೇರಿದ ಮೊದಲ ದಿನವೇ ನನಗೆ ನನ್ನದು 9 to 5 ಉದ್ಯೋಗ ಮಾಡುವ ಪ್ರವೃತ್ತಿಯಲ್ಲ ಎಂದು.. ಈ ಬಗ್ಗೆ ನನ್ನ ತಂದೆ ಬಳಿ ಹೇಳಿಕೊಂಡೆ. ನನ್ನನ್ನು ಅರ್ಥ ಮಾಡಿಕೊಂಡ ಅವರು ನನಗೆ ಬೆಂಬಲಿಸಿದರು. ಅಂದಿನಿಂದ ನಾನು ಸಾಕಷ್ಟು ಆಡಿಷನ್ ಗಳಲ್ಲಿ ಪಾಲ್ಗೊಂಡಿದ್ದೇನೆ. ಸಾಮಾಜಿಕ ಜಾಲತಾಣಗಳಲ್ಲಿ ಆಡಿಷನ್ ನೀಡಿದ್ದೇನೆ. ಇಂದು ಇಲ್ಲಿ ಬಂದು ನಿಂತಿದ್ದೇನೆ. ಈ ಅನುಭವ ತುಂಬಾ ವಿಶಿಷ್ಠವಾದದ್ದು ಎಂದು ಕಾರ್ತಿಕ್ ಮಹೇಶ್ ಹೇಳಿದ್ದಾರೆ.

ಕಾರ್ತಿಕ್ ಮಹೇಶ್ ಜೊತೆಗೆ, ಚಿತ್ರ ತಯಾರಕರು ಜಿ-ಅಕಾಡೆಮಿ ಅಡಿಯಲ್ಲಿ ತರಬೇತಿ ಪಡೆದ 16 ಹೊಸ ಮುಖಗಳನ್ನು ಪರಿಚಯಿಸುತ್ತಿದ್ದಾರೆ. ರಾಮರಸ ಚಿತ್ರದಲ್ಲಿ ಬಾಲಾಜಿ ಮನೋಹರ್ ಸಹ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರಾಮರಸ ಮಾತ್ರವಲ್ಲದೇ ಕಾರ್ತಿಕ್ ಕೈಯಲ್ಲಿ ಮತ್ತೊಂದು ಚಿತ್ರ ಕೂಡ ಇದ್ದು, ಇದು ಪ್ರೀತಿ ಕಥೆಯಾಧಾರಿತವಾಗಿದೆ ಎಂದು ಕಾರ್ತಿಕ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT