ರಚಿತಾ ರಾಮ್ 
ಸಿನಿಮಾ ಸುದ್ದಿ

ಧರ್ಮೋ ರಕ್ಷತಿ ರಕ್ಷಿತಃ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನ; ನಟಿ ರಚಿತಾರಾಮ್ ಪ್ರತಿಕ್ರಿಯೆ!

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿದ್ದು, ಹಲವು ಜನಪ್ರಿಯ ವ್ಯಕ್ತಿಗಳು ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ಸ್ಯಾಂಡಲ್ ವುಡ್ ರಚಿತಾ ರಾಮ್ ಘಟನೆ ಕುರಿತು ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿದ್ದು, ಹಲವು ಜನಪ್ರಿಯ ವ್ಯಕ್ತಿಗಳು ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ಸ್ಯಾಂಡಲ್ ವುಡ್ ರಚಿತಾ ರಾಮ್ ಘಟನೆ ಕುರಿತು ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಈ ಸಂಬಂಧ ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಹಂಚಿಕೊಂಡಿರುವ ರಚಿತಾ ರಾಮ್, ಮೊದಲಿಗೆ ಧರ್ಮೋ ರಕ್ಷತಿ ರಕ್ಷಿತಃ ಎಂಬ ಸಾಲು ಬರೆದುಕೊಂಡಿದ್ದಾರೆ.

ನಮಸ್ಕಾರ,

ಈ ನೋಟ್‌ ನ ನಾನು ನಟಿಯಾಗಿ ಅಲ್ಲ, ಸಾಮಾನ್ಯ ಪ್ರಜೆಯಾಗಿ ಬರೆಯುತ್ತಿದ್ದೇನೆ. ಇತ್ತೀಚೆಗೆ ನಡೆದ ಪ್ರಕರಣದ ಬಗ್ಗೆ ನನ್ನ ಮಾತು…!

ಮೊದಲನೆಯದಾಗಿ ರೇಣುಕಾಸ್ವಾಮಿ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ಧೈರ್ಯ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ. ಈ ಹತ್ಯೆಗೆ ಕಾನೂನಾತ್ಮಕವಾಗಿ ನ್ಯಾಯ ಸಿಗುತ್ತದೆಂಬ ಭರವಸೆ ನನಗಿದೆ.

ನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿದ ದರ್ಶನ್ ಸರ್ ನನಗೆ ಗುರು ಸಮಾನರು. ನನ್ನ ಜೀವನದ ತಪ್ಪುಗಳನ್ನು ತಿದ್ದಿ ಮಾರ್ಗದರ್ಶನ ನೀಡಿದಂತಹ ವ್ಯಕ್ತಿ ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವುದನ್ನು ನಂಬಲು ಸ್ವಲ್ಪ ಕಷ್ಟವಾಗುತ್ತದೆ. ಏನಿದ್ರೂ ಸತ್ಯ ಪೊಲೀಸ್ ತನಿಖೆಯಿಂದ ನಮ್ಮ ಮುಂದೆ ಬರಲಿದೆ ಎನ್ನುವುದೇ ನನ್ನ ನಂಬಿಕೆ. ನನ್ನ ಮಾಧ್ಯಮ ಮಿತ್ರರು ಈ ಕೇಸ್‌ನ ವರದಿಯಲ್ಲಿ ಪಾದರ್ಶಕವಾಗಿರುತ್ತೀರಿ ಮತ್ತು ನಿಷ್ಪಕ್ಷವಾಗಿ ಕೆಲಸ ಮಾಡುತ್ತೀರಿ ಎಂದು ಆಶಿಸುತ್ತೇನೆ ಎಂದು ಸೋಶಿಯಲ್ ಮೀಡಿಯಾದಲ್ಲಿ ನಟಿ ರಚಿತಾ ರಾಮ್ ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT