ಪುಷ್ಪ-2 ಸಿನಿಮಾ ಸ್ಟಿಲ್ 
ಸಿನಿಮಾ ಸುದ್ದಿ

ಅಲ್ಲು ಅರ್ಜುನ್ ಅಭಿಮಾನಿಗಳಿಗೆ ತುಸು ಬೇಸರ: ಪುಷ್ಪ-2 ಸಿನಿಮಾ ರಿಲೀಸ್ ಡೇಟ್ ಮುಂದಕ್ಕೆ!

ಟಾಲಿವುಡ್‌ ನಟ ಅಲ್ಲು ಅರ್ಜುನ್‌ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಪುಷ್ಪ –2’ The ruler ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದೆ. 2024 ರ ಡಿಸೆಂಬರ್‌ 6ರಂದು ಎಲ್ಲಾ ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ.

ಬೆಂಗಳೂರು: ಟಾಲಿವುಡ್‌ ನಟ ಅಲ್ಲು ಅರ್ಜುನ್‌ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಪುಷ್ಪ –2’ The ruler ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದೆ. 2024 ರ ಡಿಸೆಂಬರ್‌ 6ರಂದು ಎಲ್ಲಾ ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ.

ಪುಷ್ಪ-2 ಸಿನಿಮಾದ ಬಿಡುಗಡೆಯನ್ನು ಐದು ತಿಂಗಳು ಮುಂದೂಡಲಾಗಿದೆ. ಪುಷ್ಪ 2 ಸಿನಿಮಾವನ್ನು ಆಗಸ್ಟ್‌ 5ರ ಬದಲಾಗಿ ಇದೇ ವರ್ಷದ ಡಿಸೆಂಬರ್‌ 6ರಂದು ಬಿಡುಗಡೆ ಮಾಡಲು ಚಿತ್ರತಂಡವು ತೀರ್ಮಾನಿಸಿದೆ. ಈ ಕುರಿತು ಅಲ್ಲು ಅರ್ಜುನ್‌ ಅವರೇ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದಾರೆ. ಇದರಿಂದಾಗಿ ಅಲ್ಲು ಅರ್ಜುನ್‌ ಅಭಿಮಾನಿಗಳಿಗೆ ತುಸು ಬೇಸರ ಉಂಟಾದಂತಾಗಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ ಮಾಡಿರುವ ಮೈತ್ರಿ ಮೂವೀಸ್‌ ನಿರ್ಮಾಣ ಸಂಸ್ಥೆ, ‘ನಾವು ನಿಮಗೆ (ಪ್ರೇಕ್ಷಕರಿಗೆ) ಅತ್ಯುತ್ತಮವಾದದ್ದನ್ನು ನೀಡಲು ಉದ್ದೇಶಿಸಿದ್ದೇವೆ. ದೊಡ್ಡ ಪರದೆಯ ಮೇಲೆ ಸ್ಮರಣೀಯ ಅನುಭವವನ್ನು ಪಡೆಯಲು ಕಾಯುವಿಕೆ ಹೆಚ್ಚಾಗುತ್ತಿದೆ. ಪುಷ್ಪ–ದಿ ರೂಲ್‌ 2024ರ ಡಿಸೆಂಬರ್‌ 6ರಂದು ವಿಶ್ವದಾದ್ಯಂತ ತೆರೆ ಕಾಣಲಿದೆ’ ಎಂದು ತಿಳಿಸಿದೆ.

ಅಲ್ಲು ಅರ್ಜುನ್‌ ವಿಧಾನಸಭೆ ಚುನಾವಣೆ ವೇಳೆ ನಂದಿಯಾಲ ವಿಧಾನಸಭೆ ಕ್ಷೇತ್ರದಲ್ಲಿ ವೈಎಸ್‌ಆರ್‌ಸಿಪಿ ಅಭ್ಯರ್ಥಿ ಪರ ಪ್ರಚಾರ ಮಾಡಿದ್ದರು. ಇದರಿಂದಾಗಿ ಮೆಗಾ ಸ್ಟಾರ್‌ ಕುಟುಂಬದ ಪವನ್‌ ಕಲ್ಯಾಣ್‌ ಅವರ ಅಭಿಮಾನಿಗಳ ಆಕ್ರೋಶಕ್ಕೆ ಅಲ್ಲು ಅರ್ಜುನ್‌ ಗುರಿಯಾಗಿದ್ದಾರೆ. ಅಲ್ಲದೆ, ಪುಷ್ಟ 2 ಸಿನಿಮಾವನ್ನು ನಾವು ವೀಕ್ಷಿಸುವುದಿಲ್ಲ, ಬಾಯ್ಕಾಟ್‌ ಮಾಡುತ್ತೇವೆ ಎಂಬುದಾಗಿ ಪವರ್‌ ಸ್ಟಾರ್‌ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗಾಗಿಯೇ, ಸಿನಿಮಾ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.

ಮತ್ತೊಂದಿಷ್ಟು ಮೂಲಗಳ ಪ್ರಕಾರ, ನಿರ್ದೇಶಕ ಸುಕುಮಾರ್ ಇನ್ನೂ ಚಿತ್ರದ ಶೂಟಿಂಗ್ ಮತ್ತು ಪೋಸ್ಟ್ ಪ್ರೊಡಕ್ಷನ್ ಹಂತದ ಕೆಲಸಗಳಲ್ಲಿ ನಿರತರಾಗಿರುವುದರಿಂದ ಸಿನಿಮಾ ಬಿಡುಗಡೆಯ ದಿನಾಂಕವನ್ನು ಮುಂದೂಡಲಾಗಿದೆ ಎಂದು ಹೇಳಲಾಗುತ್ತಿದೆ. ಇನ್ನೂ ಒಂದು ತಿಂಗಳ ಶೂಟಿಂಗ್ ಬಾಕಿಯಿದ್ದು ಜುಲೈ ವೇಳೆಗೆ ಚಿತ್ರೀಕರಣ ಪೂರ್ಣಗೊಳಿಸುವ ಗುರಿಯನ್ನು ಸುಕುಮಾರ್ ಹೊಂದಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್