ಪೌಡರ್ ಸಿನಿಮಾ ಸ್ಟಿಲ್ 
ಸಿನಿಮಾ ಸುದ್ದಿ

'ಪೌಡರ್' ಸಿನಿಮಾ ರಿಲೀಸ್ ಡೇಟ್ ಬದಲು: ಇಲ್ಲಿದೆ ಹೊಸ ಅಪ್ ಡೇಟ್!

ಕೆ.ಆರ್‌.ಜಿ ಸ್ಟೂಡಿಯೋಸ್‌ ಮತ್ತು ಟಿ.ವಿ.ಎಫ್‌ ಮೋಷನ್‌ ಪಿಕ್ಚರ್ಸ್‌ನ ಚೊಚ್ಚಲ ಸಹಯೋಗದ 'ಪೌಡರ್' ಸಿನಿಮಾ ರಿಲೀಸ್ ದಿನಾಂಕ ಬದಲಾಗಿದೆ. ಈ ಹಿಂದೆ ಜುಲೈ 14ಕ್ಕೆ ರಿಲೀಸ್ ಮಾಡಲು ಪ್ಲಾನ್ ಮಾಡಲಾಗಿತ್ತು.

ಕೆ.ಆರ್‌.ಜಿ ಸ್ಟೂಡಿಯೋಸ್‌ ಮತ್ತು ಟಿ.ವಿ.ಎಫ್‌ ಮೋಷನ್‌ ಪಿಕ್ಚರ್ಸ್‌ನ ಚೊಚ್ಚಲ ಸಹಯೋಗದ 'ಪೌಡರ್' ಸಿನಿಮಾ ರಿಲೀಸ್ ದಿನಾಂಕ ಬದಲಾಗಿದೆ. ಈ ಹಿಂದೆ ಜುಲೈ 14ಕ್ಕೆ ರಿಲೀಸ್ ಮಾಡಲು ಪ್ಲಾನ್ ಮಾಡಲಾಗಿತ್ತು, ಆದರೆ ಈಗ ಹೊಸ ಡೇಟ್ ಫಿಕ್ಸ್ ಮಾಡಲಾಗಿದೆ.

ರಜಾ ದಿನಗಳಲ್ಲಿ ಬಿಡುಗಡೆ ಮಾಡುವ ಉದ್ದೇಶದಿಂದ ಈ ಬದಲಾವಣೆ ಮಾಡಲಾಗಿದೆ. ಜನರನ್ನು ಥಿಯೇಟರ್ ಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಕರೆತರುವ ಉದ್ದೇಶ ಹೊಂದಲಾಗಿದೆ. ಆಗಸ್ಟ್ 15 ರಂದು ಸಿನಿಮಾ ರಿಲೀಸ್ ಆಗಲಿದೆ. ಚಿತ್ರದಲ್ಲಿ ದಿಗಂತ್ ಮಂಚಾಲೆ, ಧನ್ಯ ರಾಮ್‌ಕುಮಾರ್, ಶರ್ಮಿಳಾ ಮಾಂಡ್ರೆ ಮತ್ತು ರಂಗಾಯಣ ರಘು ನಟಿಸಿದ್ದಾರೆ. ಈಗ ಪೋಸ್ಟ್-ಪ್ರೊಡಕ್ಷನ್‌ ಹಂತದಲ್ಲಿರುವ ಚಿತ್ರಕ್ಕೆ ಸಂಕೀರ್ಣವಾದ ಕಂಪ್ಯೂಟರ್ ಗ್ರಾಫಿಕ್ಸ್ ಕೆಲಸದ ಅಗತ್ಯವಿದೆ ಎಂದು ಮೂಲವೊಂದು ತಿಳಿಸಿದೆ. ಹೀಗಾಗಿ ಸಿನಿಮಾ ಬಿಡುಗಡೆ ವಿಳಂಬಕ್ಕೆ ಕಾರಣವಾಗಿದೆ.

ಪೌಡರ್ ಸಿನಿಮಾದ ಕೊನೆಯ 15 ನಿಮಿಷಗಳು ಪ್ರೇಕ್ಷಕರಿಗೆ ರೋಲರ್ ಕೋಸ್ಟರ್ ರೈಡ್ ನಂತೆ ಭಾಸವಾಗುತ್ತದೆ. ರೋಮಾಂಚಕ, ಹಿಂದೆಂದೂ ನೋಡಿರದ ಅನುಭವ ನೀಡಲಿದೆ. ಪೌಡರ್ ಶೀಘ್ರವಾಗಿ ಶ್ರೀಮಂತರಾಗಲು ಯೋಜನೆ ರೂಪಿಸುವ ಯುವಕರ ಗುಂಪಿನ ದುಸ್ಸಾಹಸಗಳ ಬಗ್ಗೆ ಹೆಣೆದ ಕಥೆಯಾಗಿದೆ. ಬೇಗನೆ ಶ್ರೀಮಂತರಾಗಲು ಅವರು ಮಾಡುವ ಯೋಜನೆಗಳು ನಿರಂತರವಾಗಿ ವಿಫಲಗೊಳ್ಳುತ್ತವೆ ಏಕೆಂದರೆ ಅವರು ದಾರಿಯುದ್ದಕ್ಕೂ ಶತ್ರುಗಳು ಮತ್ತು ಹಲವು ರೀತಿಯ ಏರಿಳಿತಗಳನ್ನು ಎದುರಿಸುತ್ತಾರೆ.

ಈ ಚಿತ್ರವನ್ನು ಜನಾರ್ಧನ್ ಚಿಕ್ಕಣ್ಣ ನಿರ್ದೇಶಿಸಿದ್ದಾರೆ, ಟಿವಿಎಫ್ ಜೊತೆಗೆ ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ನಿರ್ಮಿಸಿದ್ದಾರೆ. ಮುಂದಿನ ವಾರದಲ್ಲಿ ಪೌಡರ್‌ನ ಮೊದಲ ಹಾಡು ಬಿಡುಗಡೆಯಾಗಲಿದೆ. ಪ್ರಸಿದ್ಧ Rapper ಎಂಸಿ ಬಿಜ್ಜು ಮತ್ತು ವಾಸುಕಿ ವೈಭವ್ ಸಹಯೋಗದಲ್ಲಿ ಹಾಡು ಮೂಡಿ ಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ರಧಾನಿ ಮೋದಿ ಎರಡು ದಿನಗಳ ಇಸ್ರೇಲ್‌ ಪ್ರವಾಸ ಆರಂಭ; ಸಂಸತ್ತು ನೆಸ್ಸೆಟ್ ಭಾಷಣ ಮಾಡುವ ಮೊದಲ ಭಾರತ ಪ್ರಧಾನಿ-Video

'ಮತ್ತೆ ವೈಭವದತ್ತ ಮರಳಿದ್ದೇವೆ, ಹಿಂದೆಂದಿಗಿಂತ ಶ್ರೀಮಂತ ಮತ್ತು ಬಲಿಷ್ಠರಾಗಿದ್ದೇವೆ': ದೇಶವನ್ನುದ್ದೇಶಿಸಿ Donald Trump ಭಾಷಣ-Video

'ಸಂಪುಟಕ್ಕೆ ಹೊಸ ಪೀಳಿಗೆ, ಹೊಸ ಆಲೋಚನೆ ಇರುವವರು ಸೇರಬೇಕು, ನಾವು ಎಷ್ಟು ದಿನ ಗೂಟ ಹೊಡೆದುಕೊಂಡು ಕೂರಲು ಸಾಧ್ಯ'?: ಡಿ ಕೆ ಶಿವಕುಮಾರ್

ಕೇರಳ- ಕೇರಳಂ: ಯಾವುದೇ ಪ್ರಯೋಜನವಿಲ್ಲ, ಹೆಸರು ಬದಲಿಸುವ ಬದಲು ಹೆಚ್ಚಿನ ಅನುದಾನ ಘೋಷಿಸಿ; ಅಚ್ಚರಿ ಮೂಡಿಸಿದ ಶಶಿ ತರೂರ್ ವಿರೋಧ!

ಕೃಷಿ ಭೂಮಿ ಸೇರಿದಂತೆ ಎಲ್ಲಾ ಸ್ವತ್ತಿಗೂ ಸ್ವಯಂ ಚಾಲಿತ ಮ್ಯುಟೇಷನ್‌: ಕಂದಾಯ ಸಚಿವ ಕೃಷ್ಣಬೈರೇಗೌಡ

SCROLL FOR NEXT