ಯುವ ರಾಜಕುಮಾರ್-ಸಪ್ತಮಿ ಗೌಡ 
ಸಿನಿಮಾ ಸುದ್ದಿ

ನಟ ಯುವ ದಾಂಪತ್ಯದಲ್ಲಿ ಬಿರುಕು: ನನ್ನದೂ ತಪ್ಪಿದೆ; ನಟಿ ಸಪ್ತಮಿ ಗೌಡ ಆಡಿಯೋ ವೈರಲ್

ಶ್ರೀದೇವಿ ಹಾಗೂ ಯುವ ದಾಂಪತ್ಯದಲ್ಲಿ ಬಿರುಕು ಮೂಡಲು ಸಪ್ತಮಿ ಗೌಡ ಕಾರಣ ಎಂಬ ವಾದವನ್ನೂ ಅನೇಕರು ಮಾಡುತ್ತಿದ್ದಾರೆ. ಇನ್ನೂ 'ಯುವ' ಸಿನಿಮಾದ ಸೆಟ್​ನಲ್ಲಿಯೇ ಶ್ರೀದೇವಿ ಬಂದು ಜಗಳ ಸಹ ಮಾಡಿದ್ದರು ಎಂಬ ಮಾತು ಕೂಡ ಕೇಳಿ ಬರುತ್ತಿದೆ.

ನಟ ಯುವ ರಾಜ್​ಕುಮಾರ್ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಯುವ ರಾಜ್​ಕುಮಾರ್ ತಮ್ಮ ಪತ್ನಿ ಶ್ರೀದೇವಿಯಿಂದ ವಿಚ್ಛೇದನ ಬಯಸಿ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಹಾಕಿದ್ದಾರೆ. ಮಾಧ್ಯಮಗಳ ಮುಂದೆ ಯುವ ಪರ ವಕೀಲರು, ಶ್ರೀದೇವಿ ವಿರುದ್ಧ ಹಲವು ಆರೋಪಗಳನ್ನು ಸಹ ಮಾಡಿದ್ದರು.

ವಿಚ್ಛೇದನ ಅರ್ಜಿಯಲ್ಲಿ ಸಹ ಅನೈತಿಕ ಸಂಬಂಧದ ಆರೋಪ ಮಾಡಲಾಗಿತ್ತು. ಅದಕ್ಕೆ ಪ್ರತಿಯಾಗಿ ಶ್ರೀದೇವಿ ಸಹ ಯುವ ವಿರುದ್ಧ ಅನೈತಿಕ ಸಂಬಂಧದ ಆರೋಪ ಮಾಡಿದ್ದರು. ನಟಿ ಸಪ್ತಮಿ ಗೌಡ ಹೆಸರು ಈ ಪ್ರಕರಣದಲ್ಲಿ ಪ್ರಮುಖವಾಗಿ ಕೇಳಿ ಬಂದಿತ್ತು. ಇದೀಗ ಸಪ್ತಮಿ ಗೌಡ ಅವರದ್ದು ಎನ್ನಲಾದ ಆಡಿಯೋ ಇದೀಗ ವೈರಲ್ ಆಗಿದೆ.

‘ಹೌದು ನನ್ನಿಂದ ಹಲವರಿಗೆ ನೋವಾಗಿದೆ. ನನ್ನದು ತಪ್ಪಿಲ್ಲ ಎಂದು ನಾನು ಹೇಳುವುದಿಲ್ಲ. ಆದರೆ ನಾನು ಗುರು (ಯುವ ಮೂಲ ಹೆಸರು) ನಂಬಿ ಮಾಡಿದೆ. ನಿಮ್ಮ ಸೆಟ್ ಅಲ್ಲಿ ಆಗಿದೆ, ಸಾರಿ ಸರ್’ ಎಂಬ ಮಾತುಗಳು ಆಡಿಯೋನಲ್ಲಿವೆ. ಈ ಆಡಿಯೋವನ್ನು ಸಪ್ತಮಿ, ವಿಜಯ್ ಕಿರಗಂದೂರು ಅವರಿಗೆ ಕಳಿಸಿದ್ದಾರೆ ಎನ್ನಲಾಗುತ್ತಿದೆ.

‘ಗುರು ಬಂದು ಎಲ್ಲವನ್ನೂ ಹೇಳಿಕೊಂಡ ಮೇಲೆ ನಾನು ಮುಂದುವರೆದೆ. ಅದು ನಿಮ್ಮ ಸೆಟ್​ನಲ್ಲಿ ಆಯ್ತು, ಆಗಬಾರದಿತ್ತು, ಬೇಸರವಿದ್ದರೆ ದಯವಿಟ್ಟು ಕ್ಷಮಿಸಿ, ನನ್ನ ಸೈಡ್ ಆಫ್ ದಿ ಸ್ಟೋರಿ ಸಹ ದಯವಿಟ್ಟು ಕೇಳಿಸಿಕೊಳ್ಳಿ. ಯಾವತ್ತಾದರೂ ಸಪ್ತಮಿ ಇಷ್ಟು ಕೆಟ್ಟವಳು ಎಂದು ಅಂದುಕೊಳ್ಳುವ ಮುಂಚೆ ಏನಾಯಿತು ಎಂದು ನನ್ನಿಂದ ಒಮ್ಮೆ ಕೇಳಿಸಿಕೊಳ್ಳಿ’ ಎಂಬ ಮಾತುಗಳು ಆಡಿಯೋನಲ್ಲಿದೆ.

‘ನಾನು ಮೊದಲಿನಿಂದಲೂ ಹೇಳುತ್ತಲೇ ಇದ್ದೆ, ಇದೆಲ್ಲ ವರ್ಕೌಟ್ ಆಗಲ್ಲ ಎಂದು. ಅಲ್ಲದೆ ನಾನು ಎಂದಿಗೂ ಸಹ ಫ್ಯಾಮಿಲಿ ಬಿಟ್ಟು ಬಾ, ಪತ್ನಿ ಜೊತೆ ಬ್ರೇಕ್ ಅಪ್ ಮಾಡಿಕೊ ಎಂದು ಹೇಳಿಲ್ಲ ಸರ್ ನನ್ನನ್ನು ನಂಬಿ. ಬೇಕಾದರೆ ನನ್ನನ್ನು ಬೈಯ್ಯಿರಿ, ಗುರು (ಯುವ)ಗೆ ಅದು ಮೊದಲ ಸಿನಿಮಾ. ನಿಮಗೂ ಸಹ ಬಹಳ ಮುಖ್ಯವಾದ ಸಿನಿಮಾ. ನನಗೆ ಗೊತ್ತಿದೆ. ಯಾರಿಗೂ ತೊಂದರೆ ಆಗಬಾರದು ಸರ್. ನಾನು ಇದನ್ನು ಇನ್ನಷ್ಟು ಕಾಂಪ್ಲೆಕ್ಸ್ ಮಾಡುವುದಿಲ್ಲ. ಬೈಯ್ಯುವುದಾದರೆ ಬೈಯ್ಯಿರಿ’ ಎಂದು ಸಪ್ತಮಿ ಅವರದ್ದು ಎನ್ನಲಾದ ಆಡಿಯೋನಲ್ಲಿ ಹೇಳಲಾಗಿದೆ.

ಶ್ರೀದೇವಿ ಹಾಗೂ ಯುವ ದಾಂಪತ್ಯದಲ್ಲಿ ಬಿರುಕು ಮೂಡಲು ಸಪ್ತಮಿ ಗೌಡ ಕಾರಣ ಎಂಬ ವಾದವನ್ನೂ ಅನೇಕರು ಮಾಡುತ್ತಿದ್ದಾರೆ. ಇನ್ನೂ 'ಯುವ' ಸಿನಿಮಾದ ಸೆಟ್​ನಲ್ಲಿಯೇ ಶ್ರೀದೇವಿ ಬಂದು ಜಗಳ ಸಹ ಮಾಡಿದ್ದರು ಎಂಬ ಮಾತು ಕೂಡ ಕೇಳಿ ಬರುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT