ರವಿಚಂದ್ರನ್ - ಸೋನಲ್ ಮೊಂತೆರೋ - ರಘು ಭಟ್ 
ಸಿನಿಮಾ ಸುದ್ದಿ

'ಪರವಶ' ಚಿತ್ರದಲ್ಲಿ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ ರವಿಚಂದ್ರನ್, ಸೋನಲ್ ಮೊಂತೆರೋ, ರಘು ಭಟ್

ನಟ ರವಿಚಂದ್ರನ್, ಗೌರಿಶಂಕರ್ ಮತ್ತು ದಿ ಜಡ್ಜ್‌ಮೆಂಟ್ ಸೇರಿದಂತೆ ನಾಲ್ಕು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಇದರೊಂದಿಗೆ ಧೃವ ಸರ್ಜಾ ಅಭಿನಯದ ಕೆಡಿ - ದಿ ಡೆವಿಲ್ ಚಿತ್ರದಲ್ಲಿಯೂ ಮಹತ್ವದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇವುಗಳ ಹೊರತಾಗಿ, ಅವರು ಇತ್ತೀಚೆಗೆ 'ಪರವಶ' ಎಂಬ ಮತ್ತೊಂದು ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಸದ್ಯ ಡ್ರಾಮಾ ಜೂನಿಯರ್ಸ್ ರಿಯಾಲಿಟಿ ಶೋನಲ್ಲಿ ಬ್ಯುಸಿಯಾಗಿರುವ ನಟ ರವಿಚಂದ್ರನ್, ಗೌರಿಶಂಕರ್ ಮತ್ತು ದಿ ಜಡ್ಜ್‌ಮೆಂಟ್ ಸೇರಿದಂತೆ ನಾಲ್ಕು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಇದರೊಂದಿಗೆ ಧೃವ ಸರ್ಜಾ ಅಭಿನಯದ ಕೆಡಿ - ದಿ ಡೆವಿಲ್ ಚಿತ್ರದಲ್ಲಿಯೂ ಮಹತ್ವದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇವುಗಳ ಹೊರತಾಗಿ, ಅವರು ಇತ್ತೀಚೆಗೆ 'ಪರವಶ' ಎಂಬ ಮತ್ತೊಂದು ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಚಿತ್ರದ ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಗಿದೆ.

ಸುಧೀಂದ್ರ ನಾಡಿಗರ್ ನಿರ್ದೇಶನದ ಮತ್ತು ಅವ್ಯಕ್ತ ಸಿನಿಮಾಸ್ ಅಡಿಯಲ್ಲಿ ಹರೀಶ್ ಗೌಡ ನಿರ್ಮಾಣದ ಪರವಶ ಚಿತ್ರದಲ್ಲಿ ರವಿಚಂದ್ರನ್ ಜೊತೆಗೆ ರಘು ಭಟ್, ರಾಜೇಶ್ ನಟರಂಗ, ಸುಜಯ್ ಶಾಸ್ತ್ರಿ, ಪವಿತ್ರಾ ಲೋಕೇಶ್, ಅನನ್ಯಾ ಮತ್ತು ಇತರರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಹೊಸ ತಂಡದೊಂದಿಗೆ ಕೆಲಸ ಮಾಡುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿರುವ ರವಿಚಂದ್ರನ್, 'ನಾನು ಈ ಹಿಂದೆ ಮಾಡಿದ್ದಕ್ಕಿಂತ ಭಿನ್ನವಾದ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಚಿತ್ರದಲ್ಲಿ ನನ್ನ ಭಾಗವು ಪೂರ್ಣಗೊಂಡಿದೆ ಮತ್ತು ಸುಧೀಂದ್ರ ನಾಡಿಗರ ನಿರ್ದೇಶನದ ಶೈಲಿಯು ನನಗೆ ಸಾಕಷ್ಟು ಇಷ್ವವಾಗಿದೆ' ಎಂದರು.

ಚಿತ್ರದ ಪೋಸ್ಟರ್ ಅನ್ನು ರವಿಚಂದ್ರನ್ ಮತ್ತು ಚಿತ್ರದಲ್ಲಿ ನಾಯಕಿಯಾಗಿ ನಟಿಸಿರುವ ಸೋನಲ್ ಮೊಂತೆರೋ ಬಿಡುಗಡೆ ಮಾಡಿದರು.

ಚಿತ್ರದ ತಾರಾಗಣದ ಭಾಗವಾಗಿರುವ ರಾಘವೇಂದ್ರ ರಾಜ್‌ಕುಮಾರ್ ಅವರೇ 'ಪರವಶ'ಕ್ಕೆ ಕಥೆಯನ್ನು ಬರೆದಿದ್ದಾರೆ. ಅವರ ಪ್ರಕಾರ, ಚಿತ್ರವು ಥ್ರಿಲ್ಲರ್, ಫ್ಯಾಮಿಲಿ ಎಂಟರ್‌ಟೈನರ್ ಮತ್ತು ರೊಮ್ಯಾನ್ಸ್‌ನ ಮಿಶ್ರಣವಾಗಿದ್ದು, ಪ್ರೇಕ್ಷಕರ ವಿವಿಧ ಸಂವೇದನೆಗಳನ್ನು ಪೂರೈಸುತ್ತದೆ. ಚಿತ್ರದ ಕೆಲವು ಭಾಗಗಳ ಚಿತ್ರೀಕರಣ ಬಾಕಿ ಇದೆ. ಪರವಶ ಚಿತ್ರದ ಚಿತ್ರೀಕರಣ ಮಂಗಳೂರು, ಉಡುಪಿ, ಮಣಿಪಾಲ, ಕುಂದಾಪುರದಲ್ಲಿ ನಡೆದಿದೆ. ಸಚಿನ್ ಬಸ್ರೂರ್ ಅವರ ಸಂಗೀತವಿರುವ ಈ ಚಿತ್ರಕ್ಕೆ ಆನಂದ್ ಮೀನಾಕ್ಷಿ ಅವರ ಛಾಯಾಗ್ರಹಣ ಮತ್ತು ಪ್ರತೀಕ್ ಶೆಟ್ಟಿ ಅವರ ಸಂಕಲನವೂ ಇರುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT