ನಟ ಶಿವರಾಜ್ ಕುಮಾರ್  
ಸಿನಿಮಾ ಸುದ್ದಿ

'ಮಫ್ತಿ' ಪ್ರೀಕ್ವೆಲ್‌ 'ಭೈರತಿ ರಣಗಲ್‌' ಸ್ವಾತಂತ್ಯ ದಿನ ತೆರೆಗೆ

ಶಿವರಾಜ್ ಕುಮಾರ್ ಹೋಮ್ ಬ್ಯಾನರ್ ಗೀತಾ ಪಿಕ್ಚರ್ಸ್ ನಿರ್ಮಾಣವಾಗುತ್ತಿರುವ ಚಿತ್ರ

ಬೆಂಗಳೂರು: ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಅವರು ಒಂದೆಡೆ ತಮ್ಮ ಕರಟಕ ದಮನಕ ಚಿತ್ರ ಬಿಡುಗಡೆಯಾದ ಖುಷಿಯಲ್ಲಿದ್ದರೆ ಮತ್ತೊಂದೆಡೆ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಈ ನಡುವೆ ತಮ್ಮ ಹೋಂ ಬ್ಯಾನರ್ ನಲ್ಲಿ ತಯಾರಾಗುತ್ತಿರುವ ಭೈರತಿ ರಣಗಲ್ ಚಿತ್ರ ಬಿಡುಗಡೆ ದಿನಾಂಕವನ್ನು ಇಂದು ಘೋಷಿಸಿದ್ದಾರೆ.

ಭೈರತಿ ರಣಗಲ್‌ನ ಕ್ಲೈಮ್ಯಾಕ್ಸ್ ಚಿತ್ರೀಕರಣ ಇತ್ತೀಚೆಗೆ ನೆರವೇರಿತ್ತು. ಈ ವರ್ಷದ ಕೊನೆಗೆ ಚಿತ್ರವನ್ನು ತೆರೆಗೆ ತರುವುದಾಗಿ ಅಭಿಮಾನಿಗಳಿಗೆ ಮಾತು ಕೊಟ್ಟಿದ್ದ ನಟ ಶಿವರಾಜ್ ಕುಮಾರ್ ಇದೀಗ ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆಯಂದೇ ತೆರೆಗೆ ಬರುವುದಾಗಿ ತಿಳಿಸಿದ್ದಾರೆ.

ನರ್ತನ್ ನಿರ್ದೇಶನದ ಈ ಚಿತ್ರವು 2017ರಲ್ಲಿ ತೆರೆಕಂಡಿದ್ದ ಮಫ್ತಿ ಚಿತ್ರದ ಪ್ರೀಕ್ವೆಲ್ ಆಗಿದ್ದು, ಶಿವರಾಜ್ ಕುಮಾರ್ ಪಾತ್ರವನ್ನು ಕೇಂದ್ರೀಕರಿಸಿದೆ. ಶಿವಣ್ಣ- ಶ್ರೀಮುರಳಿ ನಟನೆಯ ‘ಮಫ್ತಿ’ ಸಿನಿಮಾ 2017ರಲ್ಲಿ ರಿಲೀಸ್ ಆಗಿ ಗಲ್ಲಾಪೆಟ್ಟಿಗೆಯಲ್ಲಿ ಸೌಂಡ್ ಮಾಡಿತ್ತು. ಇದೀಗ ಚಿತ್ರದ ಪ್ರೀಕ್ವೆಲ್‌ನಲ್ಲಿ ಶಿವಣ್ಣ ಪಾತ್ರದ ಅಸಲಿ ಕಥೆ ಶುರುವಾಗಲಿದೆ. ಹೊರ ಜಗತ್ತಿಗೆ ಹಣ ಮಾಡುವ, ಮೋಸ ಮಾಡುವ ವ್ಯಕ್ತಿಯಂತೆ ಕಾಣುವ ಈ ವ್ಯಕ್ತಿಯ ನಿಜವಾದ ವ್ಯಕ್ತಿತ್ವ ನಂತರದಲ್ಲಿ ಅನಾವರಣ ಆಗುತ್ತಾ ಹೋಗುತ್ತದೆ. ಆ ವ್ಯಕ್ತಿಯ ಹಿಂದಿನ ಕಥೆ ‘ಭೈರತಿ ರಣಗಲ್’ ಚಿತ್ರದಲ್ಲಿ ಇರಲಿದೆ.

ಚಿತ್ರದಲ್ಲಿ ಶಿವರಾಜಕುಮಾರ್‌ಗೆ ಜೋಡಿಯಾಗಿ ಸಪ್ತ ಸಾಗರದಾಚೆ ಎಲ್ಲೋ ಖ್ಯಾತಿಯ ರುಕ್ಮಿಣಿ ವಸಂತ್ ನಟಿಸಿದ್ದಾರೆ. ಈ ಚಿತ್ರವನ್ನು ಶಿವರಾಜ್ ಕುಮಾರ್ ಹೋಮ್ ಬ್ಯಾನರ್ ಗೀತಾ ಪಿಕ್ಚರ್ಸ್ ನಿರ್ಮಿಸುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

Street Dog attack: ಬೀದಿ ನಾಯಿ ಸಮಸ್ಯೆಗೆ ಉಪಾಯ ಕಂಡುಕೊಂಡ ಗದಗ ಜನತೆ, ಕಾಟದಿಂದ ಮುಕ್ತಿಗೆ ಬಣ್ಣ ನೀರಿನ ಪ್ರಯೋಗ..!

ನಮ್ಮವರು ಬೇರೆ ಧರ್ಮದವರ ಪ್ರಾರ್ಥನೆ ಸ್ಥಳಗಳಿಗೆ ಹೋಗುವುದಿಲ್ಲವೇ? ಯದುವೀರ್ ಬಿಜೆಪಿ ಜೊತೆ ಸೇರಿ ಇತಿಹಾಸ ಮರೆತಿದ್ದಾರೆ: DKS

SCROLL FOR NEXT