ಸಿನಿಮಾ ಸುದ್ದಿ

'ಮರ್ಯಾದೆ ಪ್ರಶ್ನೆ' ಗುಟ್ಟು ರಟ್ಟು: ಆರ್ ಜೆ ಪ್ರದೀಪ ನಿರ್ಮಾಣ; ನಾಗರಾಜ್ ಸೋಮಯಾಜಿ ನಿರ್ದೇಶನ

ಸ್ಯಾಂಡಲ್‌ವುಡ್‌ನಲ್ಲಿ ಇತ್ತೀಚೆಗೆ ಮರ್ಯಾದೆ ಪ್ರಶ್ನೆ ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಸೆಲೆಬ್ರಿಟಿಗಳೆಲ್ಲ ಕೆಲ ವಿಷಯಗಳನ್ನು ಹೇಳಿಕೊಂಡು ಮರ್ಯಾದೆ ಪ್ರಶ್ನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದರು. ಆದರೆ, ಕೊನೆಗೂ ಈ ಮರ್ಯಾದೆ ಪ್ರಶ್ನೆ ಹ್ಯಾಷ್‌ಟ್ಯಾಗ್‌ಗೆ ಉತ್ತರ ಸಿಕ್ಕಿದೆ.

ಸ್ಯಾಂಡಲ್‌ವುಡ್‌ನಲ್ಲಿ ಇತ್ತೀಚೆಗೆ ಮರ್ಯಾದೆ ಪ್ರಶ್ನೆ ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಸೆಲೆಬ್ರಿಟಿಗಳೆಲ್ಲ ಕೆಲ ವಿಷಯಗಳನ್ನು ಹೇಳಿಕೊಂಡು ಮರ್ಯಾದಿ ಪ್ರಶ್ನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದರು. ಆದರೆ, ಕಡೆಗೂ ಈ ಮರ್ಯಾದೆ ಪ್ರಶ್ನೆ ಹ್ಯಾಷ್‌ಟ್ಯಾಗ್‌ಗೆ ಉತ್ತರ ಸಿಕ್ಕಿದೆ.

ಇದೊಂದು ಸಿನಿಮಾ ಟೈಟಲ್ ಆಗಿದ್ದು, ಸಕ್ಕತ್ ಸ್ಡುಡಿಯೋಸ್ ಆರ್‌ಜೆ ಪ್ರದೀಪ್ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಚಿತ್ರಕ್ಕೆ 'ದುಡ್ಡಿರೋರ‍್ಗೆ ಎಲ್ಲಾ, ದುಡಿಯೋರಿಗೆ ಏನೂ ಇಲ್ಲ' ಎನ್ನುವ ಟ್ಯಾಗ್‌ಲೈನ್ ನೀಡಲಾಗಿದೆ. ಚಿತ್ರವು ಮಧ್ಯಮ ವರ್ಗದ ಸ್ಟೋರಿ ಆಗಿದ್ದು, ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕಾರ್ಯದಲ್ಲಿ ಚಿತ್ರತಂಡ ನಿರತವಾಗಿದೆ. ಶೀಘ್ರದಲ್ಲೇ ಚಿತ್ರದ ತಾರಾಬಳಗ ರಿವೀಲ್ ಆಗಲಿದೆ.

ಸಕ್ಕತ್ ಸ್ಟುಡಿಯೋ ಮೂಲಕ ವೆಬ್ ಸೀರೀಸ್ (ಲೂಸ್ ಕನೆಕ್ಷನ್ ಮತ್ತು ಹನಿಮೂನ್) ನಿರ್ಮಾಣ ಮಾಡಿದ್ದ ಆರ್ ಜೆ ಪ್ರದೀಪ ಇದೇ ಮೊದಲ ಬಾರಿಗೆ ಸಿನಿಮಾ ನಿರ್ಮಾಣ ಮಾಡಿದ್ದು, ಚಿತ್ರದ ಮೂಲಕ ಸ್ಯಾಂಡಲ್ ವುಡ್'ಗೆ ಪಾದಾರ್ಪಣೆ ಮಾಡುತ್ತಿದ್ದಾರೆ.

ದಿ ಬೆಸ್ಟ್ ಆಕ್ಟರ್ ಎಂಬ 43 ನಿಮಿಷಗಳ ಕಿರುಚಿತ್ರ ನಿರ್ದೇಶಿಸಿದ್ದ ಹಾಗೂ ಪುಕ್ಸಟ್ಟೆ ಲೈಫು ಚಿತ್ರ ನಿರ್ಮಿಸಿದ್ದ ನಾಗರಾಜ್ ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ.

ಇದು ಮಧ್ಯಮವರ್ಗದವರ ಭಾವನೆಗಳನ್ನು ಹೇಳುವ ಸಿನಿಮಾ. ‘ದುಡ್ಡಿರೋರಿಗೆ ಎಲ್ಲಾ ದುಡಿಯೋರಿಗೆ ಏನೂ ಇಲ್ಲ’ ಎಂಬ ಲೈನ್ ಮೇಲೆ ಸಿನಿಮಾದ ಕಥೆ ಸಾಗಲಿದೆ. ಯಾವಾಗಲೋ ಒಮ್ಮೆ ದುಡ್ಡು ಮಾಡುತ್ತೇವೆ. ಆ ಹೋಪ್​ನಲ್ಲೇ ಎಲ್ಲರೂ ಬದುಕುತ್ತಿರುತ್ತೇವೆ. ಆ ಎಮೋಷನ್​ ಸಿನಿಮಾದಲ್ಲಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ.

ಚಿತ್ರದ ಚಿತ್ರೀಕರಣ ಬೆಂಗಳೂರು ಹಾಗೂ ಚಾಮರಾಜಪೇಟೆ ಸುತ್ತಮುತ್ತ ನಡೆಸಲಾಗಿದೆ. ಚಿತ್ರವು ನೈಜ ವಿಧಾನವನ್ನು ಅಳವಡಿಸಿಕೊಂಡಿದೆ, ಥ್ರಿಲ್ಲರ್ ಅಂಶಗಳೊಂದಿಗೆ ಚಿತ್ರಕಥೆ ಸಾಗಲಿದೆ. ನಿರ್ದೇಶನದ ಜೊತೆಗೆ ಚಿತ್ರಕ್ಕೆ ಚಿತ್ರಕಥೆ, ಸಂಭಾಷಣೆಯನ್ನೂ ಬರೆದಿದ್ದೇನೆ ಎಂದು ನಾಗರಾಜ್ ಹೇಳಿದ್ದಾರೆ.

ಚಿತ್ರಕ್ಕೆ ಸಂದೀಪ್ (ಗೌಳಿ, ಸಕುಟುಂಬ ಸಮೇತ) ಅವರ ಕ್ಯಾಮೆರಾ ಕೈಚಳಕ ತೋರಿಸಿದ್ದು, ಅರ್ಜುನಾ ರಾಮು (ಬ್ಯಾಚುಲರ್ ಪಾರ್ಟಿ) ಅವರು ಸಂಗೀತ ಸಂಯೋಜಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT