ವರ್ತೂರ್ ಸಂತೋಷ್-ಜಗ್ಗೇಶ್ 
ಸಿನಿಮಾ ಸುದ್ದಿ

ಮಾತಿನ ಬರದಲ್ಲಿ ಆಡಿದ್ದು, ನನ್ನನ್ನು ಕ್ಷಮಿಸಿಬಿಡಿ: ನಟ ಜಗ್ಗೇಶ್ ಕ್ಷಮೆ ಕೇಳಿದ್ದು ಯಾರಿಗೆ?

ನಟ ಜಗ್ಗೇಶ್ 61ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಹಂತ ಹಂತವಾಗಿ ಜನರನ್ನು ರಂಜಿಸಿದ್ದಾರೆ. ಚಿತ್ರರಂಗದಲ್ಲಿ ಮೂರು ದಶಗಳಿಗೂ ಹೆಚ್ಚು ಕಾಲ ಹಾಸ್ಯದ ಮೂಲಕ ಮನರಂಜಿಸಿದ ಅದ್ಭುತ ನಟರಲ್ಲಿ ಒಬ್ಬರಾಗಿದ್ದಾರೆ.

ಬೆಂಗಳೂರು: ನಟ ಜಗ್ಗೇಶ್ 61ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಹಂತ ಹಂತವಾಗಿ ಜನರನ್ನು ರಂಜಿಸಿದ್ದಾರೆ. ಚಿತ್ರರಂಗದಲ್ಲಿ ಮೂರು ದಶಗಳಿಗೂ ಹೆಚ್ಚು ಕಾಲ ಹಾಸ್ಯದ ಮೂಲಕ ಮನರಂಜಿಸಿದ ಅದ್ಭುತ ನಟರಲ್ಲಿ ಒಬ್ಬರಾಗಿದ್ದಾರೆ.

ಪ್ರತಿಬಾರಿಯಂತೆ ಈ ಬಾರಿಯೂ ತಮ್ಮ ಹುಟ್ಟುಹಬ್ಬವನ್ನು ಮಂತ್ರಾಲಯದಲ್ಲಿ ಆಚರಿಸಿಕೊಂಡರು. ಇದೇ ವೇಳೆ ಲೈವ್ ವಿಡಿಯೋ ಮಾಡಿದ ಅವರು, ನನ್ನ ಏಳು ಬೀಳುಗಳಿಗೆ, ನನ್ನ ಯಶಸ್ಸಿಗೆ ರಾಯರ ಆಶೀರ್ವಾದ ಕಾರಣ. ಇದೇ ವೇಳೆ ಜನರಲ್ಲಿ ಕ್ಷಮೆಯಾಚಿಸಿದರು.

ಇಂದಿನ ಕಾಲಘಟ್ಟದಲ್ಲಿ ಸಾಮಾಜಿಕ ಜಾಲತಾಣ ಹೆಚ್ಚು ಪ್ರಭಾವಿಯಾಗಿದೆ. ತುಂಬ ದಿನಗಳಿಂದ ಒಂದು ವಿಷಯವನ್ನು ಎಲ್ಲರ ಬಳಿ ಹೇಳಿಕೊಳ್ಳಬೇಕು ಅನಿಸಿತ್ತು. ಅದನ್ನು ಇಂದು ರಾಯರ ಮುಂದೆ ಕುಳಿತು ಕೇಳಿಕೊಳ್ಳುತ್ತಿದ್ದೇನೆ. ಮೈಕ್ ಹಿಡಿದು ಮಾತನಾಡುವಾಗ ಮಾತಿನ ಭರದಲ್ಲಿ ಯಾರಿಗಾದರೂ ನೋವಾಗಿದ್ದರೆ ನನ್ನನ್ನು ಕ್ಷಮಿಸಿಬಿಡಿ. ನಾನು ನಿಮ್ಮ ತಂದೆಯ ವಯಸ್ಸಿನವನು ಅಂದುಕೊಂಡು ಕ್ಷಮಿಸಿ ಎಂದು ಹೇಳಿದ್ದಾರೆ. ಅದನ್ನು ನಿಮ್ಮನ್ನು ನಿಂದಸಬೇಕು ಎಂದು ಆಡಿದ ಮಾತುಗಳಲ್ಲ ಎಂದು ಹೇಳಿದ್ದಾರೆ.

ಈ ಹಿಂದೆ ರಂಗನಾಯಕ ಚಿತ್ರದ ಪ್ರಚಾರದ ವೇಳೆ ಹುಲಿ ಉಗುರು ಪ್ರಕರಣದ ಬಗ್ಗೆ ಮಾತನಾಡುತ್ತಾ, ಬಿಗ್​ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರಿಗೆ ಕಿತ್ತೋದ್​ ನನ್​ ಮಗ ಎಂಬ ಪದ ಬಳಸಿದ್ದರು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಇದೀಗ ಜಗ್ಗೇಶ್ ವರ್ತೂರು ಸಂತೋಷ್ ಹೆಸರು ಹೇಳದೆ ಕ್ಷಮೆ ಕೇಳಿದ್ದಾರೆ.

ಇದೇ ವೇಳೆ ರಂಗನಾಯಕ ಚಿತ್ರದ ಬಗ್ಗೆ ಮಾತಾಡಿದ ಜಗ್ಗೇಶ್​, ನನ್ನು ಇತ್ತೀಚಿನ ಚಿತ್ರ ನಿಮಗೆ ಬೇಸರ ತರಿಸಿದೆ. ಹೀಗಾಗಿ ನೀವು ನನ್ನ ಮೇಲೆ ಬೇಸರ ಮಾಡಿಕೊಳ್ಳಬೇಡಿ. ಅದು ನನ್ನ ಸಿನಿಮಾ ಅಲ್ಲ, ನಿರ್ದೇಶಕನನ್ನು ನಂಬಿ ಹೋಗಿದ್ದೆ. ಅದು ಈ ರೀತಿ ಬಂದಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪಟ್ಟಕ್ಕಾಗಿ ಫೈನಲ್ ಫೈಟ್: ಮೂರು ಷರತ್ತುಗಳನ್ನು ಹೈಕಮಾಂಡ್ ಮುಂದಿಟ್ಟ ಡಿಕೆಶಿ; CM ಹುದ್ದೆಗಾಗಿ ಬಿಗಿಪಟ್ಟು!

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Mekedatu row: ಕರ್ನಾಟಕದ DPR ತಿರಸ್ಕರಿಸಿ; ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಮನವಿ

ಜನಸಂಖ್ಯಾ ಬದಲಾವಣೆ ಪರಿಶೀಲಿಸಲು ಸರ್ಕಾರದಿಂದ ಉನ್ನತ ಮಟ್ಟದ ಸಮಿತಿ

ಬೆಂಗಳೂರು: ಕೆಲಸ ಮಾಡುತ್ತಿದ್ದ ಕಂಪನಿಗೆ ಕನ್ನ! ಚಿನ್ನದ ಗಟ್ಟಿ, ಆಭರಣಗಳನ್ನು ಕದ್ದ 9 ಕಾರ್ಮಿಕರ ಬಂಧನ

SCROLL FOR NEXT